ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಉತ್ತಮ ಪರಿಶುದ್ಧ ವಾತಾವರಣ ನಿರ್ಮಾಣದಲ್ಲಿ ತಾವೆಲ್ಲರೂ ಕೈ ಜೋಡಿಸಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಹಿರೇಬಲ್ಲ ಗ್ರಾಮದ ಹಾಲಿನ ಡೈರಿ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು ಮಾತನಾಡುತ್ತಾ ಯೋಜನೆಯು ಹತ್ತು ಹಲವು ಕಾರ್ಯಕ್ರಮಗಳಲ್ಲಿ ಪರಿಸರ ಕಾರ್ಯಕ್ರಮವು ಒಂದು. ಇಂದಿನ ದಿನ ಆಮ್ಲಜನಕದ ಕೊರತೆಯಿಂದ ಮನುಕುಲವೇ ಪರದಾಡುವಂತಾಗಿದೆ. ಪ್ರತಿಯೊಬ್ಬರು ತಮ್ಮ ಜಮೀನುಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಡುವುದರಿಂದ ಒಳ್ಳೆಯ ಆಮ್ಲಜನಕವನ್ನು ಪಡೆಯಬಹುದೆಂದು ತಿಳಿಸಿದರು. ಹಾಗೂ ಕೊರೋನ ಪರಿಸ್ಥಿತಿಯಲ್ಲಿ ಕ್ಷೇತ್ರದಿಂದ ಪೂಜ್ಯರು ನೀಡಿರುವ ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕದ ಪೂರೈಕೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ರೋಗಿಗಳ ಉಚಿತ ವಾಹನದ ವ್ಯವಸ್ಥೆ ಮಾಡುತ್ತಿರುವುದರ ಬಗ್ಗೆ ತಿಳಿಸಿದರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಉತ್ತಮ ಪರಿಶುದ್ಧ ವಾತಾವರಣ ನಿರ್ಮಾಣದಲ್ಲಿ ತಾವೆಲ್ಲರೂ ಕೈ ಜೋಡಿಸಬೇಕೆಂದು ಕರೆ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ರವರು ಮಾತನಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿಯಾದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಕೊರೋನಾ ವೇಳೆಯಲ್ಲಿ ದಿನಸಿ ಕಿಟ್ ವಿತರಣೆ ರೋಗಿಗಳಿಗೆ ವಾಹನ ವ್ಯವಸ್ಥೆ ನಿರ್ಗತಿಕರಿಗೆ ಮಾಶಾಸನ ವಿತರಣೆ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ವಿತರಣೆ ಇಂತಹ ಕಾರ್ಯಕ್ರಮಗಳ ಜೊತೆಗೆ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಕಾರ್ಯಕ್ರಮ ನಡೆಸುತ್ತಿರುವುದು ಯೋಜನೆಯ ಮಹತ್ವದ ಕಾರ್ಯವಾಗಿದೆ ಎಂದು ತಿಳಿಸಿದರು.

ನಂತರ ಈ ಭಾಗದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಹರೀಶ್ ಗೌಡ ರವರು ಮಾತನಾಡುತ್ತಾ ಧರ್ಮಸ್ಥಳ ಸಂಸ್ಥೆಯು ಜನತೆಗೆ ಆರ್ಥಿಕ ಸಬಲೀಕರಣ ದೊಂದಿಗೆ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಒಂದು ಸರ್ಕಾರೇತರ ಸಂಸ್ಥೆಯು ಸರ್ಕಾರದೊಂದಿಗೆ ಹಲವು ಯೋಜನೆಗಳನ್ನು ಹಾಕಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿದೆ. ಅಲ್ಲದೆ ಗ್ರಾಮದ ಜನರು ತಮ್ಮ ಜಮೀನಿನ ಪಹಣಿ ಗಳನ್ನು ತಂದು ಗ್ರಾಮ ಪಂಚಾಯಿತಿ ಮೂಲಕ ಮನವಿಯನ್ನು ನೀಡಿ. ತಮ್ಮ ಜಮೀನಿನಲ್ಲಿ ಗಿಡಗಳನ್ನು ನೆಡಲು ಅರಣ್ಯ ಇಲಾಖೆ ಇಂದ ಉಚಿತವಾಗಿ ಗಿಡವನ್ನು ದೊರಕಿಸಿಕೊಡುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಡೈರಿ ಅಧ್ಯಕ್ಷರಾದ ರವಿ ರವರು ಯೋಜನೆಯ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಮತ್ತು ಇನ್ನೂ ಪ್ರಗತಿಪರ ಕಾರ್ಯಕ್ರಮಗಳನ್ನು ನಡೆಸುವಂತೆ ಆಶೀಸಿದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಅಶ್ವತಪ್ಪ. ಯಶೋದಮ್ಮ ರೂಪ. ಅಂಗನವಾಡಿ ಶಿಕ್ಷಕಿ ಮಾಲವತಿ. ಆಶಾ ಕಾರ್ಯಕರ್ತೆ ಪ್ರಭಾವತಿ ಧರ್ಮಸ್ಥಳ ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ವೆಂಕಟಲಕ್ಷ್ಮಮ್ಮ ಉಪಾಧ್ಯಕ್ಷರಾದ ಕಾಂತ ಪದಾಧಿಕಾರಿಗಳು ವಲಯದ ಮೇಲ್ವಿಚಾರಕರಾದ ಚೇತನ್ ಸೇವಾ ಪ್ರತಿನಿಧಿ ಉಷಾ. ಹಾಗೂ ಸಂಘದ ಸದಸ್ಯರು .ಗ್ರಾಮಸ್ಥರು ಭಾಗವಹಿಸಿದ್ದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ