ವಿಶೇಷ ಚೇತನರಿಗೆ ಆಶ್ರಯವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ : ಶಾಸಕರಾದ ರಮೇಶ್ ಭೂಸನೂರ

ಸಿಂದಗಿ : ಪ್ರತಿಯೊಂದು ಮನುಷ್ಯನಿಗೆ ಸಮಾಜದಲ್ಲಿ ಸ್ವತಂತ್ರವಾಗಿ ಬದುಕಲು ಹಕ್ಕಿದೆ. ಕೆಲವರಿಗೆ ಈ ಸಾಮರ್ಥ್ಯವಿದ್ದರೆ ಹಲವರು ಸಂತೋಷವನ್ನು ಹುಟ್ಟಿನಿಂದಲೇ, ಯೌವನದಲ್ಲಿ ಅಥವಾ ವೃದ್ಧಾಪ್ಯದಲ್ಲಿ ಬೇರೆ ಬೇರೆ ಕಾರಣಗಳಿಂದ ಕಳೆದುಕೊಂಡಿರುತ್ತಾರೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವಿಕಲತೆ ಸಮಸ್ಯೆಗಳು ಬಂದರೆ ಇನ್ನು ಕೆಲವರಿಗೆ ದುರದೃಷ್ಟವಶಾತ್ ಅಪಘಾತಗಳು, ಮಾರಕ ರೋಗಗಳು ಹಾಗೂ ವಯಸ್ಸಾದಾಗ ಕಾಣಿಸಿಕೊಳ್ಳುತ್ತದೆ. ಇದನ್ನು ಸಂಪೂರ್ಣ ಸರಿಪಡಿಸಲು ಆಗದಿದ್ದರೆ ಕೆಲವೊಂದು ಬದಲಿ ಪರಿಹಾರಗಳಿವೆ. ಈ ಎಲ್ಲಾ ಸಮಸ್ಯೆಗಳನ್ನು ಮನಗಂಡು ಪೂಜ್ಯರು ವಿಶೇಷ ಚೇತನರಿಗೆ ವಿವಿಧ ಸಲಕರಣೆಗಳನ್ನು ನೀಡುವ ಜನಮಂಗಲವೆನ್ನುವ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಕಾರ್ಯಕ್ರಮದಲ್ಲಿ ಗಾಲಿಕುರ್ಚಿ, (ವೀಲ್ ಚಯರ್) ನೀರಹಾಸಿಗೆ (ವಾಟರ್ ಬೆಡ್), ನಡುಗೋಲು, (ಯು ಶೇಪ್ ವಾಕರ್) ಊರುಗೋಲು (ಆಕ್ಸಿಲರಿ ಕ್ರಚಸ್), ಏಕಕಾಲಿನ ಕೈಗೋಲು (ಸಿಂಗಲ್ ಲೆಗ್ ವಾಕಿಂಗ್ ಸ್ಟಿಕ್), ಮೊದಲಾದ ಸಲಕರಣೆಗಳನ್ನು ಮಾನ್ಯ ಶಾಸಕರಾದ ರಮೇಶ್ ಭೂಸನೂರ ರವರಿಂದ ವಿತರಿಸಲಾಯಿತು.

ಈ ಸಂದರ್ಭ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಭೂಸನೂರ ರವರು ಕೊರೋನಾದಂತಹ ತುರ್ತು ಸಂದರ್ಭದಲ್ಲೂ ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನೆಯ ಕಾರ್ಯಕ್ರಮದ ಪರಿಕಲ್ಪನೆಯನ್ನು ನಾನು ಕಣ್ಣಾರೆ ಕಂಡಿದ್ದು ಇದನ್ನು ಮನಸಾರೆ ಕೊಂಡಾಡುತ್ತೇನೆ. ಧರ್ಮಸ್ಥಳ ಪುಣ್ಯ ಕ್ಷೇತ್ರದ ಅಭಯ ಹಸ್ತದ ನೆರಳು ನನ್ನ ವೈಯಕ್ತಿಕ ಸಂಸಾರ ಜೀವನದಲ್ಲೂ ಇದೆ ಎಂದು ತಿಳಿಸುತ್ತಾ, ಸಾಮಾಜಿಕ ಕಳಕಳಿ, ಬಡ ವಿದ್ಯಾರ್ಥಿಗಳಿಗೆ ವಿದ್ಯಾ ದಾನ, ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಸಮಾಜಮುಖಿ ಕೆಲಸಗಳು ಸಮಾಜದ ಅಸಹಾಯಕರು, ನಿರ್ಗತಿಕರು, ದುರ್ಬಲರ ಸೇವೆ ಮಾಡುವುದು ದೇವರ ಸೇವೆ ಎಂದು ತಮ್ಮ ಆಂತರಿಕ ಭಾವನೆಗಳನ್ನು ಹಂಚಿಕೊಂಡರು. ಇನ್ನು ಈ ರೀತಿಯ ಕಾರ್ಯಕ್ರಮಗಳು ಯೋಜನೆಯಿಂದ ಮೂಡಿ ಬರಲಿ ಇದರೊಂದಿಗೆ ನಾವು ಕೈ ಜೋಡಿಸುತ್ತೇವೆ ಎಂದು ಪೂಜ್ಯ ಖಾವಂದರು ದಂಪತಿಗಳಿಗೆ ವಂದಿಸಿದರು.

ಜ್ಞಾನದೀಪ ಶಿಕ್ಷಕರಿಗೆ ಶಾಸಕರಿಂದ ಗೌರವಧನ ವಿತರಣೆ
ಸುಜ್ಞಾನನಿಧಿ ಶಿಷ್ಯವೇತನದ ಮಂಜೂರಾತಿ ಪತ್ರವನ್ನು ಶಾಸಕರು ನೀಡುತ್ತಿರುವುದು.

ಈ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ಆರೋಗ್ಯ ರಕ್ಷಾ ಫಲಾನುಭವಿಗಳು, ಜ್ಞಾನದೀಪ ಶಿಕ್ಷಕರು, ಸುಜ್ಞಾನನಿಧಿ ಫಲಾನುಭವಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಕ್ಷೇತ್ರ ಯೋಜನಾಧಿಕಾರಿಗಳಾದ ಗಿರೀಶ್ ಕುಮಾರ್ ಎಮ್, ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ, ಯೋ!ಜನೆಯ ಕಾರ್ಯ ವೈಖರಿಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಸುಶಾಂತ ಪೂಜಾರಿ ಉಪಸ್ಥಿತರಿದ್ದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ