ವಿಶೇಷ ಚೇತನರಿಗೆ ಆಶ್ರಯವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ : ಶಾಸಕರಾದ ರಮೇಶ್ ಭೂಸನೂರ

ಸಿಂದಗಿ : ಪ್ರತಿಯೊಂದು ಮನುಷ್ಯನಿಗೆ ಸಮಾಜದಲ್ಲಿ ಸ್ವತಂತ್ರವಾಗಿ ಬದುಕಲು ಹಕ್ಕಿದೆ. ಕೆಲವರಿಗೆ ಈ ಸಾಮರ್ಥ್ಯವಿದ್ದರೆ ಹಲವರು ಸಂತೋಷವನ್ನು ಹುಟ್ಟಿನಿಂದಲೇ, ಯೌವನದಲ್ಲಿ ಅಥವಾ ವೃದ್ಧಾಪ್ಯದಲ್ಲಿ ಬೇರೆ ಬೇರೆ ಕಾರಣಗಳಿಂದ ಕಳೆದುಕೊಂಡಿರುತ್ತಾರೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವಿಕಲತೆ ಸಮಸ್ಯೆಗಳು ಬಂದರೆ ಇನ್ನು ಕೆಲವರಿಗೆ ದುರದೃಷ್ಟವಶಾತ್ ಅಪಘಾತಗಳು, ಮಾರಕ ರೋಗಗಳು ಹಾಗೂ ವಯಸ್ಸಾದಾಗ ಕಾಣಿಸಿಕೊಳ್ಳುತ್ತದೆ. ಇದನ್ನು ಸಂಪೂರ್ಣ ಸರಿಪಡಿಸಲು ಆಗದಿದ್ದರೆ ಕೆಲವೊಂದು ಬದಲಿ ಪರಿಹಾರಗಳಿವೆ. ಈ ಎಲ್ಲಾ ಸಮಸ್ಯೆಗಳನ್ನು ಮನಗಂಡು ಪೂಜ್ಯರು ವಿಶೇಷ ಚೇತನರಿಗೆ ವಿವಿಧ ಸಲಕರಣೆಗಳನ್ನು ನೀಡುವ ಜನಮಂಗಲವೆನ್ನುವ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಕಾರ್ಯಕ್ರಮದಲ್ಲಿ ಗಾಲಿಕುರ್ಚಿ, (ವೀಲ್ ಚಯರ್) ನೀರಹಾಸಿಗೆ (ವಾಟರ್ ಬೆಡ್), ನಡುಗೋಲು, (ಯು ಶೇಪ್ ವಾಕರ್) ಊರುಗೋಲು (ಆಕ್ಸಿಲರಿ ಕ್ರಚಸ್), ಏಕಕಾಲಿನ ಕೈಗೋಲು (ಸಿಂಗಲ್ ಲೆಗ್ ವಾಕಿಂಗ್ ಸ್ಟಿಕ್), ಮೊದಲಾದ ಸಲಕರಣೆಗಳನ್ನು ಮಾನ್ಯ ಶಾಸಕರಾದ ರಮೇಶ್ ಭೂಸನೂರ ರವರಿಂದ ವಿತರಿಸಲಾಯಿತು.

ಈ ಸಂದರ್ಭ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಭೂಸನೂರ ರವರು ಕೊರೋನಾದಂತಹ ತುರ್ತು ಸಂದರ್ಭದಲ್ಲೂ ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನೆಯ ಕಾರ್ಯಕ್ರಮದ ಪರಿಕಲ್ಪನೆಯನ್ನು ನಾನು ಕಣ್ಣಾರೆ ಕಂಡಿದ್ದು ಇದನ್ನು ಮನಸಾರೆ ಕೊಂಡಾಡುತ್ತೇನೆ. ಧರ್ಮಸ್ಥಳ ಪುಣ್ಯ ಕ್ಷೇತ್ರದ ಅಭಯ ಹಸ್ತದ ನೆರಳು ನನ್ನ ವೈಯಕ್ತಿಕ ಸಂಸಾರ ಜೀವನದಲ್ಲೂ ಇದೆ ಎಂದು ತಿಳಿಸುತ್ತಾ, ಸಾಮಾಜಿಕ ಕಳಕಳಿ, ಬಡ ವಿದ್ಯಾರ್ಥಿಗಳಿಗೆ ವಿದ್ಯಾ ದಾನ, ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಸಮಾಜಮುಖಿ ಕೆಲಸಗಳು ಸಮಾಜದ ಅಸಹಾಯಕರು, ನಿರ್ಗತಿಕರು, ದುರ್ಬಲರ ಸೇವೆ ಮಾಡುವುದು ದೇವರ ಸೇವೆ ಎಂದು ತಮ್ಮ ಆಂತರಿಕ ಭಾವನೆಗಳನ್ನು ಹಂಚಿಕೊಂಡರು. ಇನ್ನು ಈ ರೀತಿಯ ಕಾರ್ಯಕ್ರಮಗಳು ಯೋಜನೆಯಿಂದ ಮೂಡಿ ಬರಲಿ ಇದರೊಂದಿಗೆ ನಾವು ಕೈ ಜೋಡಿಸುತ್ತೇವೆ ಎಂದು ಪೂಜ್ಯ ಖಾವಂದರು ದಂಪತಿಗಳಿಗೆ ವಂದಿಸಿದರು.

ಜ್ಞಾನದೀಪ ಶಿಕ್ಷಕರಿಗೆ ಶಾಸಕರಿಂದ ಗೌರವಧನ ವಿತರಣೆ
ಸುಜ್ಞಾನನಿಧಿ ಶಿಷ್ಯವೇತನದ ಮಂಜೂರಾತಿ ಪತ್ರವನ್ನು ಶಾಸಕರು ನೀಡುತ್ತಿರುವುದು.

ಈ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ಆರೋಗ್ಯ ರಕ್ಷಾ ಫಲಾನುಭವಿಗಳು, ಜ್ಞಾನದೀಪ ಶಿಕ್ಷಕರು, ಸುಜ್ಞಾನನಿಧಿ ಫಲಾನುಭವಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಕ್ಷೇತ್ರ ಯೋಜನಾಧಿಕಾರಿಗಳಾದ ಗಿರೀಶ್ ಕುಮಾರ್ ಎಮ್, ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ, ಯೋ!ಜನೆಯ ಕಾರ್ಯ ವೈಖರಿಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಸುಶಾಂತ ಪೂಜಾರಿ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 4 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 5 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 10 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 7 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ