ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

ಧರ್ಮಸ್ಥಳ: ಗ್ರಾ ಮೀಣ ಪ್ರದೇಶದ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿ ನಿರ್ಮಾಣಗೊಂಡಿ ರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ ಉದ್ಘಾಟನಾ ಸಮಾರಂಭ ಮೇ 31ರಂದು ಬೆಳಗ್ಗೆ 10 ಗಂಟೆಗೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ನ್ನು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಉದ್ಘಾಟಿಸುವರು. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಗೌರವ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಸಿರಿ ಸಂಸ್ಥೆಯ ಅಧ್ಯಕ್ಷೆ ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾ‌ರ್, ರಾಜ್ಯಸಭೆ ಕಾರ್ಯದರ್ಶಿ ಡಾ.ಕೆ.ಎಸ್.ಸೋಮ ಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸ್ವಾವಲಂಬಿ ಬದುಕಿಗೆ ಶಕ್ತಿ ನೀಡಿದ ಸಿರಿ ಗ್ರಾಮೋದ್ಯೋಗ ಸಂಸ್ಥೆ:

ಧರ್ಮಸ್ಥಳಸಿರಿ ಗ್ರಾಮೋದ್ಯೋಗ ಸಂಸ್ಥೆಯು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆ ಅವರ ಕನಸಿನ ಕೂಸು. ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸ್ಥಾಪನೆಗೊಂಡ ಈ ಸಂಸ್ಥೆ ಇಂದು ಅಕ್ಷರಶಃ ಉದ್ಯೋಗ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದೆ. ಐದು ಸಾವಿರಕ್ಕೂ ಹೆಚ್ಚು ಕುಟುಂಬಗಳ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಬೆಳ್ತಂಗಡಿ ಮತ್ತು ಸುತ್ತಮುತ್ತಲ ಊರಿನ ಮಹಿಳೆಯರು ಇಂದು ಭರವಸೆಯ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಿರಿ ಉತ್ಪನ್ನಗಳು ಇಂದು ರಾಜ್ಯವ್ಯಾಪಿ ಜನಪ್ರಿಯವಾಗಿವೆ.ಆಕರ್ಷಕ ಬೆಲೆ ಮತ್ತು ಗುಣಮಟ್ಟದ ಉತ್ಪನ್ನಗಳಿಂದ ಗ್ರಾಹಕರ ವಿಶ್ವಾಸ ಗಳಿಸಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಪ್ರದೇಶದಲ್ಲಿ 2004ರಲ್ಲಿ ಸ್ಥಾಪನೆಯಾದ ಸಿರಿ ಸಂಸ್ಥೆ ವಿಶೇಷ ಸ್ಥಾನ ಪಡೆದಿದೆ. ವಿಶೇಷ ಅನುಭವ, ಪರಿಣತಿ ಇಲ್ಲದ ಗ್ರಾಮೀಣ ಮಹಿಳೆಯರಿಗೆ ವೇತನ ಸಹಿತವಾಗಿ ತರಬೇತಿ ನೀಡಿ ಅವರಿಂದ ಉತ್ತಮ ಗುಣಮಟ್ಟದ ಸಿದ್ದ ಉಡುಪು ಉತ್ಪನ್ನ, ಫಿನಾಯಿಲ್, ಅಗರಬತ್ತಿ, ಜೂಸ್, ಉಪ್ಪಿನಕಾಯಿ ಸಹಿತ ಹಲವು ಬಗೆಯ ಗೃಹೋಪಯೋಗಿ ಉತ್ಪನ್ನಗಳನ್ನು ತಯಾರಿಸುತ್ತಿದೆ.

ಸಿರಿಯ ಉತ್ಪನ್ನಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಬಳಿ 7 ಎಕ್ರೆ ನಿವೇಶನದಲ್ಲಿ 1.50 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ, ಬೃಹತ್ ಕಟ್ಟಡ ನಿರ್ಮಿಸಿ ಅತ್ಯಾಧುನಿಕ ಯಂತ್ರೋಪಕರಣ ಅಳವಡಿಸಲಾಗಿದೆ.

ಸಿರಿ ಸಂಸ್ಥೆಯ ಕೆಲಸಕ್ಕೆ ಆಗಮಿಸುವ ಸಿಬ್ಬಂದಿಗೆ ಎರಡು ಉಚಿತ ಬಸ್ ವ್ಯವಸ್ಥೆ ಇದೆ. ದೂರದ ಊರಿನ ಮಹಿಳೆಯರಿಗಾಗಿ ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ ಇದೆ. 11 ವಸತಿ ಗೃಹಗಳು, ಜಿಮ್ ಇಕ್ಯುಪ್‌ಮೆಂಟ್, ಮೆಡಿಟೇಷನ್, ಕೊಠಡಿ ಸೌಲಭ್ಯ ಇದೆ. ಸಂಸ್ಥೆಯಲ್ಲಿ ಶೇ.90 ಮಹಿಳಾ ಸಿಬ್ಬಂದಿ ಇದ್ದು, ಪುಟ್ಟ ಮಕ್ಕಳ ಪಾಲನೆಗೆ ಸಂಸ್ಥೆಯಲ್ಲಿ ಶಿಶು ವಿಹಾರ ಕೇಂದ್ರ ಇದೆ. ಸಂಸ್ಥೆಯ ಪ್ರವೇಶ ದ್ವಾರದ ಬಳಿ ಸಿರಿ ಉತ್ಪನ್ನಗಳ ಮಾರಾಟ ಮಳಿಗೆ ಸಿರಿ ಕೆಫೆ ತೆರೆಯಲಾಗಿದೆ.

Spread the love
  • Related Posts

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ಬೆಂಗಳೂರು: ಮಾಸ್ಕ್ ಧರಿಸಿ ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ರಾತ್ರಿ ದಿಢೀರ್ ಸಿಟಿ ರೌಂಡ್ಸ್ ಕೈಗೊಂಡು ಪ್ರಯಾಣಿಕನ ಸೋಗಿನಲ್ಲಿ BMTC ಬಸ್ ಗಳ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ವೇಳೆ ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್ ನಿಂದ…

    Spread the love

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬೆಳ್ತಂಗಡಿ, ಜು. 8: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆಯಾಗಿ, ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಹಾಗೂ ಬೆಳ್ತಂಗಡಿ ಕಸಬಾದ ಹಳೆಕೋಟೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ…

    Spread the love

    You Missed

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 5 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 9 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 19 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 38 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    • By admin
    • July 12, 2026
    • 87 views
    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    • By admin
    • July 11, 2026
    • 37 views
    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ