ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳು ಲೋಕಾರ್ಪಣೆ

ಬೆಂಗಳೂರು:‌ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ನಟ ರಮೇಶ್ ಅರವಿಂದ್, ನಟಿ ತಾರಾ ಅನುರಾಧ, ಶಾಸಕ ಹರೀಶ್ ಪೂಂಜಾ ಶ್ರೀಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಹೊರ ತಂದಿರುವ 11 ಬಗೆಯ ಸಿರಿ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಸಿರಿ ಸಂಸ್ಥೆ 13 ಸ್ವಂತ ಮಳಿಗೆ ಹಾಗೂ 300 ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿದೆ. 2 ಸಾವಿರ ಹಳ್ಳಿಯ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಧರ್ಮಸ್ಥಳದ ಸಿರಿ ಸಂಸ್ಥೆ ಪ್ಯಾಕೇಟ್ ಮಾಡಿ, ಮಾರುಕಟ್ಟೆಗೆ ಒದಗಿಸುತ್ತಿದೆ. ರಾಜ್ಯದ ಯಾವುದೇ ಹಳ್ಳಿಯ ಮಹಿಳೆಯರು ಉತ್ಪನ್ನಗಳನ್ನು ತಯಾರಿಸಿ ನೀಡಿದರೆ ಸಿರಿ ಸಂಸ್ಥೆ ಮಾರುಕಟ್ಟೆ ಒದಗಿಸಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದರು.

ನಟ ರಮೇಶ್ ಅರವಿಂದ್ ಮಾತನಾಡಿ, ಬ್ರಾಂಡ್, ಬ್ರಾಂಡ್ ವಾಲ್ಯೂ ಹಾಗೂ ಅದರ ಉದ್ದೇಶ, ತಿಳಿದು ಸಿರಿಯ ಉತ್ಪನ್ನವನ್ನು ಕೊಳ್ಳಬೇಕು. ಇದರಿಂದ ಹಳ್ಳಿಯ ಕುಟುಂಬ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ‌ನಟಿ ತಾರಾ ಅನುರಾಧ ಮಾತನಾಡಿ, ಸಿರಿ ಸಂಸ್ಥೆ ಸ್ತ್ರೀ ಕಲ್ಯಾಣಕ್ಕಾಗಿ ಇದೆ. ಮಹಿಳೆಯರಿಗೆ ಆರ್ಥಿಕವಾಗಿ, ಸ್ವಾಭಿಮಾನಕ್ಕಾಗಿ ಇರುವ ಸಂಸ್ಥೆ. ಗ್ರಾಮೋದ್ಯೋಗ, ಕರಕುಶಲ ಗಾಂಧೀಜಿಯವರ ಕನಸು, ಪ್ರಧಾನಿಯವರ ಆತ್ಮ ನಿರ್ಭರ ಭಾರತ ಇವೆಲ್ಲವನ್ನು ರಾಜ್ಯದಲ್ಲಿ ಜಾರಿಗೆ ತಂದವರು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಂದರು.

ಸಿರಿ‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಜನಾರ್ಧನ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಿರಿ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟ, ಕಡಿಮೆ ಬೆಲೆಯಲ್ಲಿ ರಾಜ್ಯಾದ್ಯಂತ ಲಭ್ಯವಿದೆ‌. ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ 2004 ರಲ್ಲಿ 20 ಲಕ್ಷ ರೂ. ಬಂಡವಾಳದೊಂದಿಗೆ, ಎರಡು ಸಾವಿರ ಮಹಿಳೆಯರು ಆರಂಭಿಸಿದ ಈ ಸಂಸ್ಥೆ ಈಗ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದೆ. ಸಿರಿ ಸಂಸ್ಥೆ 295 ಹಳ್ಳಿ ಕೇಂದ್ರಗಳಲ್ಲಿ ಉತ್ಪಾದನಾ ಕೇಂದ್ರ ಆರಂಭಿಸಿದೆ ಎಂದರು.

ಲೋಕಾರ್ಪಣೆಯಾದ ಸಿರಿ‌ ಉತ್ಪನ್ನಗಳು:
ಸಿರಿಯ ನೂತನ ಉತ್ಪನ್ನಗಳಾದ ಮೆಣಸಿನ ಪುಡಿ, ಗರಂ ಮಸಾಲ, ರಸಂ ಪುಡಿ, ಸಾಂಬಾರು ಪುಡಿ, ಪುಳಿಯೋಗರೆ, ಬಿಸಿಬೆಳೆಬಾತ್ ಪುಡಿ, ಉಪ್ಮಾ ರೆಡಿ ಮಿಕ್ಸ್, ರವಾ ಇಡ್ಲಿ ಮಿಕ್ಸ್, ಬಾದಾಮ್ ಮಿಕ್ಸ್, ಪುಲಾವ್ ಮಸಾಲ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ಟ್ರಸ್ಟಿಗಳಾದ ಶ್ರದ್ಧಾ ಅಮಿತ್, ರಾಮಸ್ವಾಮಿ, ಅರೇಕಾ ಟೀ ಸಂಸ್ಥೆಯ ಸ್ಥಾಪಕ ನಿವೇದನ್ ನೆಂಪೆ, ಕುಸುಮ ದೇವಾಡಿಗ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಿರಿ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ್, ವಿನ್ಸೆಂಟ್ ಲೋಬೋ ಹಾಗೂ ಸುಧಾಕರ್ ಸಹಕರಿಸಿದರು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 33 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 78 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 192 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ