ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳು ಲೋಕಾರ್ಪಣೆ

ಬೆಂಗಳೂರು:‌ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ನಟ ರಮೇಶ್ ಅರವಿಂದ್, ನಟಿ ತಾರಾ ಅನುರಾಧ, ಶಾಸಕ ಹರೀಶ್ ಪೂಂಜಾ ಶ್ರೀಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಹೊರ ತಂದಿರುವ 11 ಬಗೆಯ ಸಿರಿ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಸಿರಿ ಸಂಸ್ಥೆ 13 ಸ್ವಂತ ಮಳಿಗೆ ಹಾಗೂ 300 ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿದೆ. 2 ಸಾವಿರ ಹಳ್ಳಿಯ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಧರ್ಮಸ್ಥಳದ ಸಿರಿ ಸಂಸ್ಥೆ ಪ್ಯಾಕೇಟ್ ಮಾಡಿ, ಮಾರುಕಟ್ಟೆಗೆ ಒದಗಿಸುತ್ತಿದೆ. ರಾಜ್ಯದ ಯಾವುದೇ ಹಳ್ಳಿಯ ಮಹಿಳೆಯರು ಉತ್ಪನ್ನಗಳನ್ನು ತಯಾರಿಸಿ ನೀಡಿದರೆ ಸಿರಿ ಸಂಸ್ಥೆ ಮಾರುಕಟ್ಟೆ ಒದಗಿಸಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದರು.

ನಟ ರಮೇಶ್ ಅರವಿಂದ್ ಮಾತನಾಡಿ, ಬ್ರಾಂಡ್, ಬ್ರಾಂಡ್ ವಾಲ್ಯೂ ಹಾಗೂ ಅದರ ಉದ್ದೇಶ, ತಿಳಿದು ಸಿರಿಯ ಉತ್ಪನ್ನವನ್ನು ಕೊಳ್ಳಬೇಕು. ಇದರಿಂದ ಹಳ್ಳಿಯ ಕುಟುಂಬ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ‌ನಟಿ ತಾರಾ ಅನುರಾಧ ಮಾತನಾಡಿ, ಸಿರಿ ಸಂಸ್ಥೆ ಸ್ತ್ರೀ ಕಲ್ಯಾಣಕ್ಕಾಗಿ ಇದೆ. ಮಹಿಳೆಯರಿಗೆ ಆರ್ಥಿಕವಾಗಿ, ಸ್ವಾಭಿಮಾನಕ್ಕಾಗಿ ಇರುವ ಸಂಸ್ಥೆ. ಗ್ರಾಮೋದ್ಯೋಗ, ಕರಕುಶಲ ಗಾಂಧೀಜಿಯವರ ಕನಸು, ಪ್ರಧಾನಿಯವರ ಆತ್ಮ ನಿರ್ಭರ ಭಾರತ ಇವೆಲ್ಲವನ್ನು ರಾಜ್ಯದಲ್ಲಿ ಜಾರಿಗೆ ತಂದವರು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಂದರು.

ಸಿರಿ‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಜನಾರ್ಧನ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಿರಿ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟ, ಕಡಿಮೆ ಬೆಲೆಯಲ್ಲಿ ರಾಜ್ಯಾದ್ಯಂತ ಲಭ್ಯವಿದೆ‌. ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ 2004 ರಲ್ಲಿ 20 ಲಕ್ಷ ರೂ. ಬಂಡವಾಳದೊಂದಿಗೆ, ಎರಡು ಸಾವಿರ ಮಹಿಳೆಯರು ಆರಂಭಿಸಿದ ಈ ಸಂಸ್ಥೆ ಈಗ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದೆ. ಸಿರಿ ಸಂಸ್ಥೆ 295 ಹಳ್ಳಿ ಕೇಂದ್ರಗಳಲ್ಲಿ ಉತ್ಪಾದನಾ ಕೇಂದ್ರ ಆರಂಭಿಸಿದೆ ಎಂದರು.

ಲೋಕಾರ್ಪಣೆಯಾದ ಸಿರಿ‌ ಉತ್ಪನ್ನಗಳು:
ಸಿರಿಯ ನೂತನ ಉತ್ಪನ್ನಗಳಾದ ಮೆಣಸಿನ ಪುಡಿ, ಗರಂ ಮಸಾಲ, ರಸಂ ಪುಡಿ, ಸಾಂಬಾರು ಪುಡಿ, ಪುಳಿಯೋಗರೆ, ಬಿಸಿಬೆಳೆಬಾತ್ ಪುಡಿ, ಉಪ್ಮಾ ರೆಡಿ ಮಿಕ್ಸ್, ರವಾ ಇಡ್ಲಿ ಮಿಕ್ಸ್, ಬಾದಾಮ್ ಮಿಕ್ಸ್, ಪುಲಾವ್ ಮಸಾಲ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ಟ್ರಸ್ಟಿಗಳಾದ ಶ್ರದ್ಧಾ ಅಮಿತ್, ರಾಮಸ್ವಾಮಿ, ಅರೇಕಾ ಟೀ ಸಂಸ್ಥೆಯ ಸ್ಥಾಪಕ ನಿವೇದನ್ ನೆಂಪೆ, ಕುಸುಮ ದೇವಾಡಿಗ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಿರಿ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ್, ವಿನ್ಸೆಂಟ್ ಲೋಬೋ ಹಾಗೂ ಸುಧಾಕರ್ ಸಹಕರಿಸಿದರು.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 12 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 23 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 12 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 16 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 12 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ