ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವದುರ್ಗಾ ತಾಲೂಕಿಗೆ 23 ಜ್ಞಾನದೀಪ ಶಿಕ್ಷಕರ ಒದಗಣೆ / ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು: ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ

ದೇವದುರ್ಗಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ “ಜ್ಞಾನದೀಪ” ಕಾರ್ಯಕ್ರಮದಡಿಯಲ್ಲಿ ದೇವದುರ್ಗಾ ತಾಲೂಕಿನ ಗ್ರಾಮೀಣ ಸರಕಾರಿ ಶಾಲೆಯ ಶಿಕ್ಷಕರ ಸಮಸ್ಯೆ ಸರಿದೂಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ತಾಲುಕಿನ 23 ಸರಕಾರಿ ಶಾಲೆಗೆ ಜ್ಞಾನದೀಪ ಶಿಕ್ಷಕರನ್ನು ನೇಮಕ ಮಾಡಿರುತ್ತಾರೆ.

ಜ್ಞಾನದೀಪ ಶಿಕ್ಷಕರ ಆದೇಶ ಪತ್ರ ವಿತರಣಾ ಕಾರ್ಯಕ್ರಮವನ್ನು ಶಿಕ್ಷಕರ ತರಬೇತಿ ಕೇಂದ್ರದಲ್ಲಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ ರವರು ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಜ್ಞಾನದೀಪ ಶಿಕ್ಷಕರ ಆಯ್ಕೆಯ ಆದೇಶ ಪತ್ರವನ್ನು ನೀಡಿ ಮಾತನಾಡಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿಯವರು ಮಾಡುತ್ತಿರುವ ಸಮಾಜೋನ್ಮುಖ ಕಾರ್ಯಗಳು ಬಹಳಷ್ಟು ಯಶಸ್ವಿಯಾಗಿದ್ದು ಧಾರ್ಮಿಕ ಶೈಕ್ಷಣಿಕ, ಸಮುದಾಯ, ಆರೋಗ್ಯ,ಆರ್ಥಿಕ, ಮಹಿಳಾಸಬಲೀಕರಣ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಬಡ ಕುಟುಂಬಗಳಿಗೆ ನೆರವಿನ ಆಸರೆ ನೀಡುತ್ತಿದ್ದು ಇದೀಗ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯಾದ್ಯಾಂತ ಜ್ಞಾನದೀಪ ಶಿಕ್ಷಕರ ಒದಗಣೆ ಮಾಡುತ್ತಿದ್ದು ಅದರಲ್ಲೂ ತಾಲೂಕಿಗೆ 23 ಶಿಕ್ಷಕರನ್ನು ನೀಡಿರುವುದು ನಮಗೆಲ್ಲ ಹೆಮ್ಮೆಯ ವಿಚಾರ
ಶಿಕ್ಷಕರು ಶ್ರದ್ಧೆ, ನಿಷ್ಠೆಯಿಂದ ಸೇವೆ ಸಲ್ಲಿಸಬೇಕು, ಮಕ್ಕಳನ್ನು ಒಲಿಸಿ ಕಲಿಸುವ ಕಲೆ ಕರಗತ ಮಾಡಿಕೊಂಡು, ಸಮಯ ಪ್ರಜ್ಞೆ, ಶಿಸ್ತಿನಿಂದ ಮಾದರಿಯಾಗಿ ಮಕ್ಕಳನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸಬೇಕು. ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶಾಲೆ-ಕಾಲೇಜ್‌ಗಳಿಗೆ ಬೆಂಚ್, ಡೆಸ್ಕ್ ವಿತರಣೆ, ಪ್ರಾಥಮಿಕ ಶಾಲೆ ಕಟ್ಟಡಗಳಿಗೆ ಸಹಾಯಧನ, ಪ್ರಾಥಮಿಕ ಶಿಕ್ಷಣಕ್ಕೆ ಟ್ಯಾಬ್, ಪ್ರೌಢ ಶಿಕ್ಷಣಕ್ಕೆ ಲ್ಯಾಪ್‌ಟಾಪ್, ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಸಂಜೆ ಮತ್ತು ಬೆಳಗಿನ ಸಮಯ ವಿಶೇಷ ಟ್ಯೂಷನ್ ಕ್ಲಾಸ್ ಮಾಡುವ ಮೂಲಕ ಶಿಕ್ಷಣ ಕ್ರಾಂತಿ ಮಾಡುತಿದ್ದಾರೆ. ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ಸ್ವಯಂ ಸೇವಾ ಶಿಕ್ಷಕರು ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡಬೇಕು ರಾಜ್ಯಾದ್ಯಾಂತ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿದ್ದು, ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸೇವೆ ಎಂದು ಭಾವಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಶಿಕ್ಷಣ ಸಂಯೋಜಕರಾದ ನರಸಯ್ಯ ಪಾಟೀಲ್, ಗ್ರಾಮಾಭಿವೃದ್ಧಿಯೋಜನೆಯ ತಾಲೂಕು ಯೋಜನಾಧಿಕಾರಿ ರಾಜೇಶ.ಎಂ.ಕಾನರ್ಪ, ಆಜೀಂ ಫೌಂಡೇಶನ್ ನ ತರಬೇತುದಾರ ರಮೇಶ್, ಹಾಗೂ ಶಾಲಾ ಶಿಕ್ಷಕರು ಮತ್ತು ಜ್ಞಾನದೀಪ ಶಿಕ್ಷಕರಾಗಿ ಆಯ್ಕೆಯಾದ ಶಿಕ್ಷಕರು ಉಪಸ್ಥಿತರಿದ್ದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 5 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 17 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು