ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವದುರ್ಗಾ ತಾಲೂಕಿಗೆ 23 ಜ್ಞಾನದೀಪ ಶಿಕ್ಷಕರ ಒದಗಣೆ / ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು: ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ

ದೇವದುರ್ಗಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ “ಜ್ಞಾನದೀಪ” ಕಾರ್ಯಕ್ರಮದಡಿಯಲ್ಲಿ ದೇವದುರ್ಗಾ ತಾಲೂಕಿನ ಗ್ರಾಮೀಣ ಸರಕಾರಿ ಶಾಲೆಯ ಶಿಕ್ಷಕರ ಸಮಸ್ಯೆ ಸರಿದೂಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ತಾಲುಕಿನ 23 ಸರಕಾರಿ ಶಾಲೆಗೆ ಜ್ಞಾನದೀಪ ಶಿಕ್ಷಕರನ್ನು ನೇಮಕ ಮಾಡಿರುತ್ತಾರೆ.

ಜ್ಞಾನದೀಪ ಶಿಕ್ಷಕರ ಆದೇಶ ಪತ್ರ ವಿತರಣಾ ಕಾರ್ಯಕ್ರಮವನ್ನು ಶಿಕ್ಷಕರ ತರಬೇತಿ ಕೇಂದ್ರದಲ್ಲಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ ರವರು ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಜ್ಞಾನದೀಪ ಶಿಕ್ಷಕರ ಆಯ್ಕೆಯ ಆದೇಶ ಪತ್ರವನ್ನು ನೀಡಿ ಮಾತನಾಡಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿಯವರು ಮಾಡುತ್ತಿರುವ ಸಮಾಜೋನ್ಮುಖ ಕಾರ್ಯಗಳು ಬಹಳಷ್ಟು ಯಶಸ್ವಿಯಾಗಿದ್ದು ಧಾರ್ಮಿಕ ಶೈಕ್ಷಣಿಕ, ಸಮುದಾಯ, ಆರೋಗ್ಯ,ಆರ್ಥಿಕ, ಮಹಿಳಾಸಬಲೀಕರಣ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಬಡ ಕುಟುಂಬಗಳಿಗೆ ನೆರವಿನ ಆಸರೆ ನೀಡುತ್ತಿದ್ದು ಇದೀಗ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯಾದ್ಯಾಂತ ಜ್ಞಾನದೀಪ ಶಿಕ್ಷಕರ ಒದಗಣೆ ಮಾಡುತ್ತಿದ್ದು ಅದರಲ್ಲೂ ತಾಲೂಕಿಗೆ 23 ಶಿಕ್ಷಕರನ್ನು ನೀಡಿರುವುದು ನಮಗೆಲ್ಲ ಹೆಮ್ಮೆಯ ವಿಚಾರ
ಶಿಕ್ಷಕರು ಶ್ರದ್ಧೆ, ನಿಷ್ಠೆಯಿಂದ ಸೇವೆ ಸಲ್ಲಿಸಬೇಕು, ಮಕ್ಕಳನ್ನು ಒಲಿಸಿ ಕಲಿಸುವ ಕಲೆ ಕರಗತ ಮಾಡಿಕೊಂಡು, ಸಮಯ ಪ್ರಜ್ಞೆ, ಶಿಸ್ತಿನಿಂದ ಮಾದರಿಯಾಗಿ ಮಕ್ಕಳನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸಬೇಕು. ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶಾಲೆ-ಕಾಲೇಜ್‌ಗಳಿಗೆ ಬೆಂಚ್, ಡೆಸ್ಕ್ ವಿತರಣೆ, ಪ್ರಾಥಮಿಕ ಶಾಲೆ ಕಟ್ಟಡಗಳಿಗೆ ಸಹಾಯಧನ, ಪ್ರಾಥಮಿಕ ಶಿಕ್ಷಣಕ್ಕೆ ಟ್ಯಾಬ್, ಪ್ರೌಢ ಶಿಕ್ಷಣಕ್ಕೆ ಲ್ಯಾಪ್‌ಟಾಪ್, ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಸಂಜೆ ಮತ್ತು ಬೆಳಗಿನ ಸಮಯ ವಿಶೇಷ ಟ್ಯೂಷನ್ ಕ್ಲಾಸ್ ಮಾಡುವ ಮೂಲಕ ಶಿಕ್ಷಣ ಕ್ರಾಂತಿ ಮಾಡುತಿದ್ದಾರೆ. ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ಸ್ವಯಂ ಸೇವಾ ಶಿಕ್ಷಕರು ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡಬೇಕು ರಾಜ್ಯಾದ್ಯಾಂತ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿದ್ದು, ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸೇವೆ ಎಂದು ಭಾವಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಶಿಕ್ಷಣ ಸಂಯೋಜಕರಾದ ನರಸಯ್ಯ ಪಾಟೀಲ್, ಗ್ರಾಮಾಭಿವೃದ್ಧಿಯೋಜನೆಯ ತಾಲೂಕು ಯೋಜನಾಧಿಕಾರಿ ರಾಜೇಶ.ಎಂ.ಕಾನರ್ಪ, ಆಜೀಂ ಫೌಂಡೇಶನ್ ನ ತರಬೇತುದಾರ ರಮೇಶ್, ಹಾಗೂ ಶಾಲಾ ಶಿಕ್ಷಕರು ಮತ್ತು ಜ್ಞಾನದೀಪ ಶಿಕ್ಷಕರಾಗಿ ಆಯ್ಕೆಯಾದ ಶಿಕ್ಷಕರು ಉಪಸ್ಥಿತರಿದ್ದರು.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ