ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವದುರ್ಗಾ ತಾಲೂಕಿಗೆ 23 ಜ್ಞಾನದೀಪ ಶಿಕ್ಷಕರ ಒದಗಣೆ / ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು: ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ

ದೇವದುರ್ಗಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ “ಜ್ಞಾನದೀಪ” ಕಾರ್ಯಕ್ರಮದಡಿಯಲ್ಲಿ ದೇವದುರ್ಗಾ ತಾಲೂಕಿನ ಗ್ರಾಮೀಣ ಸರಕಾರಿ ಶಾಲೆಯ ಶಿಕ್ಷಕರ ಸಮಸ್ಯೆ ಸರಿದೂಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ತಾಲುಕಿನ 23 ಸರಕಾರಿ ಶಾಲೆಗೆ ಜ್ಞಾನದೀಪ ಶಿಕ್ಷಕರನ್ನು ನೇಮಕ ಮಾಡಿರುತ್ತಾರೆ.

ಜ್ಞಾನದೀಪ ಶಿಕ್ಷಕರ ಆದೇಶ ಪತ್ರ ವಿತರಣಾ ಕಾರ್ಯಕ್ರಮವನ್ನು ಶಿಕ್ಷಕರ ತರಬೇತಿ ಕೇಂದ್ರದಲ್ಲಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ ರವರು ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಜ್ಞಾನದೀಪ ಶಿಕ್ಷಕರ ಆಯ್ಕೆಯ ಆದೇಶ ಪತ್ರವನ್ನು ನೀಡಿ ಮಾತನಾಡಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿಯವರು ಮಾಡುತ್ತಿರುವ ಸಮಾಜೋನ್ಮುಖ ಕಾರ್ಯಗಳು ಬಹಳಷ್ಟು ಯಶಸ್ವಿಯಾಗಿದ್ದು ಧಾರ್ಮಿಕ ಶೈಕ್ಷಣಿಕ, ಸಮುದಾಯ, ಆರೋಗ್ಯ,ಆರ್ಥಿಕ, ಮಹಿಳಾಸಬಲೀಕರಣ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಬಡ ಕುಟುಂಬಗಳಿಗೆ ನೆರವಿನ ಆಸರೆ ನೀಡುತ್ತಿದ್ದು ಇದೀಗ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯಾದ್ಯಾಂತ ಜ್ಞಾನದೀಪ ಶಿಕ್ಷಕರ ಒದಗಣೆ ಮಾಡುತ್ತಿದ್ದು ಅದರಲ್ಲೂ ತಾಲೂಕಿಗೆ 23 ಶಿಕ್ಷಕರನ್ನು ನೀಡಿರುವುದು ನಮಗೆಲ್ಲ ಹೆಮ್ಮೆಯ ವಿಚಾರ
ಶಿಕ್ಷಕರು ಶ್ರದ್ಧೆ, ನಿಷ್ಠೆಯಿಂದ ಸೇವೆ ಸಲ್ಲಿಸಬೇಕು, ಮಕ್ಕಳನ್ನು ಒಲಿಸಿ ಕಲಿಸುವ ಕಲೆ ಕರಗತ ಮಾಡಿಕೊಂಡು, ಸಮಯ ಪ್ರಜ್ಞೆ, ಶಿಸ್ತಿನಿಂದ ಮಾದರಿಯಾಗಿ ಮಕ್ಕಳನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸಬೇಕು. ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶಾಲೆ-ಕಾಲೇಜ್‌ಗಳಿಗೆ ಬೆಂಚ್, ಡೆಸ್ಕ್ ವಿತರಣೆ, ಪ್ರಾಥಮಿಕ ಶಾಲೆ ಕಟ್ಟಡಗಳಿಗೆ ಸಹಾಯಧನ, ಪ್ರಾಥಮಿಕ ಶಿಕ್ಷಣಕ್ಕೆ ಟ್ಯಾಬ್, ಪ್ರೌಢ ಶಿಕ್ಷಣಕ್ಕೆ ಲ್ಯಾಪ್‌ಟಾಪ್, ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಸಂಜೆ ಮತ್ತು ಬೆಳಗಿನ ಸಮಯ ವಿಶೇಷ ಟ್ಯೂಷನ್ ಕ್ಲಾಸ್ ಮಾಡುವ ಮೂಲಕ ಶಿಕ್ಷಣ ಕ್ರಾಂತಿ ಮಾಡುತಿದ್ದಾರೆ. ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ಸ್ವಯಂ ಸೇವಾ ಶಿಕ್ಷಕರು ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡಬೇಕು ರಾಜ್ಯಾದ್ಯಾಂತ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿದ್ದು, ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸೇವೆ ಎಂದು ಭಾವಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಶಿಕ್ಷಣ ಸಂಯೋಜಕರಾದ ನರಸಯ್ಯ ಪಾಟೀಲ್, ಗ್ರಾಮಾಭಿವೃದ್ಧಿಯೋಜನೆಯ ತಾಲೂಕು ಯೋಜನಾಧಿಕಾರಿ ರಾಜೇಶ.ಎಂ.ಕಾನರ್ಪ, ಆಜೀಂ ಫೌಂಡೇಶನ್ ನ ತರಬೇತುದಾರ ರಮೇಶ್, ಹಾಗೂ ಶಾಲಾ ಶಿಕ್ಷಕರು ಮತ್ತು ಜ್ಞಾನದೀಪ ಶಿಕ್ಷಕರಾಗಿ ಆಯ್ಕೆಯಾದ ಶಿಕ್ಷಕರು ಉಪಸ್ಥಿತರಿದ್ದರು.

Spread the love
  • Related Posts

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಲೋಕಾರ್ಪಣೆಯನ್ನು ಮೇ 31ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಅನ್ನು ಇಂದು ಭವ್ಯ ಸಮಾರಂಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು…

    Spread the love

    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ D. K. Shivakumar ಅವರಿಗೆ ಸರ್ಕಾರ ರಚಿಸಲು ರಾಜ್ಯಪಾಲ Thaawarchand Gehlot ಅಧಿಕೃತ ಆಹ್ವಾನ ನೀಡಲಾಗಿದೆ. ಮೇ 30, 2026ರಂದು ರಾಜ್ಯಪಾಲರು ಹೊರಡಿಸಿರುವ ಪತ್ರದಲ್ಲಿ, ಡಿ.ಕೆ. ಶಿವಕುಮಾರ್ ಅವರು ಸರ್ಕಾರ ರಚಿಸಲು…

    Spread the love

    You Missed

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    • By admin
    • May 31, 2026
    • 18 views
    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    • By admin
    • May 30, 2026
    • 30 views
    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

    • By admin
    • May 30, 2026
    • 87 views
    ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 68 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2376 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 622 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,