ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವದುರ್ಗಾ ತಾಲೂಕಿಗೆ 23 ಜ್ಞಾನದೀಪ ಶಿಕ್ಷಕರ ಒದಗಣೆ / ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು: ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ

ದೇವದುರ್ಗಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ “ಜ್ಞಾನದೀಪ” ಕಾರ್ಯಕ್ರಮದಡಿಯಲ್ಲಿ ದೇವದುರ್ಗಾ ತಾಲೂಕಿನ ಗ್ರಾಮೀಣ ಸರಕಾರಿ ಶಾಲೆಯ ಶಿಕ್ಷಕರ ಸಮಸ್ಯೆ ಸರಿದೂಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ತಾಲುಕಿನ 23 ಸರಕಾರಿ ಶಾಲೆಗೆ ಜ್ಞಾನದೀಪ ಶಿಕ್ಷಕರನ್ನು ನೇಮಕ ಮಾಡಿರುತ್ತಾರೆ.

ಜ್ಞಾನದೀಪ ಶಿಕ್ಷಕರ ಆದೇಶ ಪತ್ರ ವಿತರಣಾ ಕಾರ್ಯಕ್ರಮವನ್ನು ಶಿಕ್ಷಕರ ತರಬೇತಿ ಕೇಂದ್ರದಲ್ಲಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ ರವರು ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಜ್ಞಾನದೀಪ ಶಿಕ್ಷಕರ ಆಯ್ಕೆಯ ಆದೇಶ ಪತ್ರವನ್ನು ನೀಡಿ ಮಾತನಾಡಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿಯವರು ಮಾಡುತ್ತಿರುವ ಸಮಾಜೋನ್ಮುಖ ಕಾರ್ಯಗಳು ಬಹಳಷ್ಟು ಯಶಸ್ವಿಯಾಗಿದ್ದು ಧಾರ್ಮಿಕ ಶೈಕ್ಷಣಿಕ, ಸಮುದಾಯ, ಆರೋಗ್ಯ,ಆರ್ಥಿಕ, ಮಹಿಳಾಸಬಲೀಕರಣ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಬಡ ಕುಟುಂಬಗಳಿಗೆ ನೆರವಿನ ಆಸರೆ ನೀಡುತ್ತಿದ್ದು ಇದೀಗ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯಾದ್ಯಾಂತ ಜ್ಞಾನದೀಪ ಶಿಕ್ಷಕರ ಒದಗಣೆ ಮಾಡುತ್ತಿದ್ದು ಅದರಲ್ಲೂ ತಾಲೂಕಿಗೆ 23 ಶಿಕ್ಷಕರನ್ನು ನೀಡಿರುವುದು ನಮಗೆಲ್ಲ ಹೆಮ್ಮೆಯ ವಿಚಾರ
ಶಿಕ್ಷಕರು ಶ್ರದ್ಧೆ, ನಿಷ್ಠೆಯಿಂದ ಸೇವೆ ಸಲ್ಲಿಸಬೇಕು, ಮಕ್ಕಳನ್ನು ಒಲಿಸಿ ಕಲಿಸುವ ಕಲೆ ಕರಗತ ಮಾಡಿಕೊಂಡು, ಸಮಯ ಪ್ರಜ್ಞೆ, ಶಿಸ್ತಿನಿಂದ ಮಾದರಿಯಾಗಿ ಮಕ್ಕಳನ್ನು ಉತ್ತಮ ವಿದ್ಯಾರ್ಥಿಗಳನ್ನಾಗಿ ರೂಪಿಸಬೇಕು. ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್ ರವರು ಮಾತನಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶಾಲೆ-ಕಾಲೇಜ್‌ಗಳಿಗೆ ಬೆಂಚ್, ಡೆಸ್ಕ್ ವಿತರಣೆ, ಪ್ರಾಥಮಿಕ ಶಾಲೆ ಕಟ್ಟಡಗಳಿಗೆ ಸಹಾಯಧನ, ಪ್ರಾಥಮಿಕ ಶಿಕ್ಷಣಕ್ಕೆ ಟ್ಯಾಬ್, ಪ್ರೌಢ ಶಿಕ್ಷಣಕ್ಕೆ ಲ್ಯಾಪ್‌ಟಾಪ್, ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಸಂಜೆ ಮತ್ತು ಬೆಳಗಿನ ಸಮಯ ವಿಶೇಷ ಟ್ಯೂಷನ್ ಕ್ಲಾಸ್ ಮಾಡುವ ಮೂಲಕ ಶಿಕ್ಷಣ ಕ್ರಾಂತಿ ಮಾಡುತಿದ್ದಾರೆ. ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ಸ್ವಯಂ ಸೇವಾ ಶಿಕ್ಷಕರು ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡಬೇಕು ರಾಜ್ಯಾದ್ಯಾಂತ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿದ್ದು, ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸೇವೆ ಎಂದು ಭಾವಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಶಿಕ್ಷಣ ಸಂಯೋಜಕರಾದ ನರಸಯ್ಯ ಪಾಟೀಲ್, ಗ್ರಾಮಾಭಿವೃದ್ಧಿಯೋಜನೆಯ ತಾಲೂಕು ಯೋಜನಾಧಿಕಾರಿ ರಾಜೇಶ.ಎಂ.ಕಾನರ್ಪ, ಆಜೀಂ ಫೌಂಡೇಶನ್ ನ ತರಬೇತುದಾರ ರಮೇಶ್, ಹಾಗೂ ಶಾಲಾ ಶಿಕ್ಷಕರು ಮತ್ತು ಜ್ಞಾನದೀಪ ಶಿಕ್ಷಕರಾಗಿ ಆಯ್ಕೆಯಾದ ಶಿಕ್ಷಕರು ಉಪಸ್ಥಿತರಿದ್ದರು.

Spread the love
  • Related Posts

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಶಿರಾಡಿಯ ಕೆ.ಟಿ. – ಮಳೆಯ ನಡುವೆ ಸವಿದ ಅಪರೂಪದ ರುಚಿ ತುಂತುರು ಮಳೆ ಹನಿಗಳ ನಡುವೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಓಡಾಟ ನಡೆಸುವುದು ಮನಸ್ಸಿಗೆ ವಿಶಿಷ್ಟ ಮುದ ನೀಡುತ್ತದೆ. ಅದರಲ್ಲೂ ಸ್ನೇಹಿತರೊಂದಿಗೆ ಹರಟೆಯಾಡುತ್ತಾ ಗುಂಡ್ಯ ದಾಟಿ ಶಿರಾಡಿಯ ಕಡೆಗೆ ಸಾಗುವ ವೇಳೆಗೆ…

    Spread the love

    You Missed

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 61 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 29 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 29 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 102 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 176 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    • By admin
    • May 31, 2026
    • 76 views
    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”