ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಆತೀ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಘಟನೆ’ ಕೊಡಮಾಡುವ ಅತ್ಯುನ್ನತ ಪ್ರಶಸ್ತಿಯಾದ ‘ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ – 2024’ (ಅತ್ಯುತ್ತಮ ಸಂಸ್ಥೆ ಹಾಗೂ ವಿಶೇಷ ಅಂಗೀಕಾರ ಪ್ರಶಸ್ತಿ) ಲಭಿಸಿದೆ. ಇತ್ತೀಚೆಗೆ ನವದೆಹಲಿಯಲ್ಲಿ ಶ್ರೀ ಪಂಕಜ್ ಚೌಧರಿ ಕೇಂದ್ರ ಹಣಕಾಸು ಸಚಿವರು, ರಾಜ್ಯ ಖಾತೆ ಇವರು ಪ್ರಶಸ್ತಿ ಪ್ರಧಾನ ಮಾಡಿದರು. ಯೋಜನೆಯ ಪರವಾಗಿ ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಎಂ. ಮತ್ತು ಬಿ. ಸಿ. ವಿಭಾಗದ ನಿರ್ದೇಶಕ ಪ್ರವೀಣ್ ಎಂ.ಸಿ.ಯವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ ಹಾಗೂ ಖಾಸಗಿ ಬ್ಯಾಂಕ್‌ಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಹೀಗೆ ದೇಶದ ಇಪ್ಪತ್ತು ಪ್ರತಿಷ್ಠಿತ ಸಂಸ್ಥೆಗಳು ಈ ಪ್ರಶಸ್ತಿಗೆ ಭಾಜನವಾಗಿವೆ.

ದೇಶದ ಎಲ್ಲಾ ಗ್ರಾಮ ಗ್ರಾಮಗಳಲ್ಲಿ ಬ್ಯಾಂಕ್‌ಗಳು ತಮ್ಮ ಶಾಖೆಗಳನ್ನು ತೆರೆದು ಬ್ಯಾಂಕಿಂಗ್ ಸೇವೆ ನೀಡುವುದು ಅಸಾಧ್ಯವೆಂಬುದನ್ನು ಪರಿಗಣಿಸಿದ ವಿತ್ತ ಸಚಿವಾಲಯ ಹಾಗೂ ದೇಶದ ಆರ್ಥಿಕ ನಿಯಂತ್ರಕ ಸಂಸ್ಥೆಗಳು ಆರ್ಥಿಕ ಸೇರ್ಪಡೆ (Financial Inclusion) ಕಾರ್ಯಕ್ರಮದಡಿ ವ್ಯಕ್ತಿಗತ ಹಾಗೂ ಆಯ್ದ ಸಂಸ್ಥೆಗಳನ್ನು ಬಿ.ಸಿ. (Business Correspondence – ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ)ಯಾಗಿ ನಿಯೋಜಿಸಿಕೊಂಡಿವೆ. ಇದರನ್ವಯ ‘ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್’ ಅನ್ನು ಬ್ಯಾಂಕ್‌ಗಳು ‘ಎಸ್.ಹೆಚ್.ಜಿ. ಬ್ಯಾಂಕ್ ಕ್ರೆಡಿಟ್ ಲಿಂಕೆಜ್ ಪ್ರೋಗ್ರಾಂ’ (ಸ್ವ ಸಹಾಯ ಸಂಘಗಳ ಬ್ಯಾಂಕ್ ಸಾಲ ಸೌಲಭ್ಯ ಒದಗಣೆ) ಸೇವೆಗಳನ್ನು ಒದಗಿಸಲು ತನ್ನ ‘ಬಿ.ಸಿ.’ (ಬ್ಯುಸಿನೆಸ್ ಕರೆಸ್ಪಾಂಡೆನ್ಸ್) ಬ್ಯಾಂಕ್‌ ವ್ಯವಹಾರ ಪ್ರತಿನಿಧಿಯಾಗಿ ನಿಯೋಜಿಸಿಕೊಂಡಿವೆ. ತನ್ಮೂಲಕ ಗ್ರಾಮ ಗ್ರಾಮಗಳಲ್ಲಿ ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳಿಂದ ನೇರವಾಗಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುತ್ತಿವೆ. ಈ ಮೂಲಕ ಬ್ಯಾಂಕ್‌ ಸಾಲ ಸೌಲಭ್ಯಗಳನ್ನು ಗ್ರಾಮ ಗ್ರಾಮಗಳಿಗೆ ತಲುಪಿಸುವ ಕೆಲಸವನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ.

ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳಿಂದ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಇಂದು ಲಕ್ಷಾಂತರ ಕೃಷಿ, ಸ್ವ ಉದ್ಯೋಗ ಚಟುವಟಿಕೆಗಳನ್ನು ಸೃಷ್ಟಿಸುವ ಮೂಲಕ ಗ್ರಾಮೀಣ ಪ್ರದೇಶದ ರೈತರು, ಬಡವರು, ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಯುವಕ – ಯುವತಿಯರಿಗೆ ಬ್ಯಾಂಕ್‌ನಿಂದ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ಶೇ. 14ರ (ಬ್ಯಾಂಕ್ ಬಡ್ಡಿದರ ಹಾಗೂ ಬ್ಯಾಂಕ್ ನೀಡುವ ಬಿ.ಸಿ. ಸೇವಾಶುಲ್ಕ ಸೇರಿ) ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು, ತರಬೇತಿಗಳನ್ನು ಒದಗಿಸುವ ಮೂಲಕ ಲಕ್ಷಾಂತರ ಮಂದಿಗೆ ಗುಡಿ ಕೈಗಾರಿಕೆಗಳು, ಕಿರು ಉದ್ಯಮ, ವ್ಯಾಪಾರ, ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ನೆರವಾಗಿದೆ.

ಗ್ರಾಮಾಭಿವೃದ್ಧಿ ಯೋಜನೆಯು ದೇಶದ ಅತ್ಯಂತ ಪ್ರಮುಖ ಬ್ಯಾಂಕ್ ಆದ ‘ಸಿಡ್ಬಿ’ (SIDBI) ಬ್ಯಾಂಕ್‌ನ ‘ಪ್ರಯಾಸ್’ ಕಾರ್ಯಕ್ರಮವನ್ನು ಅನುಷ್ಠಾನ ಮಾಡುತ್ತಿದ್ದು ಇದರಡಿ ಅತಿ ಕಡಿಮೆ ಬಡ್ಡಿದರದಲ್ಲಿ ಕಿರು ಉದ್ಯಮವನ್ನು ಆರಂಭಿಸಲು ಗರಿಷ್ಠ ಮೊತ್ತದ ಸಾಲವನ್ನು ಸಿಡ್ಡಿಯಿಂದ ನೇರವಾಗಿ ಸ್ವ ಉದ್ಯೋಗ ಘಟಕ ಪ್ರಾರಂಭಿಸುವ ಸದಸ್ಯರಿಗೆ ದೊರಕಿಸಿಕೊಡುತ್ತಿದೆ. ಸಿಡ್ಡಿ ಪ್ರಯಾಸ್ ಕಾರ್ಯಕ್ರಮದ ಮೂಲಕ 56,057 ಸದಸ್ಯರಿಗೆ ರೂ. 1,971 ಕೋಟಿ ಮೊತ್ತದ ಸಾಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಆ ಮೂಲಕ ಸಾವಿರಾರು ಮಂದಿ ಗ್ರಾಮೀಣ ಪ್ರದೇಶದ ಯುವಕ – ಯುವತಿಯರು ವ್ಯಾಪಾರ, ಕಿರು ಉದ್ಯಮಗಳನ್ನು ಆರಂಭಿಸುವ ಮೂಲಕ ಸ್ವಾವಲಂಬಿ ಬದುಕನ್ನು ಸಾಗಿಸುತ್ತಿದ್ದಾರೆ.

Spread the love
  • Related Posts

    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ…

    Spread the love

    ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಕೋಲ್ಕತ್ತಾ ಸಮೀಪದ ಮಧ್ಯಮಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುವೇಂದು ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್…

    Spread the love

    You Missed

    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    • By admin
    • May 6, 2026
    • 3 views
    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

    • By admin
    • May 6, 2026
    • 8 views
    ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • May 5, 2026
    • 159 views
    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    • By admin
    • May 5, 2026
    • 40 views
    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    • By admin
    • May 5, 2026
    • 468 views
    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 66 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು