ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಆತೀ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಘಟನೆ’ ಕೊಡಮಾಡುವ ಅತ್ಯುನ್ನತ ಪ್ರಶಸ್ತಿಯಾದ ‘ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ – 2024’ (ಅತ್ಯುತ್ತಮ ಸಂಸ್ಥೆ ಹಾಗೂ ವಿಶೇಷ ಅಂಗೀಕಾರ ಪ್ರಶಸ್ತಿ) ಲಭಿಸಿದೆ. ಇತ್ತೀಚೆಗೆ ನವದೆಹಲಿಯಲ್ಲಿ ಶ್ರೀ ಪಂಕಜ್ ಚೌಧರಿ ಕೇಂದ್ರ ಹಣಕಾಸು ಸಚಿವರು, ರಾಜ್ಯ ಖಾತೆ ಇವರು ಪ್ರಶಸ್ತಿ ಪ್ರಧಾನ ಮಾಡಿದರು. ಯೋಜನೆಯ ಪರವಾಗಿ ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಎಂ. ಮತ್ತು ಬಿ. ಸಿ. ವಿಭಾಗದ ನಿರ್ದೇಶಕ ಪ್ರವೀಣ್ ಎಂ.ಸಿ.ಯವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ ಹಾಗೂ ಖಾಸಗಿ ಬ್ಯಾಂಕ್‌ಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಹೀಗೆ ದೇಶದ ಇಪ್ಪತ್ತು ಪ್ರತಿಷ್ಠಿತ ಸಂಸ್ಥೆಗಳು ಈ ಪ್ರಶಸ್ತಿಗೆ ಭಾಜನವಾಗಿವೆ.

ದೇಶದ ಎಲ್ಲಾ ಗ್ರಾಮ ಗ್ರಾಮಗಳಲ್ಲಿ ಬ್ಯಾಂಕ್‌ಗಳು ತಮ್ಮ ಶಾಖೆಗಳನ್ನು ತೆರೆದು ಬ್ಯಾಂಕಿಂಗ್ ಸೇವೆ ನೀಡುವುದು ಅಸಾಧ್ಯವೆಂಬುದನ್ನು ಪರಿಗಣಿಸಿದ ವಿತ್ತ ಸಚಿವಾಲಯ ಹಾಗೂ ದೇಶದ ಆರ್ಥಿಕ ನಿಯಂತ್ರಕ ಸಂಸ್ಥೆಗಳು ಆರ್ಥಿಕ ಸೇರ್ಪಡೆ (Financial Inclusion) ಕಾರ್ಯಕ್ರಮದಡಿ ವ್ಯಕ್ತಿಗತ ಹಾಗೂ ಆಯ್ದ ಸಂಸ್ಥೆಗಳನ್ನು ಬಿ.ಸಿ. (Business Correspondence – ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ)ಯಾಗಿ ನಿಯೋಜಿಸಿಕೊಂಡಿವೆ. ಇದರನ್ವಯ ‘ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್’ ಅನ್ನು ಬ್ಯಾಂಕ್‌ಗಳು ‘ಎಸ್.ಹೆಚ್.ಜಿ. ಬ್ಯಾಂಕ್ ಕ್ರೆಡಿಟ್ ಲಿಂಕೆಜ್ ಪ್ರೋಗ್ರಾಂ’ (ಸ್ವ ಸಹಾಯ ಸಂಘಗಳ ಬ್ಯಾಂಕ್ ಸಾಲ ಸೌಲಭ್ಯ ಒದಗಣೆ) ಸೇವೆಗಳನ್ನು ಒದಗಿಸಲು ತನ್ನ ‘ಬಿ.ಸಿ.’ (ಬ್ಯುಸಿನೆಸ್ ಕರೆಸ್ಪಾಂಡೆನ್ಸ್) ಬ್ಯಾಂಕ್‌ ವ್ಯವಹಾರ ಪ್ರತಿನಿಧಿಯಾಗಿ ನಿಯೋಜಿಸಿಕೊಂಡಿವೆ. ತನ್ಮೂಲಕ ಗ್ರಾಮ ಗ್ರಾಮಗಳಲ್ಲಿ ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳಿಂದ ನೇರವಾಗಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುತ್ತಿವೆ. ಈ ಮೂಲಕ ಬ್ಯಾಂಕ್‌ ಸಾಲ ಸೌಲಭ್ಯಗಳನ್ನು ಗ್ರಾಮ ಗ್ರಾಮಗಳಿಗೆ ತಲುಪಿಸುವ ಕೆಲಸವನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ.

ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳಿಂದ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಇಂದು ಲಕ್ಷಾಂತರ ಕೃಷಿ, ಸ್ವ ಉದ್ಯೋಗ ಚಟುವಟಿಕೆಗಳನ್ನು ಸೃಷ್ಟಿಸುವ ಮೂಲಕ ಗ್ರಾಮೀಣ ಪ್ರದೇಶದ ರೈತರು, ಬಡವರು, ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಯುವಕ – ಯುವತಿಯರಿಗೆ ಬ್ಯಾಂಕ್‌ನಿಂದ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ಶೇ. 14ರ (ಬ್ಯಾಂಕ್ ಬಡ್ಡಿದರ ಹಾಗೂ ಬ್ಯಾಂಕ್ ನೀಡುವ ಬಿ.ಸಿ. ಸೇವಾಶುಲ್ಕ ಸೇರಿ) ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು, ತರಬೇತಿಗಳನ್ನು ಒದಗಿಸುವ ಮೂಲಕ ಲಕ್ಷಾಂತರ ಮಂದಿಗೆ ಗುಡಿ ಕೈಗಾರಿಕೆಗಳು, ಕಿರು ಉದ್ಯಮ, ವ್ಯಾಪಾರ, ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ನೆರವಾಗಿದೆ.

ಗ್ರಾಮಾಭಿವೃದ್ಧಿ ಯೋಜನೆಯು ದೇಶದ ಅತ್ಯಂತ ಪ್ರಮುಖ ಬ್ಯಾಂಕ್ ಆದ ‘ಸಿಡ್ಬಿ’ (SIDBI) ಬ್ಯಾಂಕ್‌ನ ‘ಪ್ರಯಾಸ್’ ಕಾರ್ಯಕ್ರಮವನ್ನು ಅನುಷ್ಠಾನ ಮಾಡುತ್ತಿದ್ದು ಇದರಡಿ ಅತಿ ಕಡಿಮೆ ಬಡ್ಡಿದರದಲ್ಲಿ ಕಿರು ಉದ್ಯಮವನ್ನು ಆರಂಭಿಸಲು ಗರಿಷ್ಠ ಮೊತ್ತದ ಸಾಲವನ್ನು ಸಿಡ್ಡಿಯಿಂದ ನೇರವಾಗಿ ಸ್ವ ಉದ್ಯೋಗ ಘಟಕ ಪ್ರಾರಂಭಿಸುವ ಸದಸ್ಯರಿಗೆ ದೊರಕಿಸಿಕೊಡುತ್ತಿದೆ. ಸಿಡ್ಡಿ ಪ್ರಯಾಸ್ ಕಾರ್ಯಕ್ರಮದ ಮೂಲಕ 56,057 ಸದಸ್ಯರಿಗೆ ರೂ. 1,971 ಕೋಟಿ ಮೊತ್ತದ ಸಾಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಆ ಮೂಲಕ ಸಾವಿರಾರು ಮಂದಿ ಗ್ರಾಮೀಣ ಪ್ರದೇಶದ ಯುವಕ – ಯುವತಿಯರು ವ್ಯಾಪಾರ, ಕಿರು ಉದ್ಯಮಗಳನ್ನು ಆರಂಭಿಸುವ ಮೂಲಕ ಸ್ವಾವಲಂಬಿ ಬದುಕನ್ನು ಸಾಗಿಸುತ್ತಿದ್ದಾರೆ.

Spread the love
  • Related Posts

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ಮಂಗಳೂರು, ಜುಲೈ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು…

    Spread the love

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಕೇರಳ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೋಮವಾರ (ಜು.06) ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಭಾರೀ ಮಳೆಗೆ ಮಂಗಳವಾರ (ಜು.07) ಭೀಕರ ಭೂಕುಸಿತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಹತ್ತಿರ ಈ ಘಟನೆ ನಡೆದಿದ್ದು,…

    Spread the love

    You Missed

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    • By admin
    • July 7, 2026
    • 65 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    • By admin
    • July 7, 2026
    • 355 views
    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    • By admin
    • July 7, 2026
    • 75 views
    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    • By admin
    • July 6, 2026
    • 116 views
    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    • By admin
    • July 5, 2026
    • 117 views
    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 62 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ