ನಿರಂತರವಾಗಿ ಶುದ್ಧ ಕುಡಿಯುವ ನೀರು ಪಡೆಯಲು 40 ಶುದ್ಧಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ: ಧರ್ಮಾಧಿಕಾರಿ‌ ಡಾ. ವೀರೇಂದ್ರ ಹೆಗ್ಗಡೆ ಹೇಳಿಕೆ: ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಜೊತೆ ಒಡಂಬಡಿಕೆ ಪತ್ರ ವಿನಿಮಯ: ₹ 2.40 ಕೋಟಿ ವೆಚ್ಚದಲ್ಲಿ 40 ಘಟಕಗಳಿಗೆ ಅಳವಡಿಕೆ

ಧರ್ಮಸ್ಥಳ: ರಾಜ್ಯದ ಬಯಲು ಸೀಮೆ‌ ಜಿಲ್ಲೆಗಳ‌ ಜನತೆಗೆ ಶುದ್ಧ ಕುಡಿಯುವ ನೀರು‌ ಒದಗಿಸುವ ಸಲುವಾಗಿ‌ ಶುದ್ಧ ಗಂಗಾ ಘಟಕ‌ ಸ್ಥಾಪಿಸಲಾಗಿದೆ. ಈ ಮೂಲಕ ಜನತೆ ಉತ್ತಮ ಆರೋಗ್ಯ‌ ಪಡೆಯುವಂತಾಗಿದೆ. ‌ಆದರೆ ಕೆಲವು ಘಟಕಗಳಲ್ಲಿ‌ ಪವರ್ ಕಟ್ ನಂತಹಾ‌ ಸಮಸ್ಯೆಯಿಂದ ಮುಕ್ತಿ‌ ಪಡೆಯಲು‌, ಸೋಲಾರ್ ಜೋಡಣೆ ಮಾಡಲಾಗುತ್ತಿದೆ.‌‌ ಆರಂಭದಲ್ಲಿ ಸೆಲ್ಕೋ ಪೌಂಡೇಶನ್ ಇದೀಗ ಆಯ್ದ 40 ಶುದ್ಧಗಂಗಾ ಘಟಕಗಳಿಗೆ ಉಚಿತ ಸೋಲಾರ್‌ ಇನ್ವರ್ಟರ್ ಅಳವಡಿಸಲು ಇಚ್ಛಿಸಿದ್ದಾರೆ. ಪ್ರತೀ ಘಟಕಕ್ಕೆ ಸುಮಾರು ರೂ. 5.00 ಲಕ್ಷ ವೆಚ್ಚವಾಗುವ ಈ ಯೋಜನೆಯಂತೆ ಸುಮಾರು 40 ಘಟಕಗಳಿಗೆ ರೂ. 2.40 ಕೋಟಿ ವೆಚ್ಚ ತಗುಲಲಿದೆ. ಈ ವೆಚ್ಚವನ್ನು ಪೂರ್ತಿಯಾಗಿ ಸೆಲ್ಲೋ ಫೌಂಡೇಶನ್ ಭರಿಸಲಿದೆಯಲ್ಲದೇ ಮುಂದಿನ ಒಂದು ವರ್ಷದವರೆಗೆ ನಿರ್ವಹಣೆಯನ್ನೂ ಉಚಿತವಾಗಿ ಮಾಡಲಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ‌ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಬೀಡಿನಲ್ಲಿ‌ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ‌ಒಡಂಬಡಿಕೆ‌ ಹಸ್ತಾಂತರ ಕಾರ್ಯಕ್ರಮದಲ್ಲಿ‌ ಭಾಗವಹಿಸಿ‌ ಮಾತನಾಡಿದರು.

ರಾಜ್ಯದಾದ್ಯಂತ ಕಡುಬಡವರಿಗೂ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರನ್ನು ಶುದ್ಧ ಗಂಗಾ ಮೂಲಕ ಒದಗಿಸಲಾಗುತ್ತಿತ್ತು. ಯೋಜನೆಯ ಈ ಮಹತ್ವಾಕಾಂಕ್ಷಿ ಯೋಜನೆ ಗಮನಿಸಿ, ಸೆಲ್ಕೋ‌ಸೋಲಾರ್ ಈ‌ ಹೊಸ ಯೋಜನೆ ರೂಪಿಸಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಪೂರ್ಣ ಸೋಲಾರ್‌ನಿಂದಲೇ ನಡೆಸುವ ಹೊಸ ಪ್ರಯತ್ನ ಇದಾಗಲಿದ್ದು, ಪವರ್ ಕಟ್ ಇದ್ದರೂ ಜನತೆಗೆ ಯಾವುದೇ ಸಮಸ್ಯೆ ಎದುರಾಗದೆ ನಿರಂತರವಾಗಿ ಕುಡಿವ ನೀರನ್ನು ಪಡೆಯಬಹುದಾಗಿದೆ ಎಂದರು.


ಸೆಲ್ಕೋ ಫೌಂಡೇಶನ್ ಸಿ.ಇ.ಓ. ಡಾ. ಹರೀಶ್ ಹಂದೆ ಮಾತನಾಡಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಈಗಾಗಲೇ ‌ಹಳ್ಳಿ ಹಳ್ಳಿಗಳಲ್ಲಿ ಸೌರ ವಿದ್ಯುತ್ ಬಳಕೆ ಜಾರಿಗೊಂಡಿತ್ತು. ಇದೀಗ ಪ್ರಥಮವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ಧ ಗಂಗಾ 40 ಘಟಕಗಳಿಗೆ ‌ಸೋಲಾರ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮುಂದೆ ಇದು ವಿಸ್ತರಣೆಯಾಗುವ ಸಾಧ್ಯತೆ ಇದೆ. ಅದೇ ರೀತಿ ವಿವಿಧ ವಿಚಾರಗಳಿಗೆ ‌ಸೌರ ವಿದ್ಯುತ್ ‌ಘಟಕ ಬಳಕೆಯ ಕುರಿತು ‌ಸಂಶೋಧನೆಗಳು ನಡೆಯುತ್ತಿವೆ ಎಂದರು.

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಮಕ್ಷಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಹೆಚ್. ಮಂಜುನಾಥ್ ಸಸ್ಟೈಯ್ನ್ ಪ್ಲಸ್ ನಿರ್ದೇಶಕ ಹಾಗೂ ಸೋಷಿಯಲ್ ಆಲ್ಫಾ ಹಾಗೂ ಮನೋಜ್ ಕುಮಾರ್ ಒಪ್ಪಂದ ಪತ್ರಗಳ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಸೆಲ್ಕೋ ಫೌಂಡೇಶನ್ ಸಿ.ಇ.ಓ. ಡಾ. ಹರೀಶ್ ಹಂದೆ, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಸೆಲ್ಕೋ ಸೋಲಾರ್‌ನ ಸಿ.ಇ.ಓ. ಮೋಹನ ಭಾಸ್ಕರ ಹೆಗಡೆ, ಪ್ರಧಾನ ವ್ಯವಸ್ಥಾಪಕ ಜಗದೀಶ್ ಪೈ, ಯೋಜನೆ ಪ್ರಾದೇಶಿಕ ಹಣಕಾಸು ನಿರ್ದೇಶಕ ಶಾಂತರಾಮ ಪೈ, ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ, ಸೆಲ್ಕೊ ಸೋಲಾರ್‌ನ ಗುರುಪ್ರಕಾಶ್ ಶೆಟ್ಟಿ, ಸಸ್ಟೈನ್ ಪ್ಲಸ್‌ನ ಸುಪ್ರಿಯಾ ಗೌಡ, ಶುದ್ಧಗಂಗಾ ವಿಭಾಗದ ನಿರ್ದೇಶಕ ಲಕ್ಷ್ಮಣ್ ಎಂ., ಯೋಜನಾಧಿಕಾರಿ ಯುವರಾಜ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    • By admin
    • September 15, 2026
    • 0 views

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 12 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ