ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ “ಸುಜ್ಞಾನ ನಿಧಿ ಶಿಷ್ಯ ವೇತನ” ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: DYSP ಪ್ರಮೋದ್ ಕುಮಾರ್

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಂತ್ರಿಕ ವೃತ್ತಿಪರ ಶಿಕ್ಷಣಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಡಿವೈಎಸ್ಪಿ ಪ್ರಮೋದ್ ಕುಮಾರ್ ಜೈನ್ ರವರು ಉದ್ಘಾಟಿಸಿದ್ದರು.

ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಬದ್ಧತೆ ಇದ್ದಲ್ಲಿ ಯಶಸ್ಸು ನಮ್ಮನ್ನು ಹುಡುಕಿಕೊಂಡು ಬರುತ್ತದೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು ನಾನು ಉಜಿರೆಯ SDM ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದು ಈ ಹುದ್ದೆಗೆ ಬರುವಲ್ಲಿ ನೆರವಾಗಿದೆ. ಇದರಲ್ಲೂ ಪ್ರಮುಖವಾಗಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಾದ್ಯಂತ ಸಮಾಜದ ಕಟ್ಟಕಡೆಯ ಲ್ಲಿರುವ ಕುಟುಂಬಕ್ಕೂ ವಿವಿಧ ರೀತಿಯಲ್ಲಿ ಸಹಾಯ ಆಗುತ್ತಿದ್ದು ಮಹಿಳೆಯರು ಸ್ವಾವಲಂಬಿಯಾಗಿ ಬದುಕುವುದಕ್ಕೆ ಬೇಕಾದ ಎಲ್ಲಾ ಅವಕಾಶಗಳನ್ನು ಈ ಸಂಸ್ಥೆ ನೀಡುತ್ತಿದೆ. ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಇದರೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಶೈಕ್ಷಣಿಕ ಜೀವನದಲ್ಲಿ ಕೇವಲ ಅಂಕಗಳ ಹಿಂದೆ ಹೋಗದೇ ಮಾನವೀಯ ಮೌಲ್ಯಗಳನ್ನು ತಮ್ಮಲ್ಲಿ ಆಳವಡಿಸಿಕೊಳ್ಳುವುದರ ಮೂಲಕ ಉತ್ತಮ ಸಮಾಜದ ಆದರ್ಶ ವ್ಯಕ್ತಿಯಾಗಿ ಹೊರಹೊಮ್ಮಿ ಜೊತೆಗೆ ವ್ಯಸನ ಮುಕ್ತ ಮಾಡುವಲ್ಲಿ ತಾವೆಲ್ಲರೂ ಕೈಜೋಡಿಸಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಮುಂದೆ ಬರಬೇಕು ಎಂದು ಶುಭಹಾರೈಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸುರೇಶ್ ಮೊಯ್ಲಿ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಮಹಿಳೆಯರ ಸಬಲೀಕರಣಕ್ಕಾಗಿ ಹತ್ತಾರು ಯೋಜನೆಗಳನ್ನು ರೂಪಿಸಿ ಸಹಕಾರ ನೀಡುತ್ತಿದೆ. ಅಲ್ಲದೆ 12 ವರ್ಷದಿಂದ ಹಾಸನ ಜಿಲ್ಲೆಯಲ್ಲಿ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಅರ್ಥಿಕ, ಪರಿಸರ, ನೀರಾವರಿ ಸೇರಿದಂತೆ ಹಲವಾರು ತೀತಿಯಲ್ಲಿ ಕೆಲಸ ಮಾಡುತ್ತಿದೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಆಶೋತ್ತರದಂತೆ 8 ವರ್ಷದಿಂದ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ 943 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗಿದೆ. ಸಕಲೇಶಪುರ ತಾಲೂಕಿನಲ್ಲಿ 157 ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಈ ಶಿಷ್ಯವೇತನ ಪಡೆದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಉನ್ನತ ವ್ಯಾಸಂಗ ಮಾಡಿ ದೊಡ್ಡ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರಪತಿ ಸೇವಾ ಚಿನ್ನದ ಪದಕ ಗೌರವಕ್ಕೆ ಆಯ್ಕೆಯಾದ ಡಿವೈಎಸ್ಪಿ ಪ್ರಮೋದ್ ಕುಮಾರ್ ಜೈನ್ ರವರಿಗೆ ಗೌರವ ಸಮರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ.ನವೀನ್ ಚಂದ್ರ ಶೆಟ್ಟಿ, ಸದಸ್ಯರಾದ ಗಿರೀಶ್ ಮಂಜುನಾಥ್,ಜಿಲ್ಲಾ ನಿರ್ದೇಶಕರಾದ ಸುರೇಶ್ ಮೊಯ್ಲಿ , ತಾಲೂಕಿನ ಯೋಜನಾಧಿಕಾರಿ ರಾಜೇಶ್ ಎಂ ಕಾನರ್ಪ, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 117 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 33 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 41 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ