ಚಾರ್ಮಾಡಿಯಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆಗೆ ಡಾ. ಹೆಗ್ಗಡೆಯವರಿಂದ ಚಾಲನೆ. 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಬೀಜ ಬಿತ್ತನೆ ಕಾರ್ಯ

ಚಾರ್ಮಾಡಿ : ಚಾರ್ಮಾಡಿಯ ಕಣ್ಣಪ್ಪಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಮತ್ತು ತರಕಾರಿ ಗಿಡಗಳ ಬೀಜದುಂಡೆಗಳನ್ನು ಹಾಕುವ ಮೂಲಕ ‘ಸಾಮಾಜಿಕ ಅರಣ್ಯೀಕರಣ’ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಚಾಲನೆ ನೀಡಿದರು.

ಚಾರ್ಮಾಡಿಯ ಕನಪ್ಪಾಡಿ ಮೀಸಲು ಅರಣ್ಯ ಪ್ರದೇಶದ ಸುಮಾರು 20 ಎಕರೆ ಪ್ರದೇಶದಲ್ಲಿ 500ಕ್ಕೂ ಹೆಚ್ಚಿನ ಹಣ್ಣಿನ ಗಿಡಗಳ ಬಿತ್ತನೆ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿತು. ಮಾವು, ಹಲಸು, ಹೆಬ್ಬಲಸು, ನೇರಳೆ, ಕಾನಾಜೆ ಸೇರಿದಂತೆ ಹಲವು ಬೀಜಗಳನ್ನು ಸಂಗ್ರಹಿಸಿ ಅವುಗಳನ್ನು ಬೀಜದುಂಡೆಗಳಾಗಿ ಪರಿವರ್ತಿಸಿ ಭೂಮಿಗಿಳಿಸಲಾಯಿತು.

ಕಾಡಿನಿಂದ ನಾಡಿಗೆ ಬರುವ ಕಾಡು ಪ್ರಾಣಿಗಳಿಗೆ ಕಾಡಿನಲ್ಲೇ ಆಹಾರ ದೊರಕಬೇಕೆನ್ನುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಇತ್ತೀಚೆಗೆ ಅರಣ್ಯ ಸಚಿವರಿಂದ ‘ಸಾಮಾಜಿಕ ಅರಣ್ಯೀಕರಣ ’ ಯೋಜನೆಗೆ ಚಾಲನೆ ನೀಡಲಾಗಿತ್ತು. ಬಯಲು ಪ್ರದೇಶ ಮತ್ತು ಖಾಲಿ ಜಾಗಗಳಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಮತ್ತು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಬೀಜಗಳನ್ನು ಎಸೆಯುವ ಮೂಲಕ ಅರಣ್ಯದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಹೆಗ್ಗಡೆಯವರ ಪುತ್ರಿ ಶ್ರದ್ಧಾ ಅಮಿತ್ ,ಸುರೇಂದ್ರ ಕುಮಾರ್ ಅವರ ಮಗಳು ಶ್ರುತಾ ಜಿತೇಶ್, ಶ್ರೀ.ಕ್ಷೇ. ಧ. ಗ್ರಾ. ಯೋಜನೆಯ ಮುಖ್ಯ ನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಾಸ್, ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರಾದೇಶಿಕ ನಿರ್ದೇಶಕ ಜೈವಂತ್ ಪಟಗಾರ್, ತಾಲೂಕು ಯೋಜನಾಧಿಕಾರಿ ಜಯಕರ್ ಶೆಟ್ಟಿ, ಚಾರ್ಮಾಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಉಮೇಶ್ ಗೌಡ, ಚಾರ್ಮಾಡಿ ಚಾರ್ಮಾಡಿ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಅಂಕಲಾಗಿ, ಅರಣ್ಯ ರಕ್ಷಕ ಶರತ್ ಶೆಟ್ಟಿ, ವೀರು ಶೆಟ್ಟಿ ಧರ್ಮಸ್ಥಳ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿಯ ಸದಸ್ಯರು, ಚಾರ್ಮಾಡಿ ಪೆಂಟ್ರೋಲ್ ಬಂಕ್ ಮಾಲಕ ಅನಂತ ಭಟ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗಿಗಳಾದರು.

ವರದಿ : ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ…

    Spread the love

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 57 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 42 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 28 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 233 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 65 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 34 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ