ಸೌರ ಶಕ್ತಿ ಬಳಸಿ ಕುಡಿಯುವ ನೀರು ಯೋಜನೆಗೆ ಚಾಲನೆ! ಜಿಲ್ಲೆಯ ಪ್ರಥಮ ಪ್ರಯೋಗ ಯಶಸ್ವಿಯಾಗಲಿ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಮಡಂತ್ಯಾರು ಗ್ರಾ.ಪಂ. ಹಲವಾರು ಮಾದರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ತಾಲೂಕಿನಲ್ಲಿ ವಿನೂತನ ಸಾಧನೆ ಮಾಡಿದೆ. ಆತ್ಮ ನಿರ್ಭರ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕುಡಿಯುವ ನೀರು ಯೋಜನೆಗೆ ಸೌರ ಶಕ್ತಿ ಬಳಸುವ ಮೂಲಕ ಜಿಲ್ಲೆಯ ಪ್ರಥಮ ಪ್ರಯೋಗ ಯಶಸ್ವಿಯಾಗಲಿ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯ ಪಾರೆಂಕಿ ಗ್ರಾಮದ ಹಾರಬೆ ಜನವಸತಿ ಪ್ರದೇಶದ ಕುಡಿಯುವ ನೀರಿನ ಯೋಜನೆಗೆ ಅಳವಡಿಸಿದ ಸೋಲಾರ್ ಪಂಪ್‌ನ್ನು ಉದ್ಘಾಟಿಸಿ ಮಾತನಾಡಿದರು.

15 ನೇ ಹಣಕಾಸು ಅಥವಾ ಲಭ್ಯ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲಾ ಗ್ರಾ.ಪಂ.ಗಳು ಈ ಯೋಜನೆಯನ್ನು ಜಾರಿ ಮಾಡುವಂತೆ ಸೂಚನೆ ನೀಡುವುದಾಗಿ ಶಾಸಕರು ತಿಳಿಸಿದರು. ವಿದ್ಯುತ್ ಉಳಿತಾಯ ಜತೆಗೆ ನೀರಿನ ಮಿತ ಬಳಕೆಯ ಅಂಶವೂ ಸೇರಿದ್ದರಿಂದ ಸೆಲ್ಕೋ ಸಂಸ್ಥೆ ಬೆಳ್ತಂಗಡಿ ತಾಲೂಕಿನಲ್ಲಿ ಆಂದೋಲನದ ರೀತಿಯಲ್ಲಿ ಜಾರಿ ಮಾಡಲು ವಿಶೇಷ ಮುತುವರ್ಜಿ ವಹಿಸುವಂತೆ ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ನನಗೆ ಬಹಳ ಖುಷಿ ನೀಡಿದ ಕಾರ್ಯಕ್ರಮ, ಒಂದು ಮಾದರಿ ಸಮಾರಂಭದಲ್ಲಿ ಭಾಗವಹಿಸಿದ ತೃಪ್ತಿ ನೀಡಿದೆ. ಗ್ರಾ.ಪಂ. ವಿದ್ಯುತ್ ಸ್ವಾವಲಂಬಿಗಳಾಗಿ ಸಾಧನೆ ಮಾಡಲು ಇದು ಪ್ರೇರಣದಾಯಕ ಕಾರ್ಯಕ್ರಮ. ಇಂತಹ ಯೋಜನೆ ಮತ್ತು ಯೋಚನೆ ಮಾಡಿದ ಗ್ರಾ.ಪಂ. ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗ ಅಭಿನಂದನಾರ್ಹರು ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಗೋಪಾಲಕೃಷ್ಣ ಕೆ. ಮಾತನಾಡಿ, ಮಡಂತ್ಯಾರು ಗ್ರಾ.ಪಂ. ಹಲವಾರು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡ ಕಾರಣವೇ ಗಾಂದಿ ಗ್ರಾಮ ಪುರಸ್ಕಾರ ಲಭಿಸಿದೆ. ವಿದ್ಯುತ್ ಬಿಲ್ ಲೆಕ್ಕ ಹೊಂದಾಣಿಕೆ ಮೂಲಕ ಕನಿಷ್ಠ 50 ಲಕ್ಷ ರೂ. ಬಿಲ್ ಉಳಿತಾಯ ಆಗಿದೆ ಎಂದು ಹೇಳಿದರು.

ತಾ.ಪಂ. ಸದಸ್ಯೆ ವಸಂತಿ ಲಕ್ಷ್ಮಣ್, ತಾ.ಪಂ. ಇ.ಒ. ಕುಸುಮಾಧರ್, ಸೆಲ್ಕೊ ಸಂಸ್ಥೆ ಸಹಾಯಕ ಮಹಾ ಪ್ರಬಂಧಕ ಗುರುಪ್ರಕಾಶ್ ಶೆಟ್ಟಿ, ಗ್ರಾ.ಪಂ. ಆಡಳಿತಾಧಿಕಾರಿ ಯತೀಶ್ ಉಪಸ್ಥಿತರಿದ್ದರು. ಮಡಂತ್ಯಾರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ., ಸೆಲ್ಕೋ ಸಂಸ್ಥೆಯ ನವೀನ್ ನೆರಿಯಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 59 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 99 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 42 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ