ಜಾರ್ಖಂಡ್ ಮೂಲದ ಮಾನಸಿಕ ಅಸ್ವಸ್ಥ ಯುವಕನನ್ನು ತಾಯ್ನಾಡಿಗೆ ಕರೆದು ಕೊಂಡು ಹೋಗಿ ಕುಟುಂಬ ಸದಸ್ಯರಿಗೆ ಒಪ್ಪಿಸಿದ ಬೆಳ್ತಂಗಡಿಯ ಯುವಕರ ತಂಡ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೋಮಂತ್ತಡ್ಕದಲ್ಲಿ ಕಳೆದ ಮೂರು ವರ್ಷದ ಹಿಂದೆ ಪ್ರತಿದಿನ ತಿರುಗಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಗಮನಿಸಿದ ಸರಕಾರಿ ಬಸ್ ಚಾಲಕ ನಾರಾಯಣ ಪೂಜಾರಿಯವರು ಸೋಮಂತ್ತಡ್ಕದಲ್ಲಿರುವ ಸಂಗಮ್ ಹೋಟೆಲ್‌ ಮಾಲೀಕ ಅಬ್ದುಲ್ ಲತೀಫ್ ಎಂಬವರಿಗೆ ಈ ಬಗ್ಗೆ ಮಾಹಿತಿ ನೀಡಿದಾಗ ಅವನನ್ನು ಹೊಟೇಲ್ ಕರೆದುಕೊಂಡು ಬಂದು ರೂಂ ವ್ಯವಸ್ಥೆ ಮಾಡಿ ಪ್ರತಿದಿನ ಊಟ,ತಿಂಡಿ ನೀಡಿ ನೋಡಿಕೊಳ್ಳುತ್ತಿದ್ದರು ಅದರಂತೆ ಅಬ್ದುಲ್‌ ಲತೀಫ್ ಆ ವ್ಯಕ್ತಿಯ ಬಳಿ ವಿಚಾರಿಸಿದಾಗ ಯಾವುದೇ ರೀತಿಯ ಸರಿಯಾದ ಮಾತುಗಳನ್ನು ಹೇಳುತ್ತಿರಲ್ಲಿಲ್ಲ ನಂತರ ಪ್ರತಿದಿನ ಹೊಟೇಲ್ ನಲ್ಲಿ ಕೆಲಸ ಮಾಡಲು ಆರಂಭಿಸಿದ್ದ ಇದಕ್ಕೆ ಅವರು ಆತ ದುಡಿದ ತಿಂಗಳ ಸಂಬಳವನ್ನು ಖಾತೆಯೊಂದನ್ನು ಮಾಡಿ ಪ್ರತಿ ತಿಂಗಳು ಹಣವನ್ನು ಹಾಕುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಆತನ ವರ್ತನೆಗಳಲ್ಲಿ ಬದಲಾವಣೆ ಬಂದಿರುವ ಕಾರಣ ಹೊಟೇಲ್ ಮಾಲೀಕ ಅಬ್ದುಲ್‌ ಲತೀಫ್ ಸ್ಥಳೀಯ ಸಮಾಜ ಸೇವಕ ಅಬ್ದುಲ್ ಅಜೀಜ್ ಅವರ ತಂಡದ ಸದಸ್ಯರಿಗೆ ಮಾಹಿತಿ ನೀಡಿದ್ದರು. ಆತನ ಊರಿನ ಬಗ್ಗೆ ವಿಚಾರಿಸಿದಾಗ ಅಲ್ವ ಸ್ವಲ್ಪ ಮಾತುಗಳನ್ನು ಮಾತಾನಾಡುತ್ತಿದ್ದ. ಬಳಿಕ ಮಂಗಳೂರಿನ ಮನೋವೈದ್ಯರಾದ ಡಾ.ಕಿರಣ್ ಕುಮಾರ್ ಅವರಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ಬಳಿಕ ನುರ್ಥಾ ಎಂಬ ಹೆಸರನ್ನು ಹೇಳುತ್ತಿದ್ದ ಇದರ ಬಗ್ಗೆ ಗೂಗುಲ್ ಮೂಲಕ ಹುಡುಕಾಟ ನಡೆಸಲಾಗಿತ್ತು. ಕೊನೆಗೆ ವಿವಿಧ ರಾಜ್ಯದ ಕೆಲವು ವ್ಯಕ್ತಿಗಳನ್ನು ಸಂಪರ್ಕಿಸಿ ನುರ್ಥಾ ಎಂಬ ಹೆಸರು ಬರುವ ವಿಳಾಸ ಪತ್ತೆ ಹಚ್ಚಲು ಮುಂದಾಗಿತ್ತು. ಈ ವೇಳೆ ಜಾರ್ಖಂಡ್ ರಾಜ್ಯದಲ್ಲಿ ಈ ನುರ್ಥಾ ಪ್ರದೇಶದ ಬಗ್ಗೆ ಮಾಹಿತಿ ಸಿಕ್ಕಿದ್ದು ಅದರಂತೆ ಜಾರ್ಖಂಡ್ ರಾಜ್ಯದ ಪಶ್ಚಿಮ ಸಿಂಗ್ಭೂಮ್ ನ ಹಟಗಮ್ಹರಿಯಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಾಲೇಶ್ವರ ಓರಾನ್ ಅಧಿಕಾರಿಯನ್ನು ಸಂಪರ್ಕಿಸಿ ಅವರ ಸಹಾಯ ಪಡೆದುಕೊಂಡು ವ್ಯಕ್ತಿಯ ಫೋಟೋ ಕಳುಹಿಸಲಾಗಿತ್ತು. ಅವರು ಒಂದೇ ದಿನದಲ್ಲಿ ಸ್ಥಳೀಯ ಕೆಲ ವ್ಯಕ್ತಿಗಳ ಮೂಲಕ ಆತನ ಮನೆಯ ಸದಸ್ಯರನ್ನು ಪತ್ತೆ ಮಾಡಿದ್ದಾರೆ. ನಂತರ ಮನೆಯವರ ಮೊಬೈಲ್ ನಂಬರ್ ಕಳುಹಿಸಿ ಅವರನ್ನು ವಾಟ್ಸಾಪ್ ವಿಡಿಯೋ ಕಾಲ್ ಮುಖಾಂತರ ಸಂಪರ್ಕಿಸಿ ವ್ಯಕ್ತಿಯನ್ನು ತೋರಿಸಿ ಮಾತಾನಾಡಿಸಿದಾಗ ಆತನ ಹೆಸರು ಸುಲ್ಬು ಸಿಂಖು (30) ಪ್ರಾಯ ಎಂಬುವುದು ಖಚಿತವಾಗಿಯಿತು. ಆತನಿಗೆ ಕಳೆದ ಆರು ವರ್ಷಗಳಿಂದ ಮಾನಸಿಕ ರೋಗ ಇದ್ದು ನಮ್ಮ ಮನೆಯಿಂದ ಐದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಆದ್ರೆ ಯಾವುದೇ ನಾಪತ್ತೆ ಪ್ರಕರಣ ದಾಖಲಿಸಲಾಗಿಲ್ಲ ಎಂದಿದ್ದಾರೆ‌. ನಂತರ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಸಂಗಮ್ ಹೊಟೇಲ್ ಗೆ ಭೇಟಿ ಮಾಡಿ ಜಾರ್ಖಂಡ್ ಸಬ್ ಇನ್ಸ್ಪೆಕ್ಟರ್ ಜೊತೆ ಕರೆ ಮಾಡಿ ಮಾತಾನಾಡಿ ಮನೆಗೆ ತಲುಪಿಸುವ ಬಗ್ಗೆ ಚರ್ಚೆ ನಡೆಸಿದರು ಬಳಿಕ ನಾವು ಸಹಕರಿಸುವುದಾಗಿ ಜಾರ್ಖಂಡ್ ಸಬ್ ಇನ್ಸ್ಪೆಕ್ಟರ್ ಹೇಳಿದ್ದರು.





ಯುವಕನನ್ನು ಕುಟುಂಬದ ಸದಸ್ಯರಿಗೆ ಒಪ್ಪಿಸಿದ ಪ್ರತೀಕ್ ಕೋಟ್ಯಾನ್ ಬೆಳ್ತಂಗಡಿ ಮತ್ತು ಮಹಮ್ಮದ್ ಜಬೀರ್

ಮನೆ ಸದಸ್ಯರು ಆದಿವಾಸಿಗಳಾಗಿರುವ ಕಾರಣ ಹೊರ ರಾಜ್ಯಕ್ಕೆ ಬರುವ ಪ್ರಯತ್ನ ಮಾಡಿರಲ್ಲಿಲ್ಲ. ಅದರಂತೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಅವರ ನಿರ್ದೇಶನದಂತೆ ಮೇರೆಗೆ ಫೆ.3 ರಂದು ರಾತ್ರಿ ಪ್ರತೀಕ್ ಕೋಟ್ಯಾನ್ ಬೆಳ್ತಂಗಡಿ ಮತ್ತು ಮಹಮ್ಮದ್ ಜಬೀರ್ ಸೇರಿಕೊಂಡು ಮಾನಸಿಕ ಅಸ್ವಸ್ಥನಾಗಿರುವ ಸುಲ್ಬು ಸಿಂಝ(35) ನನ್ನು ಬೆಂಗಳೂರಿಗೆ ಬಾಡಿಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಫೆ.4 ರಂದು ಶನಿವಾರ ಬೆಳಗ್ಗೆ 5 ಗಂಟೆಗೆ ಬೆಂಗಳೂರು ವಿಮಾನದ ಮೂಲಕ ಜಾರ್ಖಂಡ್ ರಾಜ್ಯದ ರಾಂಚಿ ವಿಮಾನ ನಿಲ್ದಾಣಕ್ಕೆ ಹೋಗಿ ಅಲ್ಲಿಂದ ಬಾಡಿಗೆ ಕಾರಿನಲ್ಲಿ 270 ಕಿ.ಮೀ.ನಲ್ಲಿರುವ ಪಶ್ಚಿಮ ಸಿಂಗ್ಭೂಮ್ ನ ಹಟಗಮ್ಹರಿಯಾ ಪೊಲೀಸ್ ಠಾಣೆಗೆ ಹೋಗಿ ಅಲ್ಲಿನ ಪೊಲೀಸರ ಮೂಲಕ ಸುಲ್ಬು ಸಿಂಝ ಕುಟುಂಬ ಸದಸ್ಯರನ್ನು ಠಾಣೆಗೆ ಕರೆಸಿ ಮಾತುಕತೆ ಮಾಡಿ ಮನೆಯವರೊಂದಿಗೆ ಕಳುಹಿಸಿಕೊಡಲಾಗಿದೆ.

ಕುಟುಂಬದ ಸದಸ್ಯರೊಂದಿಗೆ ಸುಲ್ಬು ಸಿಂಝ

ವಿಮಾನ ನಿಲ್ದಾಣದಲ್ಲಿ ಮಾನವೀಯತೆ ಮೆರೆದ ಸಿಬ್ಬಂದಿ: ಒಟ್ಟು ಮೂರು ಜನರಿಗೆ ವಿಮಾನ ಟಿಕೆಟ್ ಅಗಿತ್ತು ಅದರಂತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋದಾಗ ಸುಲ್ಬು ಸಿಂಝ ಆಧಾರ್ ಕಾರ್ಡ್ ಜೆರಾಕ್ಸ್ ಊರಿನಿಂದ ವಾಟ್ಸಾಪ್ ಮೂಲಕ ಕಳುಹಿಸಿದ್ದರು‌ ಒರಿಜಿನಲ್ ಇಲ್ಲದ ಕಾರಣ ಒಳಗಡೆ ಬಿಡಲು ಭದ್ರತಾ ಸಿಬ್ಬಂದಿಗಳು ನಿರಾಕರಿಸಿದ್ದರು ನಂತರ ಆತನ ಬಗ್ಗೆ ಎಲ್ಲವನ್ನೂ ವಿವರಿಸಿದ ಬಳಿಕ ಮಾನವೀಯತೆ ಮೇರೆಗೆ ಒಳಕಳುಹಿಸಿ ಸಹಕರಿಸಿದ ಸಿಎಫ್ಎಸ್ಎಫ್ ಭದ್ರತಾ ಸಿಬ್ಬಂದಿಗಳು.

ಜಾರ್ಖಂಡ್ ಗೆ ಕರೆದುಕೊಂಡು ಹೋಗಿ ವಾಪಸ್ ಇಬ್ಬರು ಯುವಕರು ಊರಿಗೆ ಬರುವ ಎಲ್ಲಾ ಖರ್ಚು ವೆಚ್ಚವನ್ನು ಸಂಗಮ್ ಹೊಟೇಲ್ ಮಾಲೀಕ ಲತೀಫ್ ಅವರು ಭರಿಸಿದ್ದಾರೆ‌.ಅದಲ್ಲದೆ ಹೊಟೇಲ್ ನಲ್ಲಿ ಮೂರು ವರ್ಷಗಳ ಕಾಲ ದುಡಿದ ಹಣವನ್ನು ಮನೆಮಂದಿಗೆ ನೀಡಲಾಗಿದೆ.

ಗಂಡ ಮಿಸ್ಸಿಂಗ್ ಪತ್ನಿ ಮತ್ತೊಂದು ಮದುವೆ! ಇನ್ನೊಂದು ವಿಪರ್ಯಾಸ ಅಂದರೆ ಸುಲ್ಲು ಸಿಂಝುಗೆ ಮದುವೆಯಾಗಿತ್ತು. ಐದು ವರ್ಷ ನಾಪತ್ತೆಯಾಗಿದ್ದಕ್ಕೆ ಆತನ ಪತ್ನಿ ಮತ್ತೊಂದು ವಿವಾಹವಾಗಿದ್ದಾಳೆ. ಅದೇನೆ ಇದ್ದರೂ ಐದು ವರ್ಷಗಳ ಬಳಿಕ ಸುಲ್ಲು ತನ್ನ ಕುಟುಂಬ ಜೊತೆ ಪುನರ್ಮಿಲನವಾಗಿತ್ತಿರೋದು ಖುಷಿಯ ವಿಚಾರವಾಗಿದೆ.

ಜಾರ್ಖಂಡ್ ಪೊಲೀಸರಿಂದ ಅಭಿನಂದನೆ:

ಮಾನಸಿಕ ಅಸ್ವಸ್ಥ ಸುಲ್ಬು ಸಿಂಝ ನನ್ನು ರಾಂಚಿ ವಿಮಾನ ನಿಲ್ದಾಣಕ್ಕೆ ಕರೆತರುವ ಬಗ್ಗೆ ಜರ್ಖಂಡ್ ರಾಜ್ಯದ ವಿಶೇಷ ಅಪರಾಧ ತಂಡದ ಪೊಲೀಸರು ಮಾಹಿತಿ ಸಿಕ್ಕಿದ ಮೇರೆಗೆ ವಿಮಾನ ನಿಲ್ದಾಣಕ್ಕೆ ಅಗಮಿಸಿ ಸ್ವಾಗತಿಸಿಕೊಂಡಿದ್ದು ಅದಲ್ಲದೆ ಜಾರ್ಖಂಡ್ ರಾಜ್ಯದ ಪಶ್ಚಿಮ ಸಿಂಗ್ಭೂಮ್ ನ ಹಟಗಮ್ಹರಿಯಾ ಪೊಲೀಸ್ ಠಾಣೆಯ ಸಿಬ್ಬಂದಿಗಳು ಈ ಕಾಲದಲ್ಲಿ ಯಾರು ಕೂಡ ಇಂತಹ ಕೆಲಸ ಮಾಡುವುದಿಲ್ಲ ಆದ್ರೆ ನೀವು ಒಂದು ಈ ಉತ್ತಮ ಪುಣ್ಯದ ಮಾನವೀಯತೆ ಕೆಲಸ ಮಾಡಿದ್ದೀರಿ ಎಂದು ಹೇಳಿ ಅಭಿನಂದಿಸಿದರು.

ಪತ್ತೆ ಕಾರ್ಯಕ್ಕೆ ಸಹಕರಿಸಿದವರು: ಸಂಗಮ್ ಹೋಟೆಲ್ ಮಾಲೀಕ ಅಬ್ದುಲ್ ಲತೀಫ್ , ಸಮಾಜ ಸೇವಕ ಅಬ್ದುಲ್ ಅಜೀಜ್ , ಹಂಝ , ಜಬೀರ್ ,ಫಹಾಜ್ ಅಹಮ್ಮದ್, ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ , ಮಂಗಳೂರು ಸೆನ್ ಪೊಲೀಸ್ ಠಾಣೆಯ ಚಂದ್ರಶೇಖರ್, ಪ್ರತೀಕ್ ಬೆಳ್ತಂಗಡಿ , ನಾರಾಯಣ ಪೂಜಾರಿ , ದಾಸ್ಮಟ್ ಹನ್ಸಾ ಜಾರ್ಖಂಡ್, ಜಾರ್ಖಂಡ್ ರಾಜ್ಯದ ಪಶ್ಚಿಮ ಸಿಂಗ್ಭೂಮ್ ನ ಹಟಗಮ್ಹರಿಯಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಾಲೇಶ್ವರ ಓರಾನ್ ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ