ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಮಹತ್ವ

ಶ್ರೀಕೃಷ್ಣ ಜನ್ಮಾಷ್ಟಮಿ

ಕೃಪೆ: ಸನಾತನ ಧರ್ಮ ಗ್ರಂಥಗಳು

krishna.jpg

ಆಚರಣೆ

ಹಿಂದೂಸ್ಥಾನದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ.

ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ

ಗೋಕುಲ, ಮಥುರಾ, ಬೃಂದಾವನ, ದ್ವಾರಕಾ, ಪುರಿ ಇವು ಶ್ರೀಕೃಷ್ಣನ ಉಪಾಸನೆಗೆ ಸಂಬಂಧಿಸಿದ ಪವಿತ್ರಸ್ಥಾನಗಳಾಗಿವೆ. ಇಲ್ಲಿ ಈ ಉತ್ಸವವನ್ನು ವಿಶೇಷ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಬೃಂದಾವನದಲ್ಲಿ ಡೋಲೋತ್ಸವವಾಗುತ್ತದೆ. ಅದು ನೋಡಲು ಆನಂದದಾಯಕವಾಗಿರುತ್ತದೆ. ಇತರ ಕ್ಷೇತ್ರಗಳ ಅನೇಕ ಸ್ಥಳಗಳಲ್ಲಿ ಶ್ರೀಕೃಷ್ಣನ ದೇವಾಲಯದಲ್ಲಿ ಈ ಉತ್ಸವವನ್ನು ಆಚರಿಸಲಾಗುತ್ತದೆ. ಈ ದಿನ ಕೆಲವರು ತಮ್ಮ ಮನೆಯಲ್ಲಿಯೇ ಗೋಕುಲ-ಬೃಂದಾವನದಂತೆ ಪ್ರತಿರೂಪ ಮಾಡಿ ಶ್ರೀಕೃಷ್ಣನ ಜನ್ಮೋತ್ಸವವನ್ನು ಆಚರಿಸುತ್ತಾರೆ. ವೈಷ್ಣವ ಪಂಥೀಯರು ಈ ದಿನವನ್ನು ಅತೀವ ಭಕ್ತಿಭಾವದಿಂದ ಆಚರಿಸುತ್ತಾರೆ. ಅನೇಕ ವೈಷ್ಣವ ದೇವಾಲಯಗಳಲ್ಲಿ ದೀಪಾರಾಧನೆ, ಶೋಭಾಯಾತ್ರೆ, ಕೃಷ್ಣಲೀಲೆ, ಭಾಗವತ ಪಠಣ, ಕೀರ್ತನೆ, ಭಜನೆ, ನೃತ್ಯ-ಗಾಯನ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮವು ಶ್ರಾವಣ ಕೃಷ್ಣ ಪಾಡ್ಯದಿಂದ ಶ್ರಾವಣ ಕೃಷ್ಣಾಷ್ಟಮಿಯವರೆಗೂ ನಡೆಯುತ್ತದೆ.

ಶ್ರೀಕೃಷ್ಣಜನ್ಮಾಷ್ಟಮಿ ವ್ರತ

ಈ ವ್ರತವನ್ನು ಅಷ್ಟಮಿಯಂದು ಮಾಡಲಾಗುತ್ತದೆ ಮತ್ತು ಎರಡನೆಯ ದಿನ ಅರ್ಥಾತ್ ಶ್ರಾವಣ ಕೃಷ್ಣ ನವಮಿಯಂದು ಪಾರಾಯಣ ಮಾಡಿ ವ್ರತವನ್ನು ಸಂಪನ್ನಗೊಳಿಸುತ್ತಾರೆ. ಈ ವ್ರತವು ಎಲ್ಲರೂ ಮಾಡುವಂತಹದ್ದಾಗಿದೆ. ಈ ವ್ರತವನ್ನು ಮಕ್ಕಳು, ಯುವಕರು, ವೃದ್ಧರು, ಸ್ತ್ರೀ- ಪುರುಷರು ಎಲ್ಲರೂ ಮಾಡಬಹುದು. ಪಾಪನಾಶ, ಸೌಖ್ಯವೃದ್ಧಿ, ಸಂತತಿ-ಸಂಪತ್ತಿ ಮತ್ತು ವೈಕುಂಠ ಪ್ರಾಪ್ತಿಯು ಈ ವ್ರತದ ಫಲವಾಗಿದೆ.

ಶ್ರೀಕೃಷ್ಣಜನ್ಮಾಷ್ಟಮಿಯ ವ್ರತಕ್ಕೆ ಸಂಬಂಧಿಸಿದ ಉಪವಾಸ

ಈ ದಿನ ದಿನವಿಡೀ ಉಪವಾಸವನ್ನು ಮಾಡಲಾಗುತ್ತದೆ. ನಿರಾಹಾರ ಉಪವಾಸವು ಸಾಧ್ಯವಿಲ್ಲದಿದ್ದರೆ ಫಲಾಹಾರ ಮಾಡಬಹುದು. ಇದಕ್ಕೆ ಒಂದು ದಿನ ಮುಂಚೆ ಅರ್ಥಾತ್ ಶ್ರಾವಣ ಕೃಷ್ಣ ಸಪ್ತಮಿಯಂದು ಅಂಶಾತ್ಮಕ ಭೋಜನವನ್ನು ಮಾಡುತ್ತಾರೆ.

ಶ್ರೀಕೃಷ್ಣಜನ್ಮಾಷ್ಟಮಿಯ ಪೂಜಾವಿಧಿ

ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಭಗವಾನ ಶ್ರೀಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದ್ದನು. ಆದುದರಿಂದ ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಧ್ಯರಾತ್ರಿಯಲ್ಲಿ ಮಾಡಲಾಗುತ್ತದೆ. ಮಧ್ಯರಾತ್ರಿ ಸ್ನಾನವನ್ನು ಮಾಡಿ ಪೂಜೆಯನ್ನು ಆರಂಭಿಸಲಾಗುತ್ತದೆ. ‘ಭಗವಾನ ಶ್ರೀಕೃಷ್ಣನ ಜನ್ಮವಾಗಿದೆ’ ಎಂಬ ಧಾರಣೆಯಿಂದ ಪೂಜೆಯನ್ನು ಮಾಡಬೇಕು.

ಪೂಜೆಯ ತಯಾರಿ

೧. ಪೂಜೆಗೆ ಮಣೆಯ ಮೇಲೆ ಭಗವಾನ ಶ್ರೀಕೃಷ್ಣನ ಮೂರ್ತಿಯನ್ನು ಇಡಿರಿ.
೨. ಅನಂತರ ಶ್ರೀಕೃಷ್ಣನ ಮೂರ್ತಿಗೆ ಚಂದನ ತಿಲಕವನ್ನು ಹಚ್ಚಿರಿ.
೩. ಅನಂತರ ಪುಷ್ಪವನ್ನು ಅರ್ಪಿಸಿರಿ.
೪. ಸಾಧ್ಯವಿದ್ದಲ್ಲಿ ಕೃಷ್ಣಕಮಲವನ್ನು ಅರ್ಪಿಸಿರಿ.
೫. ಈಗ ಶ್ರೀ ಕೃಷ್ಣನಿಗೆ ತುಳಸಿಯನ್ನು ಅರ್ಪಿಸಿರಿ.
೬. ಸಾಧ್ಯವಿದ್ದಲ್ಲಿ ತುಳಸಿಯ ಮಾಲೆಯನ್ನು ಅರ್ಪಿಸಿರಿ.
೭. ಈಗ ಊದುಬತ್ತಿಯನ್ನು ತೋರಿಸಿರಿ. ಎರಡು ಊದುಬತ್ತಿಗಳನ್ನು ತೆಗೆದುಕೊಂಡು ದಕ್ಷಿಣಾವರ್ತದಲ್ಲಿ ಮೂರು ಬಾರಿ ಸುತ್ತಿಸಿ.
೮. ಈಗ ದೀಪವನ್ನು ತೋರಿಸಿ.
೯. ಈಗ ಮೊಸರವಲಕ್ಕಿಯ ನೈವೇದ್ಯ ವನ್ನು ನಿವೇದಿಸಿ.
೧೦. ಪ್ರದಕ್ಷಿಣೆ: ಪೂಜಾವಿಧಿಯ ನಂತರ ಸಾಧ್ಯವಿದ್ದರೆ ಭಗವಾನ ಶ್ರೀಕೃಷ್ಣನಿಗೆ ಕಡಿಮೆಯೆಂದರೆ ಮೂರು ಅಥವಾ ಮೂರರ ಪಟ್ಟಿನಲ್ಲಿ ಪ್ರದಕ್ಷಿಣೆಯನ್ನು ಹಾಕಿರಿ. ಪ್ರದಕ್ಷಿಣೆಯನ್ನು ಹಾಕುವುದು ಸಾಧ್ಯವಿಲ್ಲದಿದ್ದಲ್ಲಿ ನಿಂತಲ್ಲಿಯೇ ಸುತ್ತ ತಿರುಗಿ ಪ್ರದಕ್ಷಿಣೆ ಹಾಕಿರಿ.
೧೧. ಅನಂತರ ಶರಣಾಗತ ಭಾವದಿಂದ ನಮಸ್ಕಾರ ಮಾಡುತ್ತಾ ಪ್ರಾರ್ಥನೆಯನ್ನು ಮಾಡಿರಿ.
೧೨. ಅಂತ್ಯದಲ್ಲಿ ಎಲ್ಲರೊಂದಿಗೆ ಪ್ರಸಾದವನ್ನು ಗ್ರಹಿಸಿ.
ಇಲ್ಲಿ ಗಮನದಲ್ಲಿಡಲು ಯೋಗ್ಯವಾಗಿರುವ ಅಂಶವೆಂದರೆ, ಪೂಜಾವಿಧಿಯಲ್ಲಿ ಸಂಪ್ರದಾಯ, ಪ್ರದೇಶ, ರೂಢಿ ಇತ್ಯಾದಿಗಳಿಗನುಸಾರ ಸ್ವಲ್ಪ ವ್ಯತ್ಯಾಸವಾಗಬಹುದು.

ಶ್ರೀಕೃಷ್ಣಜನ್ಮಾಷ್ಟಮಿಯಂದು ಇವುಗಳನ್ನು ಮಾಡಿ!

೧. ತಮ್ಮ ಬಂಧು ಮಿತ್ರರಿಗೆ ಕಿರುಸಂದೇಶಗಳನ್ನು ಕಳುಹಿಸಿ ಅವರಿಗೆ ಶ್ರೀಕೃಷ್ಣನ ನಾಮಜಪವನ್ನು ಮಾಡಲು ಹೇಳಿರಿ!
೨. ಶ್ರೀಕೃಷ್ಣನ ದೇವಸ್ಥಾನದಲ್ಲಿ ಸ್ವಚ್ಛತೆಯ ಸೇವೆಯನ್ನು ಮಾಡಿ!
೩. ಶ್ರೀಕೃಷ್ಣನ ಅವಮಾನವಾಗುತ್ತಿರುವುದು ಕಂಡು ಬಂದಲ್ಲಿ ಅದನ್ನು ತಡೆಗಟ್ಟಿರಿ!
೪. ಈ ದಿನ ಕೃಷ್ಣತತ್ತ್ವವು ಹೆಚ್ಚು ಪ್ರಮಾಣದಲ್ಲಿರುವುದರಿಂದ ಅದನ್ನು ಗ್ರಹಿಸಲು ‘ಓಂ ನಮೋ ಭಗವತೇ ವಾಸುದೇವಾಯ’ ನಾಮಜಪವನ್ನು ಮಾಡಿ! : ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣತತ್ತ್ವವು ಇತರ ದಿನಗಳ ತುಲನೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಅಂದರೆ ೧ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಆದುದರಿಂದ ಶ್ರೀಕೃಷ್ಣನ ಚೈತನ್ಯದಾಯಕ ತತ್ತ್ವಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ. ಈ ಲಹರಿಗಳಿಂದ ಜೀವಕ್ಕೆ ವ್ಯಾವಹಾರಿಕ ಮತ್ತು ಆಧ್ಯಾತ್ಮಿಕ ಈ ಎರಡೂ ಸ್ತರಗಳಲ್ಲಿ ಲಾಭವಾಗುತ್ತದೆ. ಈ ಕಾರ್ಯನಿರತ ತತ್ತ್ವಲಹರಿಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಈ ದಿನ ‘ಓಂ ನಮೋ ಭಗವತೇ ವಾಸುದೇವಾಯ|’ ಈ ನಾಮಜಪವನ್ನು ಹೆಚ್ಚೆಚ್ಚು ಮಾಡಿರಿ.

ಕೃಷ್ಣಗಾಯತ್ರಿ

ದೇವಕೀನಂದನಾಯ ವಿದ್ಮಹೇ | ವಾಸುದೇವಾಯ ಧೀಮಹಿ |
ತನ್ನೋ ಕೃಷ್ಣಃ ಪ್ರಚೋದಯಾತ್ ||

ಅರ್ಥ : ನಾವು ದೇವಕೀಪುತ್ರ ಕೃಷ್ಣನನ್ನು ಅರಿತಿದ್ದೇವೆ. ವಾಸುದೇವನ ಧ್ಯಾನ ಮಾಡುತ್ತೇವೆ. ಆ ಕೃಷ್ಣನು ನಮ್ಮ ಬುದ್ಧಿಗೆ ಸತ್ ಪ್ರೇರಣೆ ಕೊಡಲಿ.

ರಂಗೋಲಿ

Page+No+26a.jpg

ಶ್ರೀಕೃಷ್ಣನ ಉಪಾಸನೆಯಲ್ಲಿನ ಕೆಲವು ದಿನನಿತ್ಯದ ಕೃತಿಗಳು

ಪ್ರತಿಯೊಂದು ದೇವತೆಯ ಉಪಾಸನೆಯ ವಿಶಿಷ್ಟ ಶಾಸ್ತ್ರವಿದೆ;ಅಂದರೆ ಪ್ರತಿಯೊಂದು ದೇವತೆಯ ಉಪಾಸನೆಯಲ್ಲಿನ ಪ್ರತಿಯೊಂದು ಕೃತಿಯನ್ನು ವಿಶಿಷ್ಟ ರೀತಿಯಲ್ಲಿ ಮಾಡುವುದರ ಹಿಂದೆ ಶಾಸ್ತ್ರವಿದೆ. ಇಂತಹ ಕೃತಿಗಳಿಂದಲೇ ಆ ದೇವತೆಯ ತತ್ತ್ವದ ಹೆಚ್ಚೆಚ್ಚು ಲಾಭವಾಗಲು ಸಹಾಯವಾಗುತ್ತದೆ. ಶ್ರೀಕೃಷ್ಣನ ಉಪಾಸನೆಯಲ್ಲಿನ ಕೆಲವು ನಿತ್ಯಕೃತಿಗಳನ್ನು ನಿರ್ದಿಷ್ಟವಾಗಿ ಹೇಗೆ ಮಾಡಬೇಕು, ಎಂಬುದರ ಕುರಿತು ಈಶ್ವರನ ಕೃಪೆಯಿಂದ ದೊರಕಿದ ಜ್ಞಾನವನ್ನು ಮುಂದೆ ಕೋಷ್ಟಕದಲ್ಲಿ ನೀಡಲಾಗಿದೆ.

krishna+puja1.jpg

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 62 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ