ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆಯ ಪ್ರಾತ್ಯಕ್ಷಿತೆ

ಬೆಳ್ತಂಗಡಿ : ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡುವ ಕುರಿತ ಪ್ರಾತ್ಯಕ್ಷಿಕೆ ಗುರುವಾರ ಧರ್ಮಸ್ಥಳದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು.

ಡಾ.ಎ.ಪಿ.ಜೆ.ಕಲಾಂ ಶಿಷ್ಯರಾದ ಚೆನ್ನೈನ ಡಾ.ಕಾರ್ತಿಕ್ ನಾರಾಯಣ್ ಮತ್ತು ಅಣ್ಣಾ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಸೆಂಥಿಲ್ ಕುಮಾರ್ ನೇತೃತ್ವದ ಸುಗಾರಾಧನಾ ತಂಡದವರು ಕೊರೊನಾ ಸೋಂಕು ತಡೆಗಟ್ಟಲು ಹೊಸ ಸ್ಯಾನಿಟೈಸರ್ ಆವಿಷ್ಕರಿಸಿದ್ದಾರೆ.

ಕರ್ನಾಟಕದ ಸುಮಾರು ಒಂದು ಸಾವಿರ ಗ್ರಾಮಗಳನ್ನು ದತ್ತು ತೆಗೆದುಕೊಂಡು, ಒಂದು ಸಾವಿರ ಯುವಜನರಿಗೆ ಗ್ರಾಮೀಣಾಭಿವೃದ್ಧಿ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿಗೆ ಸುಗಾರಾಧನಾ ತಂಡದ ಅಶ್ರಯದಲ್ಲಿ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಉದ್ದೇಶಿಸಲಾಗಿದೆ.

ಚೆನ್ನೈನಲ್ಲಿರುವ ಅಣ್ಣಾ ವಿಶ್ವವಿದ್ಯಾಲಯದ ಎಂ.ಐ.ಟಿ.ಯಲ್ಲಿ ನಿರ್ಮಿಸಲಾದ ಬ್ಯಾಟರಿಚಾಲಿತ ಡ್ರೋನ್ ಬಳಸಿ, ಯಾವುದೇ ಕಟ್ಟಡದ ಹೊರ ಅವರಣವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಬಹುದು. ಈ ಡ್ರೋನ್ 16 ಲೀಟರ್ ಸಾಮರ್ಥ್ಯದ ಔಷಧದ ಟ್ಯಾಂಕ್ ಹೊಂದಿದ್ದು, ಐದು ಗಂಟೆಗಳ ಕಾಲ ಬಳಸಬಹುದಾಗಿದೆ.

ಈ ಯೋಜನೆಯ ಕಲ್ಪನೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಕನಸಿನ ಕೂಸಾಗಿದ್ದು, ಚೆನ್ನೈ, ಬೆಂಗಳೂರು, ತಮಿಳುನಾಡಿನಲ್ಲಿ ಈಗಾಗಲೇ ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ಬಳಕೆ ಮಾಡಲಾಗಿದೆ. ಈ ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಿಸಿದ ಪ್ರದೇಶಗಳಲ್ಲಿ ಕೊರೊನಾ ಸೋಂಕು ಸಂಪೂರ್ಣ ನಿವಾರಣೆಯಾಗಿದೆ. ಅಲ್ಲದೇ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಮಿಳುನಾಡು ಸರ್ಕಾರದ ಆರೋಗ್ಯ ಇಲಾಖೆ ದೃಢೀಕರಣ ಪತ್ರ ನೀಡಿದೆ ಎಂದು ಡಾ.ಕಾರ್ತಿಕ್ ನಾರಾಯಣ್ ಮಾಹಿತಿ ನೀಡಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ