ಶ್ರೀ ಲಕ್ಷ್ಮೀಯ ಅವಮಾನ ಮಾಡುವ ಹಾಗೂ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ ಚಲನಚಿತ್ರದ ಹೆಸರಿನಿಂದ ಅವರಿಗೆ ಪುನಃ ಪ್ರೋತ್ಸಾಹವೇ ಸಿಗಲಿದೆ. ಅದರೊಂದಿಗೆ ಈ ಚಲನಚಿತ್ರದ ನಾಯಕನ ಹೆಸರು ‘ಆಸಿಫ್’ ಹಾಗೂ ನಾಯಕಿಯ ಹೆಸರು ‘ಪ್ರಿಯಾ ಯಾದವ’ ಇಟ್ಟಿರುವುದು ಕಂಡು ಬಂದಿದೆ, ಅಂದರೆ ಇದರಿಂದ ಮುಸಲ್ಮಾನ ಯುವಕ ಹಾಗೂ ಹಿಂದೂ ಯುವತಿಯ ಸಂಬಂಧವನ್ನು ತೋರಿಸುವ ಮೂಲಕ ಉದ್ದೇಶಪೂರ್ವಕವಾಗಿ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡಿದೆ. ಆದ್ದರಿಂದ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಒತ್ತಾಯಿಸಿದ್ದಾರೆ.

ಶ್ರೀ. ಗೌಡ ಇವರು ತಮ್ಮ ಮಾತನ್ನು ಮುಂದುವರಿಸುತ್ತಾ, ಒಂದುಕಡೆ ‘ಮೊಹಮ್ಮದ : ದಿ ಮೆಸೆಂಜರ್ ಆಫ್ ಗಾಡ್’ ಈ ಚಲನಚಿತ್ರದಿಂದಾಗಿ ಮುಸಲ್ಮಾನರ ಧಾರ್ಮಿಕ ಭಾವನೆಯನ್ನು ನೋವಾಗುತ್ತದೆ ಎಂದು ಅದರಲ್ಲಿ ಸ್ವತಃ ಹಸ್ತಕ್ಷೇಪ ಮಾಡಿ ನಿರ್ಬಂಧ ಹೇರುವಂತೆ ಮಹಾರಾಷ್ಟ್ರದ ಗೃಹಸಚಿವ ಕೇಂದ್ರ ಸರಕಾರದ ಬಳಿ ಶಿಫಾರಸ್ಸನ್ನು ಮಾಡಿತ್ತು. ಅದೇ ರೀತಿ ಹಿಂದೂಗಳ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಮೇಲೆಯೂ ಕೇಂದ್ರ ಹಾಗೂ ಕರ್ನಾಟಕದ ರಾಜ್ಯ ಸರಕಾರವು ನಿರ್ಬಂಧದ ಶಿಫಾರಸ್ಸನ್ನು ಮಾಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ, ಎಂದರು.

ಈ ಚಿತ್ರದ ಟ್ರೈಲರ್‌ನಲ್ಲಿ ಅಕ್ಷಯ ಕುಮಾರ್ ಭೂತ ಪೀಡಿತ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅದರಲ್ಲಿರುವ ಭೂತ ತೃತೀಯಲಿಂಗಕ್ಕೆ ಸೇರಿದೆ ಎಂದು ತೋರುತ್ತದೆ. ಅಲ್ಲದೆ, ದೊಡ್ಡ ಕೆಂಪು ಕುಂಕುಮ, ಕೆಂಪು ಸೀರೆ ಧರಿಸಿ, ಕೂದಲನ್ನು ಸಡಿಲವಾಗಿ ಬಿಟ್ಟು, ಕೈಯಲ್ಲಿ ತ್ರಿಶೂಲ ಹಿಡಿದು ನರ್ತಿಸುವುದು ಅಂದರೆ ಒಂದು ರೀತಿ ದೇವಿಯ ರೂಪದಂತೆ ನಟಿಸುವ ಪ್ರಯತ್ನವು ಖಂಡನೀಯವಾಗಿದೆ. ದೀಪಾವಳಿಯ ಸಂದರ್ಭದಲ್ಲಿ ‘ಲಕ್ಷ್ಮಿ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡುತ್ತಿರುವವರು ಈದ್ ಸಂದರ್ಭದಲ್ಲಿ ‘ಆಯೆಷಾ ಬಾಂಬ್’, ‘ಶಬಿನಾ ಬಾಂಬ್’, ‘ಫಾತಿಮಾ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡಲು ಧೈರ್ಯ ಮಾಡುತ್ತಾರೆಯೇ? ಚಲನಚಿತ್ರಗಳ ನಿರ್ಮಾಪಕರು ಮತ್ತು ಆಡಳಿತಗಾರರು ಮುಸಲ್ಮಾನರ ಧಾರ್ಮಿಕ ಭಾವನೆಗಳ ಬಗ್ಗೆ ಯೋಚಿಸುವಂತೆ ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಏಕೆ ಯೋಚಿಸುವುದಿಲ್ಲ? ಹಿಂದೂಗಳೊಂದಿಗೆ ಪಕ್ಷಪಾತ ಮಾಡುವುದೇ ಸರ್ವಧರ್ಮಸಮಭಾವದ ವ್ಯಾಖ್ಯೆಯಾಗದೆಯೇ ? ಹಿಂದೂವಿರೋಧವೇ ಪ್ರಸ್ತುತ ಜಾತ್ಯತೀತತೆಯಂತಿದೆ ಎಂದು ಶ್ರೀ. ಗೌಡ ಇವರು ಹೇಳಿದ್ದಾರೆ.

ಚಲನಚಿತ್ರ ನಿರ್ಮಾಪಕಿ ಶಬೀನಾ ಖಾನ್ ಹಾಗೂ ಬರಹಗಾರ ಫರ್ಹಾದ್ ಸಾಮಜಿ ಅವರು ಉದ್ದೇಶಪೂರ್ವಕವಾಗಿ ಹಿಂದೂದ್ವೇಷ ಹಬ್ಬಿಸುತ್ತಿದ್ದಾರೆ ಎಂಬುದು ಗಮನಕ್ಕೆ ಬರುತ್ತದೆ. ಆದರೆ, ಈ ಬೇಡಿಕೆಗಳನ್ನು ಗಮನಿಸದಿದ್ದರೆ ತೀವ್ರ ಆಂದೋಲನ ಮಾಡುವುದಾಗಿ ಶ್ರೀ. ಗೌಡ ಇವರು ಈ ವೇಳೆ ಎಚ್ಚರಿಕೆ ನೀಡಿದ್ದಾರೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 18 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 23 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 39 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 215 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ