ಶ್ರೀ ಲಕ್ಷ್ಮೀಯ ಅವಮಾನ ಮಾಡುವ ಹಾಗೂ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ ಚಲನಚಿತ್ರದ ಹೆಸರಿನಿಂದ ಅವರಿಗೆ ಪುನಃ ಪ್ರೋತ್ಸಾಹವೇ ಸಿಗಲಿದೆ. ಅದರೊಂದಿಗೆ ಈ ಚಲನಚಿತ್ರದ ನಾಯಕನ ಹೆಸರು ‘ಆಸಿಫ್’ ಹಾಗೂ ನಾಯಕಿಯ ಹೆಸರು ‘ಪ್ರಿಯಾ ಯಾದವ’ ಇಟ್ಟಿರುವುದು ಕಂಡು ಬಂದಿದೆ, ಅಂದರೆ ಇದರಿಂದ ಮುಸಲ್ಮಾನ ಯುವಕ ಹಾಗೂ ಹಿಂದೂ ಯುವತಿಯ ಸಂಬಂಧವನ್ನು ತೋರಿಸುವ ಮೂಲಕ ಉದ್ದೇಶಪೂರ್ವಕವಾಗಿ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡಿದೆ. ಆದ್ದರಿಂದ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಒತ್ತಾಯಿಸಿದ್ದಾರೆ.

ಶ್ರೀ. ಗೌಡ ಇವರು ತಮ್ಮ ಮಾತನ್ನು ಮುಂದುವರಿಸುತ್ತಾ, ಒಂದುಕಡೆ ‘ಮೊಹಮ್ಮದ : ದಿ ಮೆಸೆಂಜರ್ ಆಫ್ ಗಾಡ್’ ಈ ಚಲನಚಿತ್ರದಿಂದಾಗಿ ಮುಸಲ್ಮಾನರ ಧಾರ್ಮಿಕ ಭಾವನೆಯನ್ನು ನೋವಾಗುತ್ತದೆ ಎಂದು ಅದರಲ್ಲಿ ಸ್ವತಃ ಹಸ್ತಕ್ಷೇಪ ಮಾಡಿ ನಿರ್ಬಂಧ ಹೇರುವಂತೆ ಮಹಾರಾಷ್ಟ್ರದ ಗೃಹಸಚಿವ ಕೇಂದ್ರ ಸರಕಾರದ ಬಳಿ ಶಿಫಾರಸ್ಸನ್ನು ಮಾಡಿತ್ತು. ಅದೇ ರೀತಿ ಹಿಂದೂಗಳ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಮೇಲೆಯೂ ಕೇಂದ್ರ ಹಾಗೂ ಕರ್ನಾಟಕದ ರಾಜ್ಯ ಸರಕಾರವು ನಿರ್ಬಂಧದ ಶಿಫಾರಸ್ಸನ್ನು ಮಾಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ, ಎಂದರು.

ಈ ಚಿತ್ರದ ಟ್ರೈಲರ್‌ನಲ್ಲಿ ಅಕ್ಷಯ ಕುಮಾರ್ ಭೂತ ಪೀಡಿತ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅದರಲ್ಲಿರುವ ಭೂತ ತೃತೀಯಲಿಂಗಕ್ಕೆ ಸೇರಿದೆ ಎಂದು ತೋರುತ್ತದೆ. ಅಲ್ಲದೆ, ದೊಡ್ಡ ಕೆಂಪು ಕುಂಕುಮ, ಕೆಂಪು ಸೀರೆ ಧರಿಸಿ, ಕೂದಲನ್ನು ಸಡಿಲವಾಗಿ ಬಿಟ್ಟು, ಕೈಯಲ್ಲಿ ತ್ರಿಶೂಲ ಹಿಡಿದು ನರ್ತಿಸುವುದು ಅಂದರೆ ಒಂದು ರೀತಿ ದೇವಿಯ ರೂಪದಂತೆ ನಟಿಸುವ ಪ್ರಯತ್ನವು ಖಂಡನೀಯವಾಗಿದೆ. ದೀಪಾವಳಿಯ ಸಂದರ್ಭದಲ್ಲಿ ‘ಲಕ್ಷ್ಮಿ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡುತ್ತಿರುವವರು ಈದ್ ಸಂದರ್ಭದಲ್ಲಿ ‘ಆಯೆಷಾ ಬಾಂಬ್’, ‘ಶಬಿನಾ ಬಾಂಬ್’, ‘ಫಾತಿಮಾ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡಲು ಧೈರ್ಯ ಮಾಡುತ್ತಾರೆಯೇ? ಚಲನಚಿತ್ರಗಳ ನಿರ್ಮಾಪಕರು ಮತ್ತು ಆಡಳಿತಗಾರರು ಮುಸಲ್ಮಾನರ ಧಾರ್ಮಿಕ ಭಾವನೆಗಳ ಬಗ್ಗೆ ಯೋಚಿಸುವಂತೆ ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಏಕೆ ಯೋಚಿಸುವುದಿಲ್ಲ? ಹಿಂದೂಗಳೊಂದಿಗೆ ಪಕ್ಷಪಾತ ಮಾಡುವುದೇ ಸರ್ವಧರ್ಮಸಮಭಾವದ ವ್ಯಾಖ್ಯೆಯಾಗದೆಯೇ ? ಹಿಂದೂವಿರೋಧವೇ ಪ್ರಸ್ತುತ ಜಾತ್ಯತೀತತೆಯಂತಿದೆ ಎಂದು ಶ್ರೀ. ಗೌಡ ಇವರು ಹೇಳಿದ್ದಾರೆ.

ಚಲನಚಿತ್ರ ನಿರ್ಮಾಪಕಿ ಶಬೀನಾ ಖಾನ್ ಹಾಗೂ ಬರಹಗಾರ ಫರ್ಹಾದ್ ಸಾಮಜಿ ಅವರು ಉದ್ದೇಶಪೂರ್ವಕವಾಗಿ ಹಿಂದೂದ್ವೇಷ ಹಬ್ಬಿಸುತ್ತಿದ್ದಾರೆ ಎಂಬುದು ಗಮನಕ್ಕೆ ಬರುತ್ತದೆ. ಆದರೆ, ಈ ಬೇಡಿಕೆಗಳನ್ನು ಗಮನಿಸದಿದ್ದರೆ ತೀವ್ರ ಆಂದೋಲನ ಮಾಡುವುದಾಗಿ ಶ್ರೀ. ಗೌಡ ಇವರು ಈ ವೇಳೆ ಎಚ್ಚರಿಕೆ ನೀಡಿದ್ದಾರೆ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 63 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️