ಶ್ರೀ ಲಕ್ಷ್ಮೀಯ ಅವಮಾನ ಮಾಡುವ ಹಾಗೂ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ ಚಲನಚಿತ್ರದ ಹೆಸರಿನಿಂದ ಅವರಿಗೆ ಪುನಃ ಪ್ರೋತ್ಸಾಹವೇ ಸಿಗಲಿದೆ. ಅದರೊಂದಿಗೆ ಈ ಚಲನಚಿತ್ರದ ನಾಯಕನ ಹೆಸರು ‘ಆಸಿಫ್’ ಹಾಗೂ ನಾಯಕಿಯ ಹೆಸರು ‘ಪ್ರಿಯಾ ಯಾದವ’ ಇಟ್ಟಿರುವುದು ಕಂಡು ಬಂದಿದೆ, ಅಂದರೆ ಇದರಿಂದ ಮುಸಲ್ಮಾನ ಯುವಕ ಹಾಗೂ ಹಿಂದೂ ಯುವತಿಯ ಸಂಬಂಧವನ್ನು ತೋರಿಸುವ ಮೂಲಕ ಉದ್ದೇಶಪೂರ್ವಕವಾಗಿ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡಿದೆ. ಆದ್ದರಿಂದ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಒತ್ತಾಯಿಸಿದ್ದಾರೆ.

ಶ್ರೀ. ಗೌಡ ಇವರು ತಮ್ಮ ಮಾತನ್ನು ಮುಂದುವರಿಸುತ್ತಾ, ಒಂದುಕಡೆ ‘ಮೊಹಮ್ಮದ : ದಿ ಮೆಸೆಂಜರ್ ಆಫ್ ಗಾಡ್’ ಈ ಚಲನಚಿತ್ರದಿಂದಾಗಿ ಮುಸಲ್ಮಾನರ ಧಾರ್ಮಿಕ ಭಾವನೆಯನ್ನು ನೋವಾಗುತ್ತದೆ ಎಂದು ಅದರಲ್ಲಿ ಸ್ವತಃ ಹಸ್ತಕ್ಷೇಪ ಮಾಡಿ ನಿರ್ಬಂಧ ಹೇರುವಂತೆ ಮಹಾರಾಷ್ಟ್ರದ ಗೃಹಸಚಿವ ಕೇಂದ್ರ ಸರಕಾರದ ಬಳಿ ಶಿಫಾರಸ್ಸನ್ನು ಮಾಡಿತ್ತು. ಅದೇ ರೀತಿ ಹಿಂದೂಗಳ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಮೇಲೆಯೂ ಕೇಂದ್ರ ಹಾಗೂ ಕರ್ನಾಟಕದ ರಾಜ್ಯ ಸರಕಾರವು ನಿರ್ಬಂಧದ ಶಿಫಾರಸ್ಸನ್ನು ಮಾಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ, ಎಂದರು.

ಈ ಚಿತ್ರದ ಟ್ರೈಲರ್‌ನಲ್ಲಿ ಅಕ್ಷಯ ಕುಮಾರ್ ಭೂತ ಪೀಡಿತ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅದರಲ್ಲಿರುವ ಭೂತ ತೃತೀಯಲಿಂಗಕ್ಕೆ ಸೇರಿದೆ ಎಂದು ತೋರುತ್ತದೆ. ಅಲ್ಲದೆ, ದೊಡ್ಡ ಕೆಂಪು ಕುಂಕುಮ, ಕೆಂಪು ಸೀರೆ ಧರಿಸಿ, ಕೂದಲನ್ನು ಸಡಿಲವಾಗಿ ಬಿಟ್ಟು, ಕೈಯಲ್ಲಿ ತ್ರಿಶೂಲ ಹಿಡಿದು ನರ್ತಿಸುವುದು ಅಂದರೆ ಒಂದು ರೀತಿ ದೇವಿಯ ರೂಪದಂತೆ ನಟಿಸುವ ಪ್ರಯತ್ನವು ಖಂಡನೀಯವಾಗಿದೆ. ದೀಪಾವಳಿಯ ಸಂದರ್ಭದಲ್ಲಿ ‘ಲಕ್ಷ್ಮಿ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡುತ್ತಿರುವವರು ಈದ್ ಸಂದರ್ಭದಲ್ಲಿ ‘ಆಯೆಷಾ ಬಾಂಬ್’, ‘ಶಬಿನಾ ಬಾಂಬ್’, ‘ಫಾತಿಮಾ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡಲು ಧೈರ್ಯ ಮಾಡುತ್ತಾರೆಯೇ? ಚಲನಚಿತ್ರಗಳ ನಿರ್ಮಾಪಕರು ಮತ್ತು ಆಡಳಿತಗಾರರು ಮುಸಲ್ಮಾನರ ಧಾರ್ಮಿಕ ಭಾವನೆಗಳ ಬಗ್ಗೆ ಯೋಚಿಸುವಂತೆ ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಏಕೆ ಯೋಚಿಸುವುದಿಲ್ಲ? ಹಿಂದೂಗಳೊಂದಿಗೆ ಪಕ್ಷಪಾತ ಮಾಡುವುದೇ ಸರ್ವಧರ್ಮಸಮಭಾವದ ವ್ಯಾಖ್ಯೆಯಾಗದೆಯೇ ? ಹಿಂದೂವಿರೋಧವೇ ಪ್ರಸ್ತುತ ಜಾತ್ಯತೀತತೆಯಂತಿದೆ ಎಂದು ಶ್ರೀ. ಗೌಡ ಇವರು ಹೇಳಿದ್ದಾರೆ.

ಚಲನಚಿತ್ರ ನಿರ್ಮಾಪಕಿ ಶಬೀನಾ ಖಾನ್ ಹಾಗೂ ಬರಹಗಾರ ಫರ್ಹಾದ್ ಸಾಮಜಿ ಅವರು ಉದ್ದೇಶಪೂರ್ವಕವಾಗಿ ಹಿಂದೂದ್ವೇಷ ಹಬ್ಬಿಸುತ್ತಿದ್ದಾರೆ ಎಂಬುದು ಗಮನಕ್ಕೆ ಬರುತ್ತದೆ. ಆದರೆ, ಈ ಬೇಡಿಕೆಗಳನ್ನು ಗಮನಿಸದಿದ್ದರೆ ತೀವ್ರ ಆಂದೋಲನ ಮಾಡುವುದಾಗಿ ಶ್ರೀ. ಗೌಡ ಇವರು ಈ ವೇಳೆ ಎಚ್ಚರಿಕೆ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ