ಶ್ರೀ ಲಕ್ಷ್ಮೀಯ ಅವಮಾನ ಮಾಡುವ ಹಾಗೂ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ ಚಲನಚಿತ್ರದ ಹೆಸರಿನಿಂದ ಅವರಿಗೆ ಪುನಃ ಪ್ರೋತ್ಸಾಹವೇ ಸಿಗಲಿದೆ. ಅದರೊಂದಿಗೆ ಈ ಚಲನಚಿತ್ರದ ನಾಯಕನ ಹೆಸರು ‘ಆಸಿಫ್’ ಹಾಗೂ ನಾಯಕಿಯ ಹೆಸರು ‘ಪ್ರಿಯಾ ಯಾದವ’ ಇಟ್ಟಿರುವುದು ಕಂಡು ಬಂದಿದೆ, ಅಂದರೆ ಇದರಿಂದ ಮುಸಲ್ಮಾನ ಯುವಕ ಹಾಗೂ ಹಿಂದೂ ಯುವತಿಯ ಸಂಬಂಧವನ್ನು ತೋರಿಸುವ ಮೂಲಕ ಉದ್ದೇಶಪೂರ್ವಕವಾಗಿ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡಿದೆ. ಆದ್ದರಿಂದ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಒತ್ತಾಯಿಸಿದ್ದಾರೆ.

ಶ್ರೀ. ಗೌಡ ಇವರು ತಮ್ಮ ಮಾತನ್ನು ಮುಂದುವರಿಸುತ್ತಾ, ಒಂದುಕಡೆ ‘ಮೊಹಮ್ಮದ : ದಿ ಮೆಸೆಂಜರ್ ಆಫ್ ಗಾಡ್’ ಈ ಚಲನಚಿತ್ರದಿಂದಾಗಿ ಮುಸಲ್ಮಾನರ ಧಾರ್ಮಿಕ ಭಾವನೆಯನ್ನು ನೋವಾಗುತ್ತದೆ ಎಂದು ಅದರಲ್ಲಿ ಸ್ವತಃ ಹಸ್ತಕ್ಷೇಪ ಮಾಡಿ ನಿರ್ಬಂಧ ಹೇರುವಂತೆ ಮಹಾರಾಷ್ಟ್ರದ ಗೃಹಸಚಿವ ಕೇಂದ್ರ ಸರಕಾರದ ಬಳಿ ಶಿಫಾರಸ್ಸನ್ನು ಮಾಡಿತ್ತು. ಅದೇ ರೀತಿ ಹಿಂದೂಗಳ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಮೇಲೆಯೂ ಕೇಂದ್ರ ಹಾಗೂ ಕರ್ನಾಟಕದ ರಾಜ್ಯ ಸರಕಾರವು ನಿರ್ಬಂಧದ ಶಿಫಾರಸ್ಸನ್ನು ಮಾಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ, ಎಂದರು.

ಈ ಚಿತ್ರದ ಟ್ರೈಲರ್‌ನಲ್ಲಿ ಅಕ್ಷಯ ಕುಮಾರ್ ಭೂತ ಪೀಡಿತ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅದರಲ್ಲಿರುವ ಭೂತ ತೃತೀಯಲಿಂಗಕ್ಕೆ ಸೇರಿದೆ ಎಂದು ತೋರುತ್ತದೆ. ಅಲ್ಲದೆ, ದೊಡ್ಡ ಕೆಂಪು ಕುಂಕುಮ, ಕೆಂಪು ಸೀರೆ ಧರಿಸಿ, ಕೂದಲನ್ನು ಸಡಿಲವಾಗಿ ಬಿಟ್ಟು, ಕೈಯಲ್ಲಿ ತ್ರಿಶೂಲ ಹಿಡಿದು ನರ್ತಿಸುವುದು ಅಂದರೆ ಒಂದು ರೀತಿ ದೇವಿಯ ರೂಪದಂತೆ ನಟಿಸುವ ಪ್ರಯತ್ನವು ಖಂಡನೀಯವಾಗಿದೆ. ದೀಪಾವಳಿಯ ಸಂದರ್ಭದಲ್ಲಿ ‘ಲಕ್ಷ್ಮಿ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡುತ್ತಿರುವವರು ಈದ್ ಸಂದರ್ಭದಲ್ಲಿ ‘ಆಯೆಷಾ ಬಾಂಬ್’, ‘ಶಬಿನಾ ಬಾಂಬ್’, ‘ಫಾತಿಮಾ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡಲು ಧೈರ್ಯ ಮಾಡುತ್ತಾರೆಯೇ? ಚಲನಚಿತ್ರಗಳ ನಿರ್ಮಾಪಕರು ಮತ್ತು ಆಡಳಿತಗಾರರು ಮುಸಲ್ಮಾನರ ಧಾರ್ಮಿಕ ಭಾವನೆಗಳ ಬಗ್ಗೆ ಯೋಚಿಸುವಂತೆ ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಏಕೆ ಯೋಚಿಸುವುದಿಲ್ಲ? ಹಿಂದೂಗಳೊಂದಿಗೆ ಪಕ್ಷಪಾತ ಮಾಡುವುದೇ ಸರ್ವಧರ್ಮಸಮಭಾವದ ವ್ಯಾಖ್ಯೆಯಾಗದೆಯೇ ? ಹಿಂದೂವಿರೋಧವೇ ಪ್ರಸ್ತುತ ಜಾತ್ಯತೀತತೆಯಂತಿದೆ ಎಂದು ಶ್ರೀ. ಗೌಡ ಇವರು ಹೇಳಿದ್ದಾರೆ.

ಚಲನಚಿತ್ರ ನಿರ್ಮಾಪಕಿ ಶಬೀನಾ ಖಾನ್ ಹಾಗೂ ಬರಹಗಾರ ಫರ್ಹಾದ್ ಸಾಮಜಿ ಅವರು ಉದ್ದೇಶಪೂರ್ವಕವಾಗಿ ಹಿಂದೂದ್ವೇಷ ಹಬ್ಬಿಸುತ್ತಿದ್ದಾರೆ ಎಂಬುದು ಗಮನಕ್ಕೆ ಬರುತ್ತದೆ. ಆದರೆ, ಈ ಬೇಡಿಕೆಗಳನ್ನು ಗಮನಿಸದಿದ್ದರೆ ತೀವ್ರ ಆಂದೋಲನ ಮಾಡುವುದಾಗಿ ಶ್ರೀ. ಗೌಡ ಇವರು ಈ ವೇಳೆ ಎಚ್ಚರಿಕೆ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!