ಶ್ರೀ ಲಕ್ಷ್ಮೀಯ ಅವಮಾನ ಮಾಡುವ ಹಾಗೂ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ ಚಲನಚಿತ್ರದ ಹೆಸರಿನಿಂದ ಅವರಿಗೆ ಪುನಃ ಪ್ರೋತ್ಸಾಹವೇ ಸಿಗಲಿದೆ. ಅದರೊಂದಿಗೆ ಈ ಚಲನಚಿತ್ರದ ನಾಯಕನ ಹೆಸರು ‘ಆಸಿಫ್’ ಹಾಗೂ ನಾಯಕಿಯ ಹೆಸರು ‘ಪ್ರಿಯಾ ಯಾದವ’ ಇಟ್ಟಿರುವುದು ಕಂಡು ಬಂದಿದೆ, ಅಂದರೆ ಇದರಿಂದ ಮುಸಲ್ಮಾನ ಯುವಕ ಹಾಗೂ ಹಿಂದೂ ಯುವತಿಯ ಸಂಬಂಧವನ್ನು ತೋರಿಸುವ ಮೂಲಕ ಉದ್ದೇಶಪೂರ್ವಕವಾಗಿ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡಿದೆ. ಆದ್ದರಿಂದ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಒತ್ತಾಯಿಸಿದ್ದಾರೆ.

ಶ್ರೀ. ಗೌಡ ಇವರು ತಮ್ಮ ಮಾತನ್ನು ಮುಂದುವರಿಸುತ್ತಾ, ಒಂದುಕಡೆ ‘ಮೊಹಮ್ಮದ : ದಿ ಮೆಸೆಂಜರ್ ಆಫ್ ಗಾಡ್’ ಈ ಚಲನಚಿತ್ರದಿಂದಾಗಿ ಮುಸಲ್ಮಾನರ ಧಾರ್ಮಿಕ ಭಾವನೆಯನ್ನು ನೋವಾಗುತ್ತದೆ ಎಂದು ಅದರಲ್ಲಿ ಸ್ವತಃ ಹಸ್ತಕ್ಷೇಪ ಮಾಡಿ ನಿರ್ಬಂಧ ಹೇರುವಂತೆ ಮಹಾರಾಷ್ಟ್ರದ ಗೃಹಸಚಿವ ಕೇಂದ್ರ ಸರಕಾರದ ಬಳಿ ಶಿಫಾರಸ್ಸನ್ನು ಮಾಡಿತ್ತು. ಅದೇ ರೀತಿ ಹಿಂದೂಗಳ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಮೇಲೆಯೂ ಕೇಂದ್ರ ಹಾಗೂ ಕರ್ನಾಟಕದ ರಾಜ್ಯ ಸರಕಾರವು ನಿರ್ಬಂಧದ ಶಿಫಾರಸ್ಸನ್ನು ಮಾಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ, ಎಂದರು.

ಈ ಚಿತ್ರದ ಟ್ರೈಲರ್‌ನಲ್ಲಿ ಅಕ್ಷಯ ಕುಮಾರ್ ಭೂತ ಪೀಡಿತ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅದರಲ್ಲಿರುವ ಭೂತ ತೃತೀಯಲಿಂಗಕ್ಕೆ ಸೇರಿದೆ ಎಂದು ತೋರುತ್ತದೆ. ಅಲ್ಲದೆ, ದೊಡ್ಡ ಕೆಂಪು ಕುಂಕುಮ, ಕೆಂಪು ಸೀರೆ ಧರಿಸಿ, ಕೂದಲನ್ನು ಸಡಿಲವಾಗಿ ಬಿಟ್ಟು, ಕೈಯಲ್ಲಿ ತ್ರಿಶೂಲ ಹಿಡಿದು ನರ್ತಿಸುವುದು ಅಂದರೆ ಒಂದು ರೀತಿ ದೇವಿಯ ರೂಪದಂತೆ ನಟಿಸುವ ಪ್ರಯತ್ನವು ಖಂಡನೀಯವಾಗಿದೆ. ದೀಪಾವಳಿಯ ಸಂದರ್ಭದಲ್ಲಿ ‘ಲಕ್ಷ್ಮಿ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡುತ್ತಿರುವವರು ಈದ್ ಸಂದರ್ಭದಲ್ಲಿ ‘ಆಯೆಷಾ ಬಾಂಬ್’, ‘ಶಬಿನಾ ಬಾಂಬ್’, ‘ಫಾತಿಮಾ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡಲು ಧೈರ್ಯ ಮಾಡುತ್ತಾರೆಯೇ? ಚಲನಚಿತ್ರಗಳ ನಿರ್ಮಾಪಕರು ಮತ್ತು ಆಡಳಿತಗಾರರು ಮುಸಲ್ಮಾನರ ಧಾರ್ಮಿಕ ಭಾವನೆಗಳ ಬಗ್ಗೆ ಯೋಚಿಸುವಂತೆ ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಏಕೆ ಯೋಚಿಸುವುದಿಲ್ಲ? ಹಿಂದೂಗಳೊಂದಿಗೆ ಪಕ್ಷಪಾತ ಮಾಡುವುದೇ ಸರ್ವಧರ್ಮಸಮಭಾವದ ವ್ಯಾಖ್ಯೆಯಾಗದೆಯೇ ? ಹಿಂದೂವಿರೋಧವೇ ಪ್ರಸ್ತುತ ಜಾತ್ಯತೀತತೆಯಂತಿದೆ ಎಂದು ಶ್ರೀ. ಗೌಡ ಇವರು ಹೇಳಿದ್ದಾರೆ.

ಚಲನಚಿತ್ರ ನಿರ್ಮಾಪಕಿ ಶಬೀನಾ ಖಾನ್ ಹಾಗೂ ಬರಹಗಾರ ಫರ್ಹಾದ್ ಸಾಮಜಿ ಅವರು ಉದ್ದೇಶಪೂರ್ವಕವಾಗಿ ಹಿಂದೂದ್ವೇಷ ಹಬ್ಬಿಸುತ್ತಿದ್ದಾರೆ ಎಂಬುದು ಗಮನಕ್ಕೆ ಬರುತ್ತದೆ. ಆದರೆ, ಈ ಬೇಡಿಕೆಗಳನ್ನು ಗಮನಿಸದಿದ್ದರೆ ತೀವ್ರ ಆಂದೋಲನ ಮಾಡುವುದಾಗಿ ಶ್ರೀ. ಗೌಡ ಇವರು ಈ ವೇಳೆ ಎಚ್ಚರಿಕೆ ನೀಡಿದ್ದಾರೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು