ಶ್ರೀ ಲಕ್ಷ್ಮೀಯ ಅವಮಾನ ಮಾಡುವ ಹಾಗೂ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ ಚಲನಚಿತ್ರದ ಹೆಸರಿನಿಂದ ಅವರಿಗೆ ಪುನಃ ಪ್ರೋತ್ಸಾಹವೇ ಸಿಗಲಿದೆ. ಅದರೊಂದಿಗೆ ಈ ಚಲನಚಿತ್ರದ ನಾಯಕನ ಹೆಸರು ‘ಆಸಿಫ್’ ಹಾಗೂ ನಾಯಕಿಯ ಹೆಸರು ‘ಪ್ರಿಯಾ ಯಾದವ’ ಇಟ್ಟಿರುವುದು ಕಂಡು ಬಂದಿದೆ, ಅಂದರೆ ಇದರಿಂದ ಮುಸಲ್ಮಾನ ಯುವಕ ಹಾಗೂ ಹಿಂದೂ ಯುವತಿಯ ಸಂಬಂಧವನ್ನು ತೋರಿಸುವ ಮೂಲಕ ಉದ್ದೇಶಪೂರ್ವಕವಾಗಿ ‘ಲವ್ ಜಿಹಾದ್’ಗೆ ಪ್ರೋತ್ಸಾಹ ನೀಡಿದೆ. ಆದ್ದರಿಂದ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಒತ್ತಾಯಿಸಿದ್ದಾರೆ.

ಶ್ರೀ. ಗೌಡ ಇವರು ತಮ್ಮ ಮಾತನ್ನು ಮುಂದುವರಿಸುತ್ತಾ, ಒಂದುಕಡೆ ‘ಮೊಹಮ್ಮದ : ದಿ ಮೆಸೆಂಜರ್ ಆಫ್ ಗಾಡ್’ ಈ ಚಲನಚಿತ್ರದಿಂದಾಗಿ ಮುಸಲ್ಮಾನರ ಧಾರ್ಮಿಕ ಭಾವನೆಯನ್ನು ನೋವಾಗುತ್ತದೆ ಎಂದು ಅದರಲ್ಲಿ ಸ್ವತಃ ಹಸ್ತಕ್ಷೇಪ ಮಾಡಿ ನಿರ್ಬಂಧ ಹೇರುವಂತೆ ಮಹಾರಾಷ್ಟ್ರದ ಗೃಹಸಚಿವ ಕೇಂದ್ರ ಸರಕಾರದ ಬಳಿ ಶಿಫಾರಸ್ಸನ್ನು ಮಾಡಿತ್ತು. ಅದೇ ರೀತಿ ಹಿಂದೂಗಳ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಬಾಂಬ್’ ಚಲನಚಿತ್ರದ ಮೇಲೆಯೂ ಕೇಂದ್ರ ಹಾಗೂ ಕರ್ನಾಟಕದ ರಾಜ್ಯ ಸರಕಾರವು ನಿರ್ಬಂಧದ ಶಿಫಾರಸ್ಸನ್ನು ಮಾಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ, ಎಂದರು.

ಈ ಚಿತ್ರದ ಟ್ರೈಲರ್‌ನಲ್ಲಿ ಅಕ್ಷಯ ಕುಮಾರ್ ಭೂತ ಪೀಡಿತ ವ್ಯಕ್ತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅದರಲ್ಲಿರುವ ಭೂತ ತೃತೀಯಲಿಂಗಕ್ಕೆ ಸೇರಿದೆ ಎಂದು ತೋರುತ್ತದೆ. ಅಲ್ಲದೆ, ದೊಡ್ಡ ಕೆಂಪು ಕುಂಕುಮ, ಕೆಂಪು ಸೀರೆ ಧರಿಸಿ, ಕೂದಲನ್ನು ಸಡಿಲವಾಗಿ ಬಿಟ್ಟು, ಕೈಯಲ್ಲಿ ತ್ರಿಶೂಲ ಹಿಡಿದು ನರ್ತಿಸುವುದು ಅಂದರೆ ಒಂದು ರೀತಿ ದೇವಿಯ ರೂಪದಂತೆ ನಟಿಸುವ ಪ್ರಯತ್ನವು ಖಂಡನೀಯವಾಗಿದೆ. ದೀಪಾವಳಿಯ ಸಂದರ್ಭದಲ್ಲಿ ‘ಲಕ್ಷ್ಮಿ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡುತ್ತಿರುವವರು ಈದ್ ಸಂದರ್ಭದಲ್ಲಿ ‘ಆಯೆಷಾ ಬಾಂಬ್’, ‘ಶಬಿನಾ ಬಾಂಬ್’, ‘ಫಾತಿಮಾ ಬಾಂಬ್’ ಹೆಸರಿನಲ್ಲಿ ಚಲನಚಿತ್ರಗಳನ್ನು ಮಾಡಲು ಧೈರ್ಯ ಮಾಡುತ್ತಾರೆಯೇ? ಚಲನಚಿತ್ರಗಳ ನಿರ್ಮಾಪಕರು ಮತ್ತು ಆಡಳಿತಗಾರರು ಮುಸಲ್ಮಾನರ ಧಾರ್ಮಿಕ ಭಾವನೆಗಳ ಬಗ್ಗೆ ಯೋಚಿಸುವಂತೆ ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಏಕೆ ಯೋಚಿಸುವುದಿಲ್ಲ? ಹಿಂದೂಗಳೊಂದಿಗೆ ಪಕ್ಷಪಾತ ಮಾಡುವುದೇ ಸರ್ವಧರ್ಮಸಮಭಾವದ ವ್ಯಾಖ್ಯೆಯಾಗದೆಯೇ ? ಹಿಂದೂವಿರೋಧವೇ ಪ್ರಸ್ತುತ ಜಾತ್ಯತೀತತೆಯಂತಿದೆ ಎಂದು ಶ್ರೀ. ಗೌಡ ಇವರು ಹೇಳಿದ್ದಾರೆ.

ಚಲನಚಿತ್ರ ನಿರ್ಮಾಪಕಿ ಶಬೀನಾ ಖಾನ್ ಹಾಗೂ ಬರಹಗಾರ ಫರ್ಹಾದ್ ಸಾಮಜಿ ಅವರು ಉದ್ದೇಶಪೂರ್ವಕವಾಗಿ ಹಿಂದೂದ್ವೇಷ ಹಬ್ಬಿಸುತ್ತಿದ್ದಾರೆ ಎಂಬುದು ಗಮನಕ್ಕೆ ಬರುತ್ತದೆ. ಆದರೆ, ಈ ಬೇಡಿಕೆಗಳನ್ನು ಗಮನಿಸದಿದ್ದರೆ ತೀವ್ರ ಆಂದೋಲನ ಮಾಡುವುದಾಗಿ ಶ್ರೀ. ಗೌಡ ಇವರು ಈ ವೇಳೆ ಎಚ್ಚರಿಕೆ ನೀಡಿದ್ದಾರೆ.

Spread the love
  • Related Posts

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…

    Spread the love

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

    Spread the love

    You Missed

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 27 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 52 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 28 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 37 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 55 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 32 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ