ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ! HJS ಆಗ್ರಹ

ಮುಂಬೈ: ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು !

ಮೊಹಮ್ಮದ್ ಫೈಜ್ ಖಾನ್ ಹಿಂದೂಗಳ ಭಾವನೆಗಳನ್ನು ಗೌರವಿಸಬೇಕು ಮತ್ತು ಅಯೋಧ್ಯೆಗೆ ಮಣ್ಣು ತರುವ ಅಟ್ಟಹಾಸದಿಂದ ಹಿಂದೆ ಸರಿಯಬೇಕು ! ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು ೫೦೦ ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ ೫ ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಭಾರತೀಯ ಮುಸ್ಲಿಮರು ಆಕ್ರಮಣಕಾರಿ ಬಾಬರ್‌ನ ಕುರುಹುಗಳಿಗೆ ತಿಲಾಂಜಲಿ ನೀಡಿ ಪ್ರಭು ಶ್ರೀರಾಮನ ದೇವಾಲಯದ ನಿರ್ಮಾಣಕ್ಕೆ ಈಗಾಗಲೇ ಸಹಕರಿಸಿದ್ದರೆ ಈ ಸಂಘರ್ಷವನ್ನು ತಪ್ಪಿಸಬಹುದಿತ್ತು. ತದ್ವಿರುದ್ಧವಾಗಿ, ಮುಸ್ಲಿಂ ಸಮಾಜವು ವಿರೋಧ ಮಾಡಲು ಪಣತೊಟ್ಟಿತು. ಅದರ ನಂತರವೂ, ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ. ಇಂದಿನವರೆಗೂ ರಾಮ ಮಂದಿರಕ್ಕೆ ಮುಸ್ಲಿಮರ ವಿರೋಧದಿಂದಾಗಿ ಹಿಂದೂಗಳ ಮನಸ್ಸಿನಲ್ಲಿ ಈ ಕೃತಿಯ ಬಗ್ಗೆ ವಿರೋಧದ ಭಾವನೆ ಮೂಡುವುದು ಸಹಜವಾಗಿದೆ. ಒಂದು ಪಕ್ಷ ಮೊಹಮ್ಮದ್ ಫೈಜ್ ಖಾನ್ ಅವರ ಭಾವನೆಗಳು ಪವಿತ್ರವಾಗಿವೆ, ಅವರು ರಾಮಭಕ್ತರಾಗಿದ್ದಾರೆ ಎಂದು ನಂಬಿದರೂ ಅವರು ಮೊದಲು ಹಿಂದೂ ಸಮುದಾಯದ ಭಾವನೆಗಳನ್ನು ಗೌರವಿಸಬೇಕು. ಆದ್ದರಿಂದ, ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು. ಇದಕ್ಕಾಗಿ ಫೈಜ್ ಖಾನ್ ಭೂಮಿಪೂಜೆಗೆ ಮಣ್ಣು ತರುವ ಅಟ್ಟಹಾಸವನ್ನು ಕೈಬಿಟ್ಟು ಹಿಂದೆ ಸರಿಯಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆ ಇವರು ಕರೆ ನೀಡಿದ್ದಾರೆ.


ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎನ್ನುವುದು ಅವರ ಅವಮಾನ !
ಮೊಹಮ್ಮದ ಫೈಜ್ ಖಾನ್ ಇವರ ಸೋಶಿಯಲ್ ಮೀಡಿಯಾದ ‘ಪೋಸ್ಟ್’ನಲ್ಲಿ ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಉಲ್ಲೇಖಿಸಿದ್ದಾರೆ. ‘ಇಮಾಮ್’ ಎಂದರೆ ‘ನಮಾಜುಪಠಣ ಮಾಡುವವರು, ಇಸ್ಲಾಮ್ ನಂಬುವವರು ಮತ್ತು ಅದಕ್ಕನುಸಾರ ಆಚರಣೆ ಮಾಡುವವರು’ ! ಪ್ರಭು ಶ್ರೀರಾಮನು ನಮಾಜುಪಠಣ ಮಾಡುವವರೂ ಆಗಿರಲಿಲ್ಲ ಹಾಗೂ ಇಸ್ಲಾಮಿನ ಅನುಯಾಯಿಯೂ ಆಗಿರಲಿಲ್ಲ. ಇಸ್ಲಾಂ ಸ್ಥಾಪನೆಯಾಗುವ ಲಕ್ಷಾಂತರ ವರ್ಷಗಳ ಮೊದಲೇ ತ್ರೇತಾಯುಗದಲ್ಲಿ ಪ್ರಭು ಶ್ರೀರಾಮನು ಅವತರಿಸಿದನು. ಆದ್ದರಿಂದ, ಇಸ್ಲಾಂನಲ್ಲಿ ’ಇಮಾಮ್’ ಎಂಬುವುದರ ಅರ್ಥ ಏನೇ ಇರಲಿ, ಅದನ್ನು ಪ್ರಭು ರಾಮನಿಗಾಗಿ ಬಳಸುವುದೆಂದರೆ ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ಮುಂತಾದ ಎಲ್ಲ ದೃಷ್ಟಿಯಲ್ಲಿ ತಪ್ಪಾಗಿದೆ. ಮತ್ತೊಂದೆಡೆ, ಅಯೋಧ್ಯೆಯ ಶ್ರೀರಾಮ ಮಂದಿರ ಸಹಿತ ಭಾರತದ ಸಾವಿರಾರು ಮಂದಿರಗಳನ್ನು ಧ್ವಂಸ ಮಾಡಿದ ಇಸ್ಲಾಮೀ ಆಕ್ರಮಣಕಾರರ, ಮೂರ್ತಿ ಪೂಜೆಯನ್ನು ನಂಬದ ಪಂಥದ ‘ಇಮಾಮ್’ ಎಂದು ಕರೆದು ಫೈಜ್ ಖಾನ್ ಇವರು ಪ್ರಭು ಶ್ರೀರಾಮನನ್ನು ಅವಮಾನಿಸಿದ್ದಾರೆ. ಆದ್ದರಿಂದ, ಫೈಜ್ ಖಾನ್ ಸಂಪೂರ್ಣ ಹಿಂದೂ ಸಮಾಜದ ಮತ್ತು ಶ್ರೀರಾಮನ ಭಕ್ತರಿರ ಬಹಿರಂಗ ಕ್ಷಮೆಯಾಚಿಸಬೇಕು, ಎಂದು ಶ್ರೀ. ರಮೇಶ ಶಿಂದೆಯವರು ಹೇಳಿದ್ದಾರೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 329 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 301 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ