ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ! HJS ಆಗ್ರಹ

ಮುಂಬೈ: ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು !

ಮೊಹಮ್ಮದ್ ಫೈಜ್ ಖಾನ್ ಹಿಂದೂಗಳ ಭಾವನೆಗಳನ್ನು ಗೌರವಿಸಬೇಕು ಮತ್ತು ಅಯೋಧ್ಯೆಗೆ ಮಣ್ಣು ತರುವ ಅಟ್ಟಹಾಸದಿಂದ ಹಿಂದೆ ಸರಿಯಬೇಕು ! ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು ೫೦೦ ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ ೫ ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಭಾರತೀಯ ಮುಸ್ಲಿಮರು ಆಕ್ರಮಣಕಾರಿ ಬಾಬರ್‌ನ ಕುರುಹುಗಳಿಗೆ ತಿಲಾಂಜಲಿ ನೀಡಿ ಪ್ರಭು ಶ್ರೀರಾಮನ ದೇವಾಲಯದ ನಿರ್ಮಾಣಕ್ಕೆ ಈಗಾಗಲೇ ಸಹಕರಿಸಿದ್ದರೆ ಈ ಸಂಘರ್ಷವನ್ನು ತಪ್ಪಿಸಬಹುದಿತ್ತು. ತದ್ವಿರುದ್ಧವಾಗಿ, ಮುಸ್ಲಿಂ ಸಮಾಜವು ವಿರೋಧ ಮಾಡಲು ಪಣತೊಟ್ಟಿತು. ಅದರ ನಂತರವೂ, ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ. ಇಂದಿನವರೆಗೂ ರಾಮ ಮಂದಿರಕ್ಕೆ ಮುಸ್ಲಿಮರ ವಿರೋಧದಿಂದಾಗಿ ಹಿಂದೂಗಳ ಮನಸ್ಸಿನಲ್ಲಿ ಈ ಕೃತಿಯ ಬಗ್ಗೆ ವಿರೋಧದ ಭಾವನೆ ಮೂಡುವುದು ಸಹಜವಾಗಿದೆ. ಒಂದು ಪಕ್ಷ ಮೊಹಮ್ಮದ್ ಫೈಜ್ ಖಾನ್ ಅವರ ಭಾವನೆಗಳು ಪವಿತ್ರವಾಗಿವೆ, ಅವರು ರಾಮಭಕ್ತರಾಗಿದ್ದಾರೆ ಎಂದು ನಂಬಿದರೂ ಅವರು ಮೊದಲು ಹಿಂದೂ ಸಮುದಾಯದ ಭಾವನೆಗಳನ್ನು ಗೌರವಿಸಬೇಕು. ಆದ್ದರಿಂದ, ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು. ಇದಕ್ಕಾಗಿ ಫೈಜ್ ಖಾನ್ ಭೂಮಿಪೂಜೆಗೆ ಮಣ್ಣು ತರುವ ಅಟ್ಟಹಾಸವನ್ನು ಕೈಬಿಟ್ಟು ಹಿಂದೆ ಸರಿಯಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆ ಇವರು ಕರೆ ನೀಡಿದ್ದಾರೆ.


ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎನ್ನುವುದು ಅವರ ಅವಮಾನ !
ಮೊಹಮ್ಮದ ಫೈಜ್ ಖಾನ್ ಇವರ ಸೋಶಿಯಲ್ ಮೀಡಿಯಾದ ‘ಪೋಸ್ಟ್’ನಲ್ಲಿ ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಉಲ್ಲೇಖಿಸಿದ್ದಾರೆ. ‘ಇಮಾಮ್’ ಎಂದರೆ ‘ನಮಾಜುಪಠಣ ಮಾಡುವವರು, ಇಸ್ಲಾಮ್ ನಂಬುವವರು ಮತ್ತು ಅದಕ್ಕನುಸಾರ ಆಚರಣೆ ಮಾಡುವವರು’ ! ಪ್ರಭು ಶ್ರೀರಾಮನು ನಮಾಜುಪಠಣ ಮಾಡುವವರೂ ಆಗಿರಲಿಲ್ಲ ಹಾಗೂ ಇಸ್ಲಾಮಿನ ಅನುಯಾಯಿಯೂ ಆಗಿರಲಿಲ್ಲ. ಇಸ್ಲಾಂ ಸ್ಥಾಪನೆಯಾಗುವ ಲಕ್ಷಾಂತರ ವರ್ಷಗಳ ಮೊದಲೇ ತ್ರೇತಾಯುಗದಲ್ಲಿ ಪ್ರಭು ಶ್ರೀರಾಮನು ಅವತರಿಸಿದನು. ಆದ್ದರಿಂದ, ಇಸ್ಲಾಂನಲ್ಲಿ ’ಇಮಾಮ್’ ಎಂಬುವುದರ ಅರ್ಥ ಏನೇ ಇರಲಿ, ಅದನ್ನು ಪ್ರಭು ರಾಮನಿಗಾಗಿ ಬಳಸುವುದೆಂದರೆ ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ಮುಂತಾದ ಎಲ್ಲ ದೃಷ್ಟಿಯಲ್ಲಿ ತಪ್ಪಾಗಿದೆ. ಮತ್ತೊಂದೆಡೆ, ಅಯೋಧ್ಯೆಯ ಶ್ರೀರಾಮ ಮಂದಿರ ಸಹಿತ ಭಾರತದ ಸಾವಿರಾರು ಮಂದಿರಗಳನ್ನು ಧ್ವಂಸ ಮಾಡಿದ ಇಸ್ಲಾಮೀ ಆಕ್ರಮಣಕಾರರ, ಮೂರ್ತಿ ಪೂಜೆಯನ್ನು ನಂಬದ ಪಂಥದ ‘ಇಮಾಮ್’ ಎಂದು ಕರೆದು ಫೈಜ್ ಖಾನ್ ಇವರು ಪ್ರಭು ಶ್ರೀರಾಮನನ್ನು ಅವಮಾನಿಸಿದ್ದಾರೆ. ಆದ್ದರಿಂದ, ಫೈಜ್ ಖಾನ್ ಸಂಪೂರ್ಣ ಹಿಂದೂ ಸಮಾಜದ ಮತ್ತು ಶ್ರೀರಾಮನ ಭಕ್ತರಿರ ಬಹಿರಂಗ ಕ್ಷಮೆಯಾಚಿಸಬೇಕು, ಎಂದು ಶ್ರೀ. ರಮೇಶ ಶಿಂದೆಯವರು ಹೇಳಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 107 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 67 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 197 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 199 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 101 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 120 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ