ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಸೇರಿದಂತೆ ಕರಾವಳಿಯ ಪ್ರಮುಖ ಶಾಸಕರಿಗೆ ರಾಜ್ಯಮಟ್ಟದ ಮಹತ್ತರ ಜವಾಬ್ದಾರಿ!

ಬೆಂಗಳೂರು: 2020-21ನೇ ಸಾಲಿನ ಕರ್ನಾಟಕ ವಿಧಾನಮಂಡಲದ, ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ, ಅಧ್ಯಕ್ಷರು, ಸದಸ್ಯರುಗಳನ್ನು ನಾಮನಿರ್ದೇಶನ ಮಾಡಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ.

ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರನ್ನಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರನ್ನು ನೇಮಕ ಮಾಡಲಾಗಿದೆ. ಶಾಸಕರಾದ ದತ್ತಾತ್ರೇಯ ಸಿ. ಪಾಟೀಲ್ ರೇವೂರು, ಸೋಮನಗೌಡ ಬಿ. ಪಾಟೀಲ್, ಹರೀಶ್ ಪೂಂಜ, ಸಂಜೀವ ಮಠಂದೂರು, ಉದಯ ಬಿ. ಗರುಡಾಚಾರ್, ವೆಂಕಟರೆಡ್ಡಿ ಮುದ್ನಾಳ್, ಎಂ.ಬಿ. ಪಾಟೀಲ್, ಎಸ್.ಎನ್. ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ, ಎಸ್‌.ಎನ್‌. ಸುಬ್ಬಾರೆಡ್ಡಿ, ಎಸ್. ರಾಮಪ್ಪ, ಡಾ.ಕೆ. ಶ್ರೀನಿವಾಸಮೂರ್ತಿ ಮತ್ತು ರವೀಂದ್ರ ಶ್ರೀಕಂಠಯ್ಯ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಸದನದಲ್ಲಿ ಸರ್ಕಾರ ನೀಡುವ ಭರವಸೆಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ಪರಿಶೀಲಿಸುವುದು ಸಮಿತಿಯ ಹೊಣೆಗಾರಿಕೆ. ಪ್ರತಿ ವಾರ ಸಮಿತಿ ಸದಸ್ಯರು ಸಭೆ ಸೇರಿ, ಚರ್ಚಿಸಿ ಸರ್ಕಾರ ನೀಡಿದ ಭರವಸೆಗಳು ಈಡೇರಿವೆಯೇ, ಯಾವ ಹಂತದಲ್ಲಿವೆ ಎಂಬ ಕುರಿತು ಚರ್ಚೆ ನಡೆಸಲಿದೆ.

ಇನ್ನುಳಿದಂತೆ ಆಯ್ಕೆಯಾಗಿರುವ ಸಮಿತಿಯ ಅಧ್ಯಕ್ಷರ ವಿವರ

  • ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರನ್ನಾಗಿ ಎಸ್ ಅಂಗಾರ
  • ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರನ್ನಾಗಿ ರಾಮಲಿಂಗಾರೆಡ್ಡಿ
  • ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ
  • ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ದಿನಕರ್ ಕೇಶವ ಶೆಟ್ಟಿ
  • ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಎಸ್ ಕುಮಾರ್ ಬಂಗಾರಪ್ಪ
  • ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಗೆ ಅಧ್ಯಕ್ಷರಾಗಿ ಸಾರಾ ಮಹೇಶ್
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆಯನ್ನಾಗಿ ಕೆ.ಪೂರ್ಣಿಮಾ
  • ಗ್ರಂಥಾಲಯ ಸಮಿತಿಗೆ ವಿಧಾನ ಪರಿಷತ್ತಿನ ಸಭಾಪತಿಯವರನ್ನು ಅಧ್ಯಕ್ಷರನ್ನಾಗಿ,
  • ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ಜಿ.ಸೋಮಶೇಖರ ರೆಡ್ಡಿ
  • ವಿಧಾನಸಭೆಯ ಸಮಿತಿಗಳಾದಂತ ಅಂದಾಜುಗಳ ಸಮಿತಿಗೆ ಅಭಯ್ ಪಾಟೀಲ್,
  • ಹಕ್ಕು ಬಾಧ್ಯತೆಗಳ ಸಮಿತಿಗೆ ಬಸನಗೌಡ ಆರ್ ಪಾಟೀಲ್ ಯತ್ನಾಳ್,
  • ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗೆ ಆನಂದ್ ಆಲಿಯಾಸ್ ವಿಶ್ವನಾಥ್ ಚಂದ್ರಶೇಖರ ಮಾಮನಿ ಅವರನ್ನು ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.


Spread the love
  • Related Posts

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಆತೀ ಸಣ್ಣ ಮತ್ತು ಮಧ್ಯಮ…

    Spread the love

    You Missed

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 16 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 116 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 35 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 122 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 35 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 33 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ