ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಸೇರಿದಂತೆ ಕರಾವಳಿಯ ಪ್ರಮುಖ ಶಾಸಕರಿಗೆ ರಾಜ್ಯಮಟ್ಟದ ಮಹತ್ತರ ಜವಾಬ್ದಾರಿ!

ಬೆಂಗಳೂರು: 2020-21ನೇ ಸಾಲಿನ ಕರ್ನಾಟಕ ವಿಧಾನಮಂಡಲದ, ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ, ಅಧ್ಯಕ್ಷರು, ಸದಸ್ಯರುಗಳನ್ನು ನಾಮನಿರ್ದೇಶನ ಮಾಡಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ.

ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರನ್ನಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರನ್ನು ನೇಮಕ ಮಾಡಲಾಗಿದೆ. ಶಾಸಕರಾದ ದತ್ತಾತ್ರೇಯ ಸಿ. ಪಾಟೀಲ್ ರೇವೂರು, ಸೋಮನಗೌಡ ಬಿ. ಪಾಟೀಲ್, ಹರೀಶ್ ಪೂಂಜ, ಸಂಜೀವ ಮಠಂದೂರು, ಉದಯ ಬಿ. ಗರುಡಾಚಾರ್, ವೆಂಕಟರೆಡ್ಡಿ ಮುದ್ನಾಳ್, ಎಂ.ಬಿ. ಪಾಟೀಲ್, ಎಸ್.ಎನ್. ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ, ಎಸ್‌.ಎನ್‌. ಸುಬ್ಬಾರೆಡ್ಡಿ, ಎಸ್. ರಾಮಪ್ಪ, ಡಾ.ಕೆ. ಶ್ರೀನಿವಾಸಮೂರ್ತಿ ಮತ್ತು ರವೀಂದ್ರ ಶ್ರೀಕಂಠಯ್ಯ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಸದನದಲ್ಲಿ ಸರ್ಕಾರ ನೀಡುವ ಭರವಸೆಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ಪರಿಶೀಲಿಸುವುದು ಸಮಿತಿಯ ಹೊಣೆಗಾರಿಕೆ. ಪ್ರತಿ ವಾರ ಸಮಿತಿ ಸದಸ್ಯರು ಸಭೆ ಸೇರಿ, ಚರ್ಚಿಸಿ ಸರ್ಕಾರ ನೀಡಿದ ಭರವಸೆಗಳು ಈಡೇರಿವೆಯೇ, ಯಾವ ಹಂತದಲ್ಲಿವೆ ಎಂಬ ಕುರಿತು ಚರ್ಚೆ ನಡೆಸಲಿದೆ.

ಇನ್ನುಳಿದಂತೆ ಆಯ್ಕೆಯಾಗಿರುವ ಸಮಿತಿಯ ಅಧ್ಯಕ್ಷರ ವಿವರ

  • ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರನ್ನಾಗಿ ಎಸ್ ಅಂಗಾರ
  • ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರನ್ನಾಗಿ ರಾಮಲಿಂಗಾರೆಡ್ಡಿ
  • ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ
  • ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ದಿನಕರ್ ಕೇಶವ ಶೆಟ್ಟಿ
  • ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಎಸ್ ಕುಮಾರ್ ಬಂಗಾರಪ್ಪ
  • ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಗೆ ಅಧ್ಯಕ್ಷರಾಗಿ ಸಾರಾ ಮಹೇಶ್
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆಯನ್ನಾಗಿ ಕೆ.ಪೂರ್ಣಿಮಾ
  • ಗ್ರಂಥಾಲಯ ಸಮಿತಿಗೆ ವಿಧಾನ ಪರಿಷತ್ತಿನ ಸಭಾಪತಿಯವರನ್ನು ಅಧ್ಯಕ್ಷರನ್ನಾಗಿ,
  • ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ಜಿ.ಸೋಮಶೇಖರ ರೆಡ್ಡಿ
  • ವಿಧಾನಸಭೆಯ ಸಮಿತಿಗಳಾದಂತ ಅಂದಾಜುಗಳ ಸಮಿತಿಗೆ ಅಭಯ್ ಪಾಟೀಲ್,
  • ಹಕ್ಕು ಬಾಧ್ಯತೆಗಳ ಸಮಿತಿಗೆ ಬಸನಗೌಡ ಆರ್ ಪಾಟೀಲ್ ಯತ್ನಾಳ್,
  • ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗೆ ಆನಂದ್ ಆಲಿಯಾಸ್ ವಿಶ್ವನಾಥ್ ಚಂದ್ರಶೇಖರ ಮಾಮನಿ ಅವರನ್ನು ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.


Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ