ರಾಜ್ಯದಲ್ಲಿ ಜನವರಿ 18ರಿಂದ ಅಧಿಕೃತವಾಗಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ!

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿದ್ದು ಈ ಕಾಯ್ದೆಯನ್ನು ಜನವರಿ 18ರಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಅಧಿಕೃತವಾಗಿ ಕಾನೂನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಕುರಿತಂತೆ ಗೆಜೆಟ್ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದು, ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ 2020ನ್ನು ಜಾರಿಗೊಳಿಸಲಾಗಿದೆ.

ಜಾನುವಾರುಗಳನ್ನು ಯಾವುದೇ ವಿಧಾನದಿಂದ ಕೊಲ್ಲುವುದು ಮತ್ತು ಸಾಮಾನ್ಯವಾಗಿ ಸಾವಿಗೆ ಕಾರಣವಾಗುವ ದೈಹಿಕ ಹಾನಿಯ ಊನಗೊಳಿಸುವಿಕೆ ಮತ್ತು ಗಾಯಗೊಳಿಸುವಿಕೆಯನ್ನು ನಿಷೇಧಿಸಲಾಗಿದೆ.

ಯಾವುದೇ ಕಾನೂನು, ಪದ್ದತಿ ಅಥವಾ ಬಳಕೆಗೆ ವಿರುದ್ಧವಾಗಿ ಏನೇ ಒಳಗೊಂಡಿದ್ದರೂ ಯಾವೊಬ್ಬ ವ್ಯಕ್ತಿಯೂ ಜಾನುವಾರು ಹತ್ಯೆ ನಡೆಸತಕ್ಕದ್ದಲ್ಲ ಅಥವಾ ಜಾನುವಾರ ಹತ್ಯೆ ನಡೆಸುವಂತೆ ಮಾಡತಕ್ಕದ್ದಲ್ಲ. ಜಾನುವಾರ ಹತ್ಯೆಗಾಗಿ ಮಾರಾಟ ಮಾಡತಕ್ಕದ್ದಲ್ಲ. ಎಂಬುದಾಗಿ ಜಾನುವಾರು ಹತ್ಯೆ ನಿಷೇಧಿಸಿದೆ.

ಒಂದು ವೇಳೆ ಜಾನುವಾರು ಹತ್ಯೆ ನಿಷೇಧ ಕಾಯ್ದೆಯನ್ನು ಉಲ್ಲಂಘನೆ ಮಾಡಿದಲ್ಲಿ, ಮೂರು ವರ್ಷಗಳಿಗೆ ಕಡಿಮೆಯಿಲ್ಲದ ಆದರೇ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲುವಾಸ ಅಥವಾ ಒಂದು ಜಾನುವಾರಿಗೆ ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದ್ರೇ, ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು.

ಎರಡನೇ ಬಾರಿ ಅಥವಾ ಮುಂದುವರೆದ ಅಪರಾಧದ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದ್ರೇ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಮುಂದುವರೆದ ಶಿಕ್ಷೆಯೊಂದಿಗೆ, ಜೊತೆಗೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸ ಶಿಕ್ಷೆ ವಿಧಿಸಲಿದೆ.

Spread the love
  • Related Posts

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಮಂಗಳೂರು: ಉಭಯ ಜಿಲ್ಲೆಗಳಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ (ದ.ಕ ಉಡುಪಿ) ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್…

    Spread the love

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

    Spread the love

    You Missed

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    • By admin
    • March 19, 2026
    • 60 views
    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 34 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 98 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 71 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 41 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 189 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ