ರಾಜ್ಯದಲ್ಲಿ ಜನವರಿ 18ರಿಂದ ಅಧಿಕೃತವಾಗಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ!

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿದ್ದು ಈ ಕಾಯ್ದೆಯನ್ನು ಜನವರಿ 18ರಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಅಧಿಕೃತವಾಗಿ ಕಾನೂನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಕುರಿತಂತೆ ಗೆಜೆಟ್ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದು, ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ 2020ನ್ನು ಜಾರಿಗೊಳಿಸಲಾಗಿದೆ.

ಜಾನುವಾರುಗಳನ್ನು ಯಾವುದೇ ವಿಧಾನದಿಂದ ಕೊಲ್ಲುವುದು ಮತ್ತು ಸಾಮಾನ್ಯವಾಗಿ ಸಾವಿಗೆ ಕಾರಣವಾಗುವ ದೈಹಿಕ ಹಾನಿಯ ಊನಗೊಳಿಸುವಿಕೆ ಮತ್ತು ಗಾಯಗೊಳಿಸುವಿಕೆಯನ್ನು ನಿಷೇಧಿಸಲಾಗಿದೆ.

ಯಾವುದೇ ಕಾನೂನು, ಪದ್ದತಿ ಅಥವಾ ಬಳಕೆಗೆ ವಿರುದ್ಧವಾಗಿ ಏನೇ ಒಳಗೊಂಡಿದ್ದರೂ ಯಾವೊಬ್ಬ ವ್ಯಕ್ತಿಯೂ ಜಾನುವಾರು ಹತ್ಯೆ ನಡೆಸತಕ್ಕದ್ದಲ್ಲ ಅಥವಾ ಜಾನುವಾರ ಹತ್ಯೆ ನಡೆಸುವಂತೆ ಮಾಡತಕ್ಕದ್ದಲ್ಲ. ಜಾನುವಾರ ಹತ್ಯೆಗಾಗಿ ಮಾರಾಟ ಮಾಡತಕ್ಕದ್ದಲ್ಲ. ಎಂಬುದಾಗಿ ಜಾನುವಾರು ಹತ್ಯೆ ನಿಷೇಧಿಸಿದೆ.

ಒಂದು ವೇಳೆ ಜಾನುವಾರು ಹತ್ಯೆ ನಿಷೇಧ ಕಾಯ್ದೆಯನ್ನು ಉಲ್ಲಂಘನೆ ಮಾಡಿದಲ್ಲಿ, ಮೂರು ವರ್ಷಗಳಿಗೆ ಕಡಿಮೆಯಿಲ್ಲದ ಆದರೇ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲುವಾಸ ಅಥವಾ ಒಂದು ಜಾನುವಾರಿಗೆ ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದ್ರೇ, ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು.

ಎರಡನೇ ಬಾರಿ ಅಥವಾ ಮುಂದುವರೆದ ಅಪರಾಧದ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದ್ರೇ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಮುಂದುವರೆದ ಶಿಕ್ಷೆಯೊಂದಿಗೆ, ಜೊತೆಗೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸ ಶಿಕ್ಷೆ ವಿಧಿಸಲಿದೆ.

Spread the love
  • Related Posts

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು,…

    Spread the love

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    You Missed

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 25 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 111 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 114 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 45 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 40 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ