ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಬೆನ್ನಲ್ಲೇ ಮತ್ತೊಂದು ಶಾಕ್! ರಾಯಚೂರಿನಲ್ಲಿ 6 ಮಂದಿಗೆ ‘ವೈಟ್ ಫಂಗಸ್’ ಸೋಂಕು!

ರಾಯಚೂರು: ಕೊರೋನಾ, ಬ್ಲಾಕ್ ಫಂಗಸ್ ಬೆನ್ನಲ್ಲೇ ರಾಜ್ಯದಲ್ಲಿ ವೈಟ್‌ ಫಂಗಸ್‌ ಪ್ರಕರಣ ಪತ್ತೆಯಾಗಿದ್ದು, ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ 6 ಪ್ರಕರಣಗಳು ಪತ್ತೆಯಾದ ಮಾಹಿತಿ ಲಭ್ಯವಾಗಿದೆ.

ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ವೈಟ್‌ ಫಂಗಸ್‌ ಪ್ರಕರಗಳು ಪತ್ತೆಯಾಗಿದ್ದು, ಅವ್ರು ಕೋವಿಡ್‌ನಿಂದ ಗುಣಮುಖರಾಗಿದ್ರು ಎಂದು ಖಾಸಗಿ ಆಸ್ಪತ್ರೆ ವೈದ್ಯ ಡಾ. ಮಂಜುನಾಥ್‌ ಮಾಹಿತಿ ನೀಡಿದ್ದಾರೆ.

ಕೋವಿಡ್‌ನಿಂದ ಗುಣಮುಖರಾದ 6 ಮಂದಿಯಲ್ಲಿ ಈ ಬಿಳಿ ಶಿಲೀಂಧ್ರ ಪತ್ತೆಯಾಗಿದೆ.

ಈ ವೈಟ್‌ ಫಂಗಸ್‌ ಸೋಂಕಿತರು ಆತಂಕ ಪಡುವ ಆಗತ್ಯವಿಲ್ಲ. 14 ದಿನ ಔಷಧ ನೀಡಿದ್ರೆ 7 ದಿನಗಳಲ್ಲಿ ಗುಣಮುಖರಾಗ್ತಾರೆ. ಅನ್ನನಾಳಕ್ಕೆ ತೊಂದರೆ ನೀಡುವ ಸೋಂಕು ಜೀವ ಮಾರಕವಲ್ಲ. ವೈಟ್ ಫಂಗಸ್‌ ರಕ್ತಕ್ಕೆ ಸೇರಿದ್ರೆ ಮಾತ್ರ ಪ್ರಾಣಕ್ಕೆ ಆಪಾಯ. 100 ಜನರಿಗೆ ಸ್ಟಿರಾಯ್ಡ್‌ ನೀಡಿದ್ರೆ ಒಬ್ಬರಲ್ಲಿ ವೈಟ್‌ ಫಂಗಸ್‌ ತಗುಲುತ್ತೆ ಎಂದು ವೈದ್ಯ ಮಂಜುನಾಥ್‌ ಹೇಳಿದ್ದಾರೆ.

ಇನ್ನು ಈ ಕುರಿತು ಪ್ರತಿಕ್ರಿಸಿರುವ ರಾಯಚೂರು ಜಿಲ್ಲಾಧಿಕಾರಿ ಆರ್‌. ವೆಂಕಟೇಶ್‌ ‘ ವೈಟ್‌ ಫಂಗಸ್‌ ಪ್ರಕರಣಗಳು ಪತ್ತೆಯಾದ ಬಗ್ಗೆ ರಾಯಚೂರಿನ ಖಾಸಗಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ವೈಟ್‌ ಫಂಗಸ್‌ ಬಗ್ಗೆ ಖಚಿತ ಪಡಿಸಿಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಸಂಜೆಯೊಳಗೆ ಈ ಬಗ್ಗೆ ಡಿಹೆಚ್‌ಒ ಮಾಹಿತಿ ನೀಡುತ್ತಾರೆ ಎಂದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 128 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 32 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 48 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 98 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ