ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ಬೆಂಗಳೂರು: ಮಾಸ್ಕ್ ಧರಿಸಿ ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ರಾತ್ರಿ ದಿಢೀರ್ ಸಿಟಿ ರೌಂಡ್ಸ್ ಕೈಗೊಂಡು ಪ್ರಯಾಣಿಕನ ಸೋಗಿನಲ್ಲಿ BMTC ಬಸ್ ಗಳ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ವೇಳೆ ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್ ನಿಂದ ಇಳಿಸಿದ ಘಟನೆ ಬಗ್ಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ಚಿಲ್ಲರೆ ಕಾಸಿನ ಕಾಲವಲ್ಲ. ಇಂದು ಎಲ್ಲಾ ಕಡೆ QR ಕೋಡ್ ಮೂಲಕ ಹಣ ಪಾವತಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಸಚಿವರ ಸಿಟಿ ರೌಂಡ್ಸ್ ಕುರಿತಂತೆ ಮಾಹಿತಿ ಸಿಕ್ಕ ತಕ್ಷಣ ನಾನು ಸಚಿವ ಬೈರತಿ ಸುರೇಶ್ ಜೊತೆ ಮಾತನಾಡಿಸಲು ಸಾಕಷ್ಟು ಬಾರಿ ಫೋನ್ ಮಾಡಿದೆ. ಆದರೆ ಅವರ ಜೊತೆ ಮಾತನಾಡುವ ಅವಕಾಶ ಸಿಗಲಿಲ್ಲ. ಹಿಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡುವ ಅವಕಾಶ ದೊರಕಿತ್ತು ಎಂದು ತಿಳಿಸಿದ್ದಾರೆ. ಸಚಿವರು ಈ ರೀತಿ ಮುಖಕ್ಕೆ ಮಾಸ್ಕ್ ಧರಿಸಿ ಮಾರುವೇಷದಲ್ಲಿ ಹೋಗಿ ತನ್ನ ಇಲಾಖೆಯ ಕಾರ್ಯವೈಖರಿಯ ಪರಿಶೀಲನೆ ಮಾಡಿರುವುದು ನಿಜಕ್ಕೂ ಸ್ತುತ್ಯಾರ್ಹ.

ಸಚಿವರು 100 ರೂಪಾಯಿ ನೋಟನ್ನು ತನ್ನ ಟಿಕೆಟ್ ಗೆಂದು ಕೊಟ್ಟಾಗ, ಕಂಡಕ್ಟರ್ ಚಿಲ್ಲರೆ ಕೊಡಿ ಎಂದು ಕೇಳಿರುವುದು ಸಹಜವೇ. ಆದರೆ ಇದು ಚಿಲ್ಲರೆ ಕೊಟ್ಟು ಸಹಕರಿಸಿ ಎಂಬ ಕಾಲವಲ್ಲ. ಇಂದು ಎಲ್ಲಾ ಕಡೆ QR ಕೋಡ್ ಮೂಲಕ ಹಣ ಪಾವತಿ ಮಾಡಲು ವ್ಯವಸ್ಥೆ ಇರುವಾಗ ಬಿಎಂಟಿಸಿ ಬಸ್ ಗಳಲ್ಲೂ ಕಂಡಕ್ಟರ್ ಬಳಿ ಇರುವ ಟಿಕೆಟ್ ಕೊಡುವ ಮೆಷಿನ್‌ ನಲ್ಲಿಯೇ ಈ ವ್ಯವಸ್ಥೆ ಇರುತ್ತದೆ ಎಂಬುದು ನನಗಿರುವ ಮಾಹಿತಿ. ಆಗಿದ್ದ ಮೇಲೆ ಮಂತ್ರಿಗಳಿಗೆ ಈ ರೀತಿಯ ಅನುಭವ ಹೇಗೆ ಆಯಿತು ಎಂದು ಪ್ರಶ್ನಿಸಿದ್ದಾರೆ.

ಸಂಜೆ 7.10ರಿಂದ ರಾತ್ರಿ 9.10ರವರೆಗೆ ಸುಮಾರು ಎರಡು ಗಂಟೆಗಳ ಕಾಲ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿದ ಸಚಿವ ಬೈರತಿ ಸುರೇಶ್ ಅವರು, 10ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು. ಜಯಮಹಲ್, ಆರ್‌.ಟಿ.ನಗರ, ಹೆಬ್ಬಾಳ, ನಾಗವಾರ, ಹೆಣ್ಣೂರು ಹಾಗೂ ಗೆದ್ದಲಹಳ್ಳಿ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಬಸ್ ಏರಿ ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್ ಖರೀದಿಸಿ ಪ್ರಯಾಣಿಸಿದರು.

ಇನ್ನು ಬಸ್ ನಿಲ್ದಾಣವೊಂದರಲ್ಲಿ ಬಸ್ ನಿಲ್ಲಿಸದ ಇಲಾಖೆಯ ನಿರ್ವಾಹಕ ಮತ್ತು ಬಸ್ ಚಾಲಕನನ್ನು ಅಮಾನತು ಮಾಡಿದ್ದಾರೆ. ಪ್ರಯಾಣಿಕರೊಬ್ಬರು ಕೈ ತೋರಿಸಿದರೂ ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸದೇ ಮುಂದುವರೆದಿದ್ದರಿಂದ ಕೆಎ 57 ಎಫ್ 3372 ಸಂಖ್ಯೆಯ ಬಿಎಂಟಿಸಿ ಬಸ್‌ನ ಚಾಲಕ ಮುಷ್ತಾಕ್ ಮತ್ತು ನಿರ್ವಾಹಕ ದಯಾನಂದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Spread the love
  • Related Posts

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ