“ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ” : ಡಾ.ಎಲ್.ಎಚ್ ಮಂಜುನಾಥ್

ಬೆಳ್ತಂಗಡಿ : ತ್ಯಾಜ್ಯಗಳಿಂದ ಅನೇಕ ಸಮಸ್ಯೆಗಳನ್ನು ಮಾನವ ಜನಾಂಗ ತಂದುಕೊಂಡಿದೆ. ಮಾರಣಾಂತಿಕ ರೋಗಗಳು ಬಂದಿರುವುದು ಸ್ವಚ್ಚತೆಯ ಕೊರತೆಯಿಂದ. ಹಾಗಾಗಿ ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್ ಮಂಜುನಾಥ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವಚ್ಚತಾ ಜಾಗೃತಿ ವೇದಿಕೆ, ಬೆಳ್ತಂಗಡಿಯ ಮಂಜುನಾಥೇಶ್ವರ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಚತಾ ಸೇನಾನಿಗಳ ಪ್ರೇರಣಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸ್ವಚ್ಚತಾ ಸೇನಾನಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು, ತ್ಯಾಜ್ಯಗಳನ್ನು ಬಳಕೆಯ ವಸ್ತುಗಳಾಗಿ ಪರಿವರ್ತಿಸಿ ಪರ್ಯಾಯ ಉದ್ಯೋಗವಾಗಿಯೂ ರೂಪುಗೊಳಿಸಬಹುದು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ಕುಸುಮಾಕರ್ ಪ್ರಕೃತಿದತ್ತವಾಗಿರುವ ಸಂಪನ್ಮೂಲಗಳನ್ನು ವಿಷಯುಕ್ತವಾಗಿ ಮಾಡಿ ಮಾನವ ತನ್ನ ಕಾಲಿಗೆ ತಾನೇ ಕೊಡಲಿಯೇಟು ಹಾಕಿಕೊಂಡಿದ್ದಾನೆ. ಪ್ರಕೃತಿಯ ಹೋರಾಟದ ಪ್ರತಿಫಲದ ಕೂಸು ಕೊರೊನಾ. ಅದನ್ನು ಮಟ್ಟ ಹಾಕಲು ಸ್ವಚ್ಚತೆ ಅತ್ಯಗತ್ಯ ಎಂದರು.

ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ ಮಾತನಾಡಿ ಸ್ವಚ್ಚತೆಯಷ್ಟು ಪವಿತ್ರ ಕೆಲಸ ಬೇರೊಂದಿಲ್ಲ, ಸ್ವಚ್ಚತೆಯೂ ಒಂದು ಪೂಜೆ. ಎಲ್ಲಿ ಸ್ವಚ್ಚತೆ ನೆಲೆಸಿರುತ್ತದೋ ಅಲ್ಲಿ ಸಾನಿಧ್ಯ ನೆಲೆಸಿರುತ್ತದೆ ಎಂದರು.

ಸ್ವಚ್ಚತಾ ಸೇನಾನಿಗಳ ಮೂಲಕ ತಾಲೂಕಿನ ವಿವಿಧ ಭಾಗಗಳ ತ್ಯಾಜ್ಯ ವಿಲೇವಾರಿ ಸಮಸ್ಯೆಗಳನ್ನು ಆಲಿಸಲಾಯಿತು ಮತ್ತು ಸಲಹೆಗಳನ್ನು ಪಡೆಯಲಾಯಿತು.

ವೇದಿಕೆಯಲ್ಲಿ ಸ್ವಚ್ಚ ಭಾರತ್ ಮಿಷನ್ ಜಿಲ್ಲಾ ಸಂಯೋಜಕಿ ಮಂಜುಳಾ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ನಿರ್ದೇಶಕ ವಿವೇಕ್ ವಿನ್ಸಂಟ್ ಪಾಯಸ್, ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಶುದ್ದಗಂಗಾ ಘಟಕ ಯೋಜನಾಧಿಕಾರಿ ಲಕ್ಷ್ಮಣ್, ತಾಲೂಕು ಯೋಜನಾಧಿಕಾರಿ ಜಯಕರ್ ಶೆಟ್ಟಿ, ಯಶವಂತ್ ತಾಲೂಕಿನ ಸ್ವಚ್ಚತಾ ಸೇನಾನಿಗಳು ಉಪಸ್ಥಿತರಿದ್ದರು.

🖊️ ವರದಿ : ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 100 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 189 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ