ತೇಜಸ್ವಿ ವಿಚಾರಗಳಿಂದ ಕೂಡಿದ ಹಿಂದೂ ಧರ್ಮಪ್ರಸಾರಕ ಸ್ವಾಮಿ ವಿವೇಕಾನಂದರು


ಸ್ವಾಮಿ ವಿವೇಕಾನಂದರ ಜನನ, ಬಾಲ್ಯ ಹಾಗೂ ಶಿಕ್ಷಣ:


ಸ್ವಾಮಿ ವಿವೇಕಾನಂದರ ಮೂಲ ಹೆಸರು ನರೇಂದ್ರನಾಥ. ಸ್ವಾಮಿ ವಿವೇಕಾನಂದರ ಜನ್ಮವು ದಿನಾಂಕ 12 ಜನವರಿ, 1863ರಲ್ಲಿ ಕೊಲ್ಕತ್ತಾದಲ್ಲಿ ಆಯಿತು. ಬಾಲ್ಯದಲ್ಲಿಯೇ ವಿವೇಕಾನಂದರ ವರ್ತನೆಯಲ್ಲಿ ಎರಡು ವಿಷಯಗಳು ಪ್ರಖರವಾಗಿ ಕಂಡು ಬರತೊಡಗಿತು. ಅವರು ಪ್ರವೃತ್ತಿಯಿಂದಲೇ ಶ್ರದ್ಧೆ ಮತ್ತು ದಯಾಮಯ ಹೃದಯವುಳ್ಳವರಾಗಿದ್ದರು. ಎರಡನೇ ವಿಷಯವೆಂದರೆ ಬಾಲ್ಯದಿಂದಲೇ ಅವರು ಯಾವುದೇ ಸಾಹಸಮಯವಾದ ಕಾರ್ಯವನ್ನು ಹಿಂಜರಿಯದೇ ಮಾಡುತ್ತಿದ್ದರು. ಸ್ವಾಮಿ ವಿವೇಕಾನಂದರ ಸಂಪೂರ್ಣ ಕುಟುಂಬವು ಆಧ್ಯಾತ್ಮ ಮಾರ್ಗದಲ್ಲಿದ್ದುದರಿಂದ ಬಾಲ್ಯದಿಂದಲೇ ಅವರ ಮೇಲೆ ಧರ್ಮದ ಕುರಿತು ಯೋಗ್ಯ ಸಂಸ್ಕಾರವಾಯಿತು. 1970 ರಲ್ಲಿ ಅವರನ್ನು ಈಶ್ವರಚಂದ್ರ ವಿದ್ಯಾಸಾಗರ ಇವರ ಶಾಲೆಗೆ ಸೇರಿಸಲಾಯಿತು. ಶಾಲೆಯಲ್ಲಿರುವಾಗಲೇ ಅಧ್ಯಯನದೊಂದಿಗೆ ಬಲೋಪಾಸನೆಯನ್ನು ಮಾಡಿದರು.

ಸ್ವಾಮಿ ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸರ ಭೇಟಿ !


ಧರ್ಮಭಾವನೆಯಿಂದ ಪ್ರೇರಿತರಾದ ನರೇಂದ್ರನ ಮನಸ್ಸಿನಲ್ಲಿ ಚಿಕ್ಕಂದಿನಿಂದಲೇ ತೀವ್ರ ವೈರಾಗ್ಯ ಉತ್ಪನ್ನವಾಗಿರುವುದನ್ನು ಕಂಡು ಡಾ. ದತ್ತ ಇವರು ಒಮ್ಮೆ ನರೇಂದ್ರನಿಗೆ ‘ನಿನ್ನ ಜೀವನದ ಉದ್ದೇಶವು ಧರ್ಮಕಾರ್ಯವೇ ಆಗಿದ್ದರೆ, ನೀನು ನೇರವಾಗಿ ದಕ್ಷಿಣೇಶ್ವರದಲ್ಲಿರುವ ಶ್ರೀ ರಾಮಕೃಷ್ಣ ಪರಮಹಂಸರನ್ನು ಭೇಟಿಯಾಗು, ಹೋಗು’ ಎಂದು ಹೇಳಿದರು. ಒಂದು ದಿನ ಅವರಿಗೆ ಅವರ ಪಕ್ಕದ ಮನೆಯವರಾದ ಶ್ರೀ ಸುರೇಂದ್ರನಾಥ ಇವರಲ್ಲಿ ಶ್ರೀ ರಾಮಕೃಷ್ಣ ಪರಮಹಂಸರ ದರ್ಶನವಾಯಿತು. ಪ್ರಾರಂಭದ ಕೆಲವು ದಿನಗಳು ಶ್ರೀ ರಾಮಕೃಷ್ಣರು ನರೇಂದ್ರನನ್ನು ತಮ್ಮಿಂದ ಒಂದು ಕ್ಷಣವೂ ದೂರವಿಡಲು ಇಚ್ಛಿಸುತ್ತಿರಲಿಲ್ಲ. ನರೇಂದ್ರನನ್ನು ತಮ್ಮ ಹತ್ತಿರ ಕುಳ್ಳಿರಿಸಿಕೊಂಡು ಅನೇಕ ಉಪದೇಶಗಳನ್ನು ಮಾಡುತ್ತಿದ್ದರು. ಅವರಿಬ್ಬರೇ ಇರುವಾಗ ಅವರಲ್ಲಿ ಬಹಳ ಚರ್ಚೆಯಾಗುತ್ತಿತ್ತು. ಶ್ರೀ ರಾಮಕೃಷ್ಣರು ಅಪೂರ್ಣವಾಗಿ ಉಳಿದಿರುವ ತಮ್ಮ ಕಾರ್ಯವನ್ನು ನರೇಂದ್ರನಿಗೆ ವಹಿಸಿಕೊಡುವ ಯೋಚನೆಯಲ್ಲಿದ್ದರು. ಒಂದು ದಿನ ಶ್ರೀ ರಾಮಕೃಷ್ಣರು ಒಂದು ಕಾಗದದ ತುಂಡಿನ ಮೇಲೆ ‘ನರೇಂದ್ರನು ಲೋಕಶಿಕ್ಷಣದ ಕಾರ್ಯವನ್ನು ಮಾಡುವನು’ ಎಂದು ಬರೆದರು. ಅದನ್ನು ತಮಾಷೆಯಾಗಿ ತೆಗೆದುಕೊಂಡು ನರೇಂದ್ರನು ಅವರಿಗೆ ‘ಈ ಎಲ್ಲ ಕಾರ್ಯಗಳು ನನ್ನಿಂದ ಆಗುವುದಿಲ್ಲ’ ಎಂದಾಗ ಶ್ರೀ ರಾಮಕೃಷ್ಣರು ಕೂಡಲೇ ದೃಢವಾಗಿ ‘ಏನದು ಆಗುವುದಿಲ್ಲವೆಂದರೆ? ಅರೆ, ನಿನ್ನ ಎಲುಬುಗಳು ಕೂಡ ಈ ಕಾರ್ಯವನ್ನು ಮಾಡುವವು!’ ಎಂದರು. ಮುಂದೆ ಶ್ರೀ ರಾಮಕೃಷ್ಣ ಪರಮಹಂಸರು ನರೇಂದ್ರನಿಗೆ ಸಂನ್ಯಾಸ ದೀಕ್ಷೆಯನ್ನು ನೀಡಿ ಅವರ ನಾಮಕರಣವನ್ನು ‘ಸ್ವಾಮಿ ವಿವೇಕಾನಂದ’ ಎಂದು ಮಾಡಿದರು.

ಚಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದ ಸಹಭಾಗಿತ್ವ

ಭಾರತವೆಂಬ ಸುವರ್ಣಭೂಮಿಯ ಸತ್ಪುರಷರಾದ ಶ್ರೇಷ್ಠತಮವಾದ ಸನಾತನ ಹಿಂದೂ ಧರ್ಮದ ಪರಿಚಯವನ್ನು ಜಗತ್ತಿಗೆ ಮಾಡಿಕೊಡುವುದು ಒಂದು ದೈವೀ ಯೋಗವೇ ಆಗಿತ್ತು. ಆಮೇರಿಕಾದ ಶಿಕಾಗೋದಲ್ಲಿ ದಿನಾಂಕ 11 ಸಪ್ಟೆಂಬರ 1863 ರಂದು ನಡೆದ ಸರ್ವಧರ್ಮ ಸಮ್ಮೇಳನದ ಮಾಧ್ಯಮದಿಂದ ಹಿಂದೂ ಧರ್ಮದ ಬಗ್ಗೆ ತಿಳಿದುಕೊಳ್ಳಲು ಆಹ್ವಾನಿಸಿದ ಸ್ವಾಮಿ ವಿವೇಕಾನಂದರು ಹಿಂದೂ ಧರ್ಮದ ನಿಜವಾದ ಪ್ರತಿನಿಧಿಯಾದರು. ಸೋಮವಾರ, ದಿನಾಂಕ 11 ಸಪ್ಟೆಂಬರ 1863 ರಂದು ಬೆಳಿಗ್ಗೆ ಧರ್ಮಗುರುಗಳ ಪ್ರಾರ್ಥನೆಯ ನಂತರ ಸಂಗೀತಮಯ ವಾತಾವರಣದಲ್ಲಿ ಸರ್ವಧರ್ಮ ಸಮ್ಮೇಳನದ ಶುಭಾರಂಭವಾಯಿತು.

‘ಅಮೇರಿಕಾದ ನನ್ನ ಸಹೋದರ ಸಹೋದರಿಯರೇ’ ಎಂದು ಸಭೆಯಲ್ಲಿರುವವರನ್ನು ಸಂಬೋಧಿಸಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರ ಚೈತನ್ಯಪೂರ್ಣ ಮತ್ತು ತೇಜಸ್ವಿ ವಾಣಿಯಿಂದ ಎಲ್ಲರೂ ಮಂತ್ರಮುಗ್ಧರಾದರು. ಆ ಶಬ್ದಗಳು ಎಂತಹ ಅದ್ಭುತ ಶಕ್ತಿಯಿಂದ ತುಂಬಿದ್ದವು ಎಂದರೆ, ಸ್ವಾಮಿ ವಿವೇಕಾನಂದರ ಆ ಶಬ್ದಗಳನ್ನು ಉಚ್ಚರಿಸುತ್ತಲೇ ಸಾವಿರಾರು ಸ್ತ್ರೀ ಪುರುಷರು ತಮ್ಮ ಸ್ಥಳದಿಂದ ಎದ್ದು ನಿಂತರು ಮತ್ತು ಅವರು ಚಪ್ಪಾಳೆಯ ಪ್ರಚಂಡ ಸುರಿಮಳೆಯನ್ನು ಮಾಡಿದರು. ಜನರ ಹರ್ಷದಿಂದ ತುಂಬಿದ ಧ್ವನಿ ಮತ್ತು ಕರತಾಡನ ನಿರಂತರವಾಗಿತ್ತು. ಸ್ವಾಮಿ ವಿವೇಕಾನಂದರ ಆ ಭಾವಪೂರ್ಣ ಶಬ್ದಗಳಲ್ಲಿರುವ ಸತ್ವದಿಂದ ಎಲ್ಲ ಶ್ರೋತ್ರುಗಳ ಹೃದಯವು ಸ್ಪಂದಿಸಿತು. ಉಪಸ್ಥಿತ ವಕ್ತಾರರಲ್ಲಿ ‘ಸಹೋದರ ಸಹೋದರರಿಯರೇ’ ಎಂಬ ಶಬ್ದಗಳಿಂದ ಸಕಲ ಮಾನವ ಜಾತಿಯನ್ನು ಆಹ್ವಾನಿಸುವ ಸ್ವಾಮಿ ವಿವೇಕಾನಂದರು ಅದ್ವಿತೀಯರಾಗಿದ್ದರು.
‘ಹಿಂದೂ ಸಮಾಜವು ಬಡವಾಗಿರಬಹುದು; ಆದರೆ ಅದು ಘೃಣಾಸ್ಪದವಲ್ಲ. ಅದು ದೀನವಾಗಿರಬಹುದು, ದು:ಖಿತವಾಗಿರಬಹುದು, ಆದರೆ ಅತ್ಯಮೂಲ್ಯವಾದಂತಹ ಪಾರಮಾರ್ಥಿಕ ಸಂಪತ್ತಿನ ಉತ್ತರಾಧಿಕಾರಿಯಾಗಿದೆ. ಧರ್ಮದ ಕ್ಷೇತ್ರದಲ್ಲಿ ಅದು ಜಗದ್ಗುರುವಾಗಬಲ್ಲದು, ಇದು ಹಿಂದೂ ಧರ್ಮದ ಯೋಗ್ಯತೆಯಾಗಿದೆ’ ಈ ಶಬ್ದಗಳಿಂದ ಹಿಂದೂ ಧರ್ಮದ ಮಹತ್ವವನ್ನು ಬಣ್ಣಿಸಿದರು.

ಅನೇಕ ಶತಕಗಳ ನಂತರ ಸ್ವಾಮಿ ವಿವೇಕಾನಂದರು ಹಿಂದೂ ಸಮಾಜಕ್ಕೆ ಅದರ ಸೀಮೆಯು ಎಷ್ಟು ವಿಸ್ತೃತವಾಗಿದೆಯೆನ್ನುವುದನ್ನು ತೋರಿಸಿಕೊಟ್ಟರು. ಸ್ವಾಮಿ ವಿವೇಕಾನಂದರು ಯಾವುದೇ ಧರ್ಮದ ನಿಂದನೆ ಅಥವಾ ಟೀಕೆಯನ್ನು ಮಾಡಲಿಲ್ಲ. ಯಾವುದೇ ಧರ್ಮವನ್ನು ಅವರು ಕ್ಷುದ್ರವೆನ್ನಲಿಲ್ಲ. ಹಿಂದೂ ಧರ್ಮದ ಕುರಿತು ವಿದೇಶಿಯರ ತುಚ್ಚ ನಡುವಳಿಕೆ ಮತ್ತು ಅಪಮಾನಗಳೆಂಬ ಕೆಸರನ್ನು ಮೆತ್ತಿಕೊಂಡಿದ್ದ ಹಿಂದೂ ಧರ್ಮವನ್ನು ಸ್ವಾಮಿ ವಿವೇಕಾನಂದರು ಕೆಸರಿನಿಂದ ಪ್ರತ್ಯೇಕಿಸಿ, ಜಗತ್ತಿಗೆ ಅದರ ಮೂಲ ತೇಜಸ್ವಿ ಸ್ವರೂಪವನ್ನು ಪರಿಚಯಿಸಿದರು.

🖊️.ಶ್ರೀ. ಮೋಹನ ಗೌಡರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ,  ಕರ್ನಾಟಕಸಂಪರ್ಕ : 7204082609

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!