ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ತುಂಬೆತಡ್ಕ: ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆಗಸ್ಟ್ 02 ರಂದು ರಾಣೆಯರ್ ಸಭಾಭವನ ತುಂಬೆತಡ್ಕದಲ್ಲಿ ನಡೆಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಧೀರ್ ಎಂ.ಎಸ್‌ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಸಂಸ್ಥೆಯ ಖಜಾಂಚಿ ಮತ್ತು ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ರವರು ಮಾತನಾಡಿ ಯಾವುದೇ ವಿದ್ಯೆಯಾದರು ನಮಗೆ ಅದು ಎಂದಿಗೂ ಶಾಶ್ವತ. ಮಹಿಳೆಯರು ಯಾವ ವಿಷಯದಲ್ಲೂ ಹಿಂದುಳಿಯದೆ ಸ್ವಾವಲಂಬಿ ಜೀವನವನ್ನು ಮಾಡುತ್ತ ಮುನ್ನಡೆಯುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಪ್ರತಿಮಾ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ನಮ್ಮ ಸಂಸ್ಥೆಯ ಪರವಾಗಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಶ್ರೀಮತಿ ಪ್ರತಿಮಾ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ಅರಸಿನಮಕ್ಕಿ, ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ನೀತಾ ರಾಧೇಶ್ ಆಚಾರ್ಯರವರು ಸೇವಾಭಾರತಿ ಸಂಸ್ಥೆಯ ಜೊತೆ ಕೈ ಜೋಡಿಸಿ ಅರಸಿನಮಕ್ಕಿ, ನೆಲ್ಯಡ್ಕ ಹಾಗೂ ತುಂಬೆತಡ್ಕದಲ್ಲಿ ಸತತ 3 ಶಿಬಿರದ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು 91 ಮಂದಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಕಾರಣಿಕರ್ತರಾಗಿದ್ದಾರೆ ಇವರಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ನಿರ್ದೇಶಕರಾದ ಶ್ರೀಮತಿ ಬೇಬಿ, ಬೆಳ್ತಂಗಡಿ LIC of INDIA, Developement Officer ಶ್ರೀ ಉದಯಶಂಕರ್ ಕೆ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರೇಮಚಂದ್ರ, ನಿವೃತ್ತ ಯೋಧರು ಶ್ರೀ ಕೆ. ಮಹಾಬಲ ತುಂಬೆತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 31 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಶ್ರೀಮತಿ ವೇದಾವತಿ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಆಶಾ ಧನ್ಯವಾದವಿತ್ತರು.

Spread the love
  • Related Posts

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…

    Spread the love

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…

    Spread the love

    You Missed

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 5 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 9 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 10 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 8 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 15 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 11 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ