ಅತಿಯಾದ ಅರಶಿನ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಅಧಿಕ ಪ್ರಮಾಣದಲ್ಲಿ ಅರಶಿನ ಬಳಕೆ ಮಾಡುವವರು ಈ ವರದಿ ನೋಡಿ

ಅರಿಶಿಣವನ್ನು ಹೆಚ್ಚು ಸೇವಿಸುವದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ

ಸಾಮಾನ್ಯವಾಗಿ ಅಡುಗೆಯಲ್ಲಿ ಮಸಾಲೆ ಪದಾರ್ಥವಾಗಿ ಅರಿಶಿಣವನ್ನು ಬಳಸುತ್ತೇವೆ. ಮುಖದ ಕಾಂತಿಯನ್ನೂ ಸಹ ಹೆಚ್ಚಿಸಿಕೊಳ್ಳಲು ನೈಸರ್ಗಿಕ ಅರಿಶಿಣವನ್ನು ತೇಯ್ದು ಮುಖಕ್ಕೆ ಹಚ್ಚಿಕೊಳ್ಳುತ್ತೇವೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣ ಮತ್ತು ಉರಿಯೂತ ಹೋಗಲಾಡಿಸುವ ಗುಣಲಕ್ಷಣಗಳನ್ನು ಹೊಂದಿದೆ. ಕೊರೊನಾ ಸಮಯದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅರಿಶಿಣವನ್ನು ಬಳಸುತ್ತಿದ್ದಾರೆ. ಅರಿಶಿಣವು ಅರೋಗ್ಯಕ್ಕೆ ಎಷ್ಟು ಪ್ರಯೋಜನಗಳನ್ನು ನೀಡುತ್ತದೆಯೋ, ಅತಿಯಾದ ಬಳಕೆ ಅಷ್ಟೇ ಹಾನಿಯನ್ನುಂಟು ಮಾಡುತ್ತದೆ.

ಅರಿಶಿಣವನ್ನು ಹೆಚ್ಚು ಸೇವಿಸುವುದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ. ಕಬ್ಬಿಣವು ಖನಿಜವಾಗಿದ್ದು ಅದು ದೇಹದಲ್ಲಿ ಹಿಮೋಗ್ಲೋಬಿನ್​ ಅಂಶವನ್ನು ತಯಾರಿಸಲು ಸಹಾಯಕವಾಗಿದೆ.

ಅರಿಶಿಣದಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಅಡುಗೆ ಪದಾರ್ಥಗಳಲ್ಲಿ ರುಚಿಯನ್ನು ಹೆಚ್ಚಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅರಿಶಿಣವನ್ನು ಬಳಸಬಹುದು. ಆದರೆ ಅತಿಯಾಗಿ ಅರಿಶಿಣ ಬಳಸುವುದು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಅರಿಶಿಣವನ್ನು ಅತಿಯಾಗಿ ಸೇವಿಸುವುದರಿಂದ ಯಕೃತ್ತು ಗಾತ್ರ, ಹೊಟ್ಟೆಯಲ್ಲಿ ಹುಣ್ಣು, ಉರಿಯೂತ ಹೆಚ್ಚಾಗುವಂತಹ ಸಮಸ್ಯೆ ಕಾಡತೊಡಗುತ್ತದೆ. ಇದಲ್ಲದೇ ಪಿತ್ತಜನಕಾಂಗ ಮತ್ತು ಕರುಳಿನ ಕ್ಯಾನ್ಸರ್​ ಅಪಾಯವೂ ಹೆಚ್ಚಾಗುತ್ತದೆ.

ರಕ್ತಹೀನತೆ, ಮಧುಮೇಹ, ರಕ್ತ ಸಂಬಂಧಿತ ಖಾಯಿಲೆಗಳಿಂದ ಬಳಲುತ್ತಿರುವವರು ಹೆಚ್ಚಾಗಿ ಅರಿಶಿಣ ಸೇವನೆ ಮಾಡುವುದನ್ನು ಆದಷ್ಟು ತಪ್ಪಿಸಿ. ಹಲವು ರೋಗಗಳು ನಮ್ಮ ಆಹಾರ ಕ್ರಮದಿಂದಲೇ ಹುಟ್ಟಿಕೊಳ್ಳುತ್ತವೆ. ಅವುಗಳಿಗೆ ಪರಿಹಾರವೂ ಸಹ ಆಹಾರ ಕ್ರಮ. ಪ್ರತಿನಿತ್ಯ ಪೌಷ್ಠಿಕ ಆಹಾರ ಸೇವಿಸುವುದರ ಜತೆಗೆ ನಿಯಮಿತವಾಗಿ ಆಯುರ್ವೇದದ ಹಿನ್ನೆಲೆಯುಳ್ಳ ಆಹಾರವನ್ನೂ ಸೇವಿಸಬೇಕು. ಬಾಯಿಗೆ ರುಚಿ ಎಂದು ಅತಿಯಾಗಿ ಆಹಾರ ಸೇವಿಸಿದರೆ ನಿಮ್ಮ ಆರೋಗ್ಯಕ್ಕೆ ಹಾನಿಯುಂಟಾಗಬಹುದು. ಹಿತ-ಮಿತವಾಗಿ ಆಹಾರ ಸೇವಿಸಿ ನಿಮ್ಮ ಆರೋಗ್ಯ ಆರೈಕೆ ಮಾಡಿಕೊಳ್ಳಿ

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 55 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 93 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 40 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ