ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆ ಮೂಲಕ ಎದುರಾಗಿದ್ದ ದೊಡ್ಡ ಅಗ್ನಿಪರೀಕ್ಷೆಯಲ್ಲೂ ಜಯಗಳಿಸಿದ್ದಾರೆ.

ಸದ್ಯ ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗದಲ್ಲಿ ಸಂಭ್ರಮಾಚರಣೆ ಜೋರಾಗಿದ್ದು, ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರು ಘೋಷಣೆ ಕೂಗಿ, ಹೂವಿನ ಮಳೆ ಸುರಿಸಿದು ಹರ್ಷ ವ್ಯಕ್ತಪಡಿಸಿದರು.

ಹೈಕೋರ್ಟ್ ಆದೇಶದ ಮೇರೆಗೆ ಇಂದು ಚಿಕ್ಕಮಗಳೂರು ನಗರದ IDSG ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆ ಮಾಡಲಾಗಿದೆ. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.

ಶಾಸಕ ಟಿ.ಡಿ.ರಾಜೇಗೌಡ ಗೆದ್ದಿದ್ದಾರೆ ಎಂದು ಅಭಿಮಾನಿಗಳ ಸಂಭ್ರಮ
ಇನ್ನು ಅತ್ತ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಸಂಭ್ರಮಿಸಿದರು. 267 ಮತಗಳು ಬಹುತೇಕ ತಿರಸ್ಕೃತ ಬೆನ್ನಲ್ಲೇ ರಾಜೇಗೌಡ ಗೆದ್ದರು ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.

ಗೆಲುವಿನ ಬಗ್ಗೆ ಕಾಂಗ್ರೆಸ್ ‌ಶಾಸಕ ರಾಜೇಗೌಡ ಹೇಳಿದ್ದಿಷ್ಟು
ಇನ್ನು ಈ ಬಗ್ಗೆ ಕಾಂಗ್ರೆಸ್ ‌ಶಾಸಕ ರಾಜೇಗೌಡ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ ನನಗೆ ಗೆಲುವಾಗಿದೆ. ನನ್ನ ಕಾರ್ಯಕರ್ತರು ಸಂಭ್ರಮ ಪಡುವಂತಾಗಿದೆ. ನನ್ನ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿದ್ದರು. ಆದರೆ ಸತ್ಯಕ್ಕೆ ಜಯವಾಗಿದೆ ಎಂದರು.

ಈ ಹಿಂದೆ ಮತ‌ಎಣಿಕೆ ವೇಳೆ ಪ್ರತಿಯೊಂದು ಮತಗಳನ್ನ ಪರಿಶೀಲನೆ ಮಾಡಿದ್ದರೂ ಆರೋಪ ಮಾಡಿದ್ದರು. ಕೆಲವು ಟ್ರಂಕ್ ಗಳು ಓಪನ್ ಆಗಿತ್ತು, ಅದಕ್ಕೆ ನಾನು ಟ್ಯಾಂಪರಿಂಗ್ ಮಾಡಿರಬಹುದು ಎಂದು ಆರೋಪ ಮಾಡಿದ್ದೆ. ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಅಂದ್ರು. ಹಾಗಾಗಿ ನನಗೆ ಅನುಮಾನ ಬಂದಿತ್ತು. 12 ಅಂಚೆ ಮತಗಳು ನಾಪತ್ತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.


2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರವು ತೀವ್ರ ಕುತೂಹಲ ಮೂಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು 1822 ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕೃತಗೊಳಿಸಲಾಗಿತ್ತು. ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೀವರಾಜ್ ಅವರು ಮರು ಎಣಿಕೆಗೆ ಮನವಿ ಮಾಡಿದ್ದರು, ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಆ ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು (ಮೇ 2, 2026) ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು. ಅದರಂತೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರು ಎಣಿಕೆಯಲ್ಲೂ ಟಿ.ಡಿ. ರಾಜೇಗೌಡ ಅವರೇ ಜಯಭೇರಿ ಬಾರಿಸುವ ಮೂಲಕ ತಮ್ಮ ಗೆಲುವನ್ನು ಮರುಸ್ಥಾಪಿಸಿಕೊಂಡಿದ್ದಾರೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ