ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಪ್ರಾರಂಭಿಸಲು ಸರಕಾರದ ಸಮ್ಮತಿ

ಬೆಂಗಳೂರು, : ಕೋವಿಡ್ ವೈರಸ್ ಹರಡುತ್ತಿದ್ದ ಹಿನ್ನಲೆಯಲ್ಲಿ ರಾಜ್ಯ ಸರಕಾರವು ದೇವಸ್ಥಾನಗಳಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಹಾಗೂ ಜನ ಸಂದಣಿ ಇರುವ ಕಾರ್ಯಕ್ರಮಗಳನ್ನ ಮಾರ್ಚ್ ೨೦ ರ ಆದೇಶ ಅನ್ವಯ ರದ್ದುಪಡಿಸಿತ್ತು.

ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಪ್ರಾರಂಭಿಸುವ ಬಗ್ಗೆ ಭಕ್ತಾದಿಗಳಿಂದ ಬರುತ್ತಿದ್ದ ಹಿನ್ನಲೆಯಲ್ಲಿ ಷರತ್ತುಗಳೊಂದಿಗೆ ದೈನಂದಿನ ಸೇವೆ ಸೆಪ್ಟೆಂಬರ್ ೧ ರಿಂದ ಪ್ರಾರಂಭಿಸಲು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರವು ಅನುಮತಿ ನೀಡಿದೆ.

ಷರತ್ತುಗಳು:

ದೇವಾಲಯಗಳ ಸಂಪ್ರದಾಯಕ್ಕೆ ಅನುಗುಣವಾಗಿ ಈ ಹಿಂದೆ ನಡೆಸುತ್ತಿದ್ದ ಸೇವೆಗಳನ್ನು ಭಕ್ತರ ಸಂಖ್ಯೆ ಹಾಗೂ ಸ್ಥಳಾವಕಾಶ ಲಭ್ಯತೆ ಆಧಾರದ ಮೇಲೆ ನಡೆಸಬಹುದಾದ ಸೇವೆಗಳ ಸಂಖ್ಯೆಗಳನ್ನು ಆಯಾಯಾ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತ ಅಧಿಕಾರಿಗಳು, ಅನುವಂಶಿಕ ಮೊಕ್ತೇಸರರು, ನಿಗದಿಪಡಿಸಿಕೊಂಡು ಕೋವಿಡ್ -೧೯ (ಕೊರೋನಾ ವೈರಸ್) ಹರಡದಂತೆ ಹಾಲಿ ಇರುವ ಮಾರ್ಗಸೂಚಿಗಳಿಗೆ ಒಳಪಟ್ಟು ಭಕ್ತಾದಿಗಳು ಸೇವೆಗಳಲ್ಲಿ ಪಾಲ್ಗೊಂಡು ಅವಕಾಶ ಕಲ್ಪಿಸುವುದು.

ದೇವಾಲಯಗಳಲ್ಲಿ ಜಾತ್ರಾ ಉತ್ಸವಗಳು, ಬ್ರಹ್ಮ ರಥೋತ್ಸವ , ಪವಿತ್ರೋತ್ಸವ ಮುಂತಾದ ವಿಶೇಷ ಉತ್ಸವ ನಡೆಸುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಸದರಿ ಉತ್ಸವಗಳನ್ನು ನಿಲ್ಲಿಸಲು ಸಂಪ್ರದಾಯವಿಲ್ಲದ ದೇವಾಲಯಗಳಲ್ಲಿ ಇವುಗಳನ್ನು ದೇವಾಲಯದ ಆಗಮಿಕರು, ತಂತ್ರಿಗಳು, ಅರ್ಚಕರು, ಸಿಬ್ಬಂದಿಯವರು ಸಾಂಕೇತಿಕವಾಗಿ ಹೋಮಾದಿಗಳು, ಪ್ರಾಯಶ್ಚಿತ್ತಾದಿಗಳನ್ನು ನಡೆಸಿ ಕೇವಲ ಉತ್ಸವಗಳನ್ನು ದೇವಾಲಯದ ಆವರಣ, ಒಳಪ್ರಾಕಾರದೊಳಗೆ ಉತ್ಸವ ದಿನಗಳಲ್ಲಿ ಭಕ್ತಾದಿಗಳು, ಸಾರ್ವಜನಿಕರ ಸಂದಣಿ ಇಲ್ಲದಂತೆ ನಡೆಸಿ ಪೂರ್ಣಗೊಳಿಸುವುದು.

ಕೋವಿಡ್ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು ಹಾಗೂ ಈ ಕಚೇರಿಯ ನಿರ್ದೇಶನಗಳಂತೆ ಸಾಮಾಜಿಕ ಅಂತರ ಹಾಗು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಆಯಾಯಾ ಜಿಲ್ಲಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳು ಹೊರಡಿಸಿರುವ , ಹೊರಡಿಸಲಿರುವ ಆದೇಶ ಪಾಲಿಸತಕ್ಕದ್ದು.

ದೇವಾಲಯಗಳಲ್ಲಿ ಸಾಮಾಜಿಕ ಅಂತರ ಕಾಪಾಡುವ ಹಾಗೂ ಸ್ಯಾನಿಟೈಸರ್ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳು, ಧಾರ್ಮಿಕ ದತ್ತಿ ಇಲಾಖೆಯ ಸಹಾಯ ಆಯುಕ್ತರುಗಳು ಖಾತರಿಪಡಿಸಿಕೊಳ್ಳದ್ದು ಹಾಗೂ ಮೇಲ್ಕಂಡ ನಿರ್ದೇಶನಗಳ ಉಲ್ಲಂಘನೆ ಕಂಡುಬಂದಲ್ಲಿ ಧಾರ್ಮಿಕ ದತ್ತಿ ಆಯುಕ್ತರಿಗೆ ವರದಿ ಸಲ್ಲಿಸುವುದು.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 37 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 142 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 106 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 78 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 82 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 59 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ