ತಾಲೂಕು ಪತ್ರಕರ್ತರ ಸಂಘದಿಂದ ಉಜಿರೆ ಸ.ಹಿ.ಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸಹಿಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಸೋಮವಾರ ಹಸ್ತಾಂತರಿಸಲಾಯಿತು.
ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ “ಉತ್ತಮ ವಾತಾವರಣ ಇರುವ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಉತ್ಸಾಹ ಹೆಚ್ಚಿರುತ್ತದೆ. ಇಂದಿನ ದಿನಗಳಲ್ಲಿ ಅಂಕಗಳೇ ಮಾನದಂಡವಲ್ಲ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ತಕ್ಕ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿದೆ” ಎಂದರು.
ಶಾಲೆಯ ಅಭಿವೃದ್ಧಿಗೆ ಮುತುವರ್ಜಿ ವಹಿಸಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ ಕುಮಾರ್ ಮಾತನಾಡಿ “ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಪೋಷಕರ ಪಾತ್ರವು ಮಹತ್ವದ್ದು. ಪೋಷಕರು ಶಾಲೆಗಳಿಗೆ ಆಗಾಗ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಗಳಿಗೆ ಸ್ಪಂದಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಕೈಗಳು ಒಟ್ಟಾದರೆ ತ್ವರಿತ ಪ್ರಗತಿ ಸಾಧ್ಯ.ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಲೆಗಳನ್ನು ಅಭಿವೃದ್ಧಿಪಡಿಸುವ ಕುರಿತು ಯೋಜನೆ ರೂಪಿಸಲಾಗಿದೆ” ಎಂದರು.
ಇಲಾಖೆಯ ವತಿಯಿಂದ ಮಕ್ಕಳಿಗೆ ಶೂ-ಸಾಕ್ಸ್ ವಿತರಿಸಿ ಮಾತನಾಡಿದ ಬೆಳ್ತಂಗಡಿ ಬಿಇಒ ತಾರಕೇಸರಿ “ಶಾಲಾ ಚಟುವಟಿಕೆಗಳಿಗೆ ಗ್ರೀನ್ ಬೋರ್ಡ್ ಗಳು ಅತ್ಯಗತ್ಯವಾಗಿದ್ದು ತಾಲೂಕಿನ 179 ಸರಕಾರಿ ಶಾಲೆಗಳ ಪೈಕಿ ಬೆರಳೆಣಿಕೆಯ ಶಾಲೆಗಳಲ್ಲಿ ಮಾತ್ರ ಈ ಸೌಲಭ್ಯವಿದೆ. ಮಕ್ಕಳಿಗೆ ಸಂಸ್ಕೃತಿಯೊಂದಿಗೆ ವಿದ್ಯೆ ನೀಡಬೇಕು. ಉತ್ತಮ ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಣ ಮಕ್ಕಳ ಶಿಕ್ಷಣಕ್ಕೆ ಅಡಿಪಾಯ ಹಾಕುವುದರ ಜತೆ ಪ್ರೌಢಶಾಲೆಗಳಲ್ಲಿ ಹೆಚ್ಚಿನ ಫಲಿತಾಂಶಕ್ಕೆ ಕಾರಣವಾಗುತ್ತದೆ” ಎಂದರು.
ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆ ವಹಿಸಿದರು.
ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ ಕಾರಂತ ಶುಭ ಹಾರೈಸಿದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆರತಿ, ಮುಖ್ಯ ಶಿಕ್ಷಕಿ ಸಾವಿತ್ರಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ ರಾವ್, ಮಾಜಿ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಜತೆ ಕಾರ್ಯದರ್ಶಿ ಮನೋಹರ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ಪತ್ರಕರ್ತರ ಸಂಘದ ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಖಜಾಂಚಿ ಪುಷ್ಪರಾಜ ಶೆಟ್ಟಿ, ಸದಸ್ಯರಾದ ಬಿ.ಎಸ್. ಕುಲಾಲ್, ಅರವಿಂದ ಹೆಬ್ಬಾರ್, ಸಂತೋಷ್ ಕೋಟ್ಯಾನ್,ಅಚುಶ್ರೀ ಬಾಂಗೇರು,ತುಕಾರಾಂ ಬಿ. ಭಾಗವಹಿಸಿದ್ದರು.

Spread the love
  • Related Posts

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…

    Spread the love

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಮಂಗಳೂರು: ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರ್ ಆರಂಭಗೊಂಡಿದೆ. ಮಳೆಗಾಲದ ನಂತರ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಗಳಿವೆ.ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಈ ಫೇರೀಯಲ್ಲಿ 5ರಿಂದ 7ಗಂಟೆಗೆಗಳ ಪ್ರಯಾಣವಿದ್ದು 1200/-ರಿಂದ 1500/- ಟಿಕೆಟ್ ದರ ಇರುವ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 107 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 67 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 197 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 199 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 101 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 120 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ