ಇಂದು ಸಂಪುಟ ವಿಸ್ತರಣೆ ಬಹುತೇಕ ಖಚಿತ! ಇಂದು ಆಗುತ್ತಾ 15 ಸಚಿವರ ಪ್ರಮಾಣವಚನ?

ಬೆಂಗಳೂರು: ಸಂಪುಟ ವಿಸ್ತರಣೆ ಪಟ್ಟಿಗೆ ಅಂತಿಮ ಸ್ವರೂಪ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರಿಂದ ಬುಲಾವ್‌ ಬಂದಿದ್ದು, ನಿನ್ನೆ ಸಂಜೆ ಅವರು ದಿಲ್ಲಿಗೆ ತೆರಳಿದ್ದಾರೆ. ಪ್ರವಾಹ, ಕೋವಿಡ್‌ ನಿರ್ವಹಣೆ ಹಿನ್ನೆಲೆಯಲ್ಲಿ’ಎಮರ್ಜೆನ್ಸಿ ಕ್ಯಾಬಿನೆಟ್‌’ ರಚನೆಗೆ ಹೈಕಮಾಂಡ್‌ನಿಂದ ತಕ್ಷಣ ಸಮ್ಮತಿ ದೊರಕುವ ನಿರೀಕ್ಷೆಯಿದ್ದು, ನೂತನ ಸಚಿವರು ನಾಳೆ ಸಂಜೆಯೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ದಿಲ್ಲಿ ನಿರ್ಧಾರ ವಿಳಂಬವಾದರೆ ಇದು ಬುಧವಾರಕ್ಕೆ ಮುಂದೂಡಿಕೆ ಆಗಬಹುದು. 

ಜಾತಿ, ಪ್ರಾದೇಶಿಕ ಪ್ರಾತಿನಿಧ್ಯ ಒಳಗೊಂಡು ಸಾಮಾಜಿಕ ನ್ಯಾಯದಡಿ ಸಂಪುಟ ರಚಿಸಲು ಹೈಕಮಾಂಡ್‌ ಯೋಚಿಸಿದೆ. ಸಿಎಂ ಬೊಮ್ಮಾಯಿ ಕೂಡ ಈ ನಿಟ್ಟಿನಲ್ಲಿ ಆಲೋಚನೆ ಮಾಡಿದ್ದಾರೆ. 5 ರಿಂದ 10 ಸ್ಥಾನ ಖಾಲಿ ಉಳಿಸಿಕೊಂಡು ಉಳಿದ ಸ್ಥಾನ ಭರ್ತಿ ಮಾಡಲು ಸಿಎಂ ಬಯಸಿದ್ದಾರೆ. ಆದರೆ ‘ಈ ಬಾರಿ 12ರಿಂದ 15 ಸಚಿವರ ನೇಮಕ ಸಾಕು. ಎರಡನೇ ಹಂತದಲ್ಲಿ ಪೂರ್ಣ ಪ್ರಮಾಣದ ವಿಸ್ತರಣೆ ಕೈಗೊಳ್ಳುವುದು ಉತ್ತಮ’ ಎನ್ನುವುದು ಹೈಕಮಾಂಡ್‌ ನಿಲುವಾಗಿದೆ ಎನ್ನಲಾಗಿದೆ. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಮುಖ್ಯಮಂತ್ರಿಯವರು ಸೋಮವಾರ ಭೇಟಿ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೂ ಮಾತುಕತೆ ನಡೆಯಲಿದೆ. ಸಂಭಾವ್ಯ ಸಚಿವರ ಪಟ್ಟಿಯನ್ನು ಅವರು ಕೊಂಡೊಯ್ದಿದ್ದಾರೆ. ಇದಕ್ಕೆ ಮುನ್ನ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿದ್ದಾರೆ. ಬಿಎಸ್‌ವೈ ಕೂಡ ತಮ್ಮ ಆಪ್ತರಲ್ಲಿ ಕೆಲವರ ಹೆಸರು ಶಿಫಾರಸು ಮಾಡಿರುವ ಸಾಧ್ಯತೆ ಇರುತ್ತದೆ. ಇದರ ಹೊರತಾಗಿ ಹೈಕಮಾಂಡ್‌ ಅಪೇಕ್ಷೆಯೇನಿದೆ ಎನ್ನುವುದರ ಬಗ್ಗೆ ಸ್ಪಷ್ಟತೆಯಿಲ್ಲ. 

ನೂತನ ಸಚಿವರ ಪ್ರಮಾಣದ ವಚನದ ಬಗ್ಗೆ ಯಾವುದಕ್ಕೂ ತಯಾರಾಗಿರುವಂತೆ ಮುಖ್ಯ ಕಾರ್ಯದರ್ಶಿ ಕಾರ್ಯಾಲಯದಿಂದ ಶಿಷ್ಟಾಚಾರ ವಿಭಾಗಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 

Spread the love
  • Related Posts

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    You Missed

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 36 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 72 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 39 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 83 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 79 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 22 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ