ನಾಡಿನ ವಿವಿಧೆಡೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥರ ಪುಣ್ಯ ಸಂಸ್ಮರಣೆ ಕಾರ್ಯಕ್ರಮ

ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ
ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಪುಣ್ಯಸ್ಮರಣೆಯನ್ನು ನಾಡಿನ ವಿವಿಧ ಸ್ಥಳಗಳಲ್ಲಿ ಆಚರಿಸಲಾಯಿತು.

ದಕ್ಷಿಣಕನ್ನಡ ಜಿಲ್ಲೆಯ ಕೇಮಾರಿನಲ್ಲಿ ಶ್ರೀ ಸಾಂದಿಪಿನಿಮಠದ ಶ್ರೀ ಈಶವಿಠಲದಾಸ ಸ್ವಾಮೀಜಿಯವರು ತಮ್ಮ ಮಠದಲ್ಲಿ ಶ್ರೀ ವರದನಾರಾಯಣ, ಮೂಕಾಂಬಿಕಾ, ಹಾಗೂ ಶಾಲಗ್ರಾಮ ಸನ್ನಿಧಿಗೆ ವಿಶೇಷ ಅಭಿಷೇಕ ಹಾಗೂ ಮಹಾಪೂಜೆ ಸಲ್ಲಿಸಿದರು. ನಂತರ ಶ್ರೀ ಲಕ್ಷ್ಮೀವರತೀರ್ಥ
ಶ್ರೀಪಾದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ
ನುಡಿನಮನ ಸಲ್ಲಿಸಲಾಯಿತು.

ಕಿರಿ ಮಂಜೇಶ್ವರದ ಹೊಸಹಿತ್ಲು ಸಮುದ್ರ ಕಿನಾರೆಯಲ್ಲಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷರಾದ ಉದಯ್ ಎಂ ಶ್ರೀಯಾನ್, ಕೋಶಾಧಿಕಾರಿ ವೆಂಕಟೇಶಪೂಜಾರಿ, ನಿಕಟಪೂರ್ವ ಅಧ್ಯಕ್ಷ ವಿಜಯ್ ಯೆಮ್ ಚಂದ್ರನ್,ಹಾಗೂ ಊರಿನವರು ಶ್ರೀಶಿರೂರು ಶ್ರೀಪಾದರ ಸ್ಮರಣಾರ್ಥ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದ್ದರು.

ಉಡುಪಿಯ ಪರಿಯಾಳ ಸಮುದಾಯದ ಜಿಲ್ಲಾ.ಪ.ಸ.ಸು.ಸಂಘದ ವತಿಯಿಂದ ನಮನಗಳನ್ನು ಸದಸ್ಯರು ಅರ್ಪಿಸಿದರು.

ಮುಂಬೈನ ವಿ.ಮೋಹನ್ ಮತ್ತು ಕುಟುಂಬಿಕರು ಮುಂಬೈಯಲ್ಲಿನ ತಮ್ಮ ಬಂಧುಮಿತ್ರರ ಜೊತೆ ಸೇರಿ ಪುಷ್ಪ ನಮನ ಸಲ್ಲಿಸಿದರು.

ಬೆಂಗಳೂರಿನ ಶ್ರೀಕೃಷ್ಣ ಟೂರ್ಸ್ ಆಂಡ್ ಟ್ರಾವೆಲ್ಸ್ ನ ಶ್ರೀನವೀನ ಅವರಿಂದ ಸ್ವಗೃಹದಲ್ಲಿ ವಿಶೇಷ ಪುಷ್ಪಾರ್ಚನೆ ಕಾರ್ಯಕ್ರಮ ಜರಗಿತು.

ಉಡುಪಿಯಲ್ಲಿ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಸಹೋದರರು ಮತ್ತು ಬಂಧುಗಳು ತಮ್ಮ ವಠಾರದಲ್ಲಿ ಶ್ರೀಪಾದರ ಭಾವ ಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ನಡೆಸಿ ಪುಣ್ಯಸ್ಮರಣೆಗೈದು ಪುಣ್ಯ ದಿನವನ್ನು ಆಚರಿಸಿದರು.
ಅಷ್ಟೇ ಅಲ್ಲದೆ ಶಿರೂರು ಅಭಿಮಾನಿ ಬಳಗದ ಸದಸ್ಯರು ಹಾಗೂ ನಾಡಿನಾದ್ಯಂತ ಶ್ರೀಪಾದರ ಬಹುತೇಕ
ಶಿಷ್ಯವೃಂದದವರು ಭಾನುವಾರದ ಲಾಕ್ ಡೌನ್ ನಿಮಿತ್ತ ಸ್ವಗೃಹದಲ್ಲೇ ಕುಟುಂಬಿಕರು ಹಾಗೂ ಸ್ನೇಹಿತರ ಜೊತೆ ಸೇರಿ ಶ್ರೀಪಾದರ ಪುಣ್ಯಸ್ಮರಣೆಯನ್ನು ಆಚರಿಸಿದರು.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 179 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 61 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 24 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 43 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 66 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 40 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ