ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

ಸುರತ್ಕಲ್: ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ.

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ.

ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಆರೋಪಿಸಿದ್ದಾರೆ.

ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡಲಾಗಿತ್ತು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವಂತೆ, ಇದೀಗ ಪ್ರಕರಣ ತಿರುಚಲು ಹಾಗೂ ಏನೂ ಆಗಿಲ್ಲವೆಂಬತೆ ಮಾಡಲು ಮೊಬೈಲ್ ಅದಲು ಬದಲು ಮಾಡಲಾಗಿದೆ ಎಂಬ ಸಂಶಯ ಜನರಲ್ಲಿ ಉಂಟಾಗಿದೆ. ಮೊದಲು ಇದಕ್ಕೆ ಉತ್ತರ ನೀಡಿ ಎಂದು ಆಗ್ರಹಿಸಿದ್ದಾರೆ.

ಉಡುಪಿ ಪೊಲೀಸರು ಘಟನೆ ನಡೆದಿರುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ದಿಢೀರ್ ಆಗಿ ವಿದ್ಯಾರ್ಥಿನಿಯರನ್ನು ವಜಾ ಗೊಳಿಸಲು ಕಾರಣ ಏನು, ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವಿಲ್ಲ. ಕೇರಳ ಮೂಲದ ವಿದ್ಯಾರ್ಥಿಗಳಾಗಿರುವುದರಿಂದ ಲವ್ ಜಿಹಾದ್ ಸಹಿತ, ವಿವಿಧ ವಿದ್ವಂಸಕ ಕೃತ್ಯ ಎಸಗಲು
ಇದೊಂದು ಬ್ಲ್ಯಾಕ್ ಮೈಲ್ ಷಡ್ಯಂತ್ರವಾಗಿರುವ ಸಾಧ್ಯತೆಯಿದೆ ಎಂದು ಶಾಸಕರು ಸಂಶಯ ವ್ಯಕ್ತಪಡಿಸಿದ್ದಾರೆ.

ಪ್ರಕರಣವನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳುವ ಬದಲು ಉಡಾಫೆಯಾಗಿ ವರ್ತಿಸಿದರೆ ಮುಂದೊಂದು ದಿನ ಕಂಟಕಪ್ರಾಯವಾಗಬಹುದು.
ಇದರ ಹಿಂದೆ ನಿಷೇಧಿತ ಸಂಘಟನೆ ಪಿ ಎಫ್ ಐ ಕೈವಾಡ ಇದ್ದರೆ ತನಿಖೆ ನಡೆಸಿ, ಹಿಂದೂ ಸಮುದಾಯದ ಯುವತಿಯರು ಬಲಿಪಶುವಾಗದಂತೆ ರಕ್ಷಣೆಯನ್ನು ನೀಡುವ ಕೆಲಸ ಮೊದಲು ಮಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಟ್ವೀಟ್ ಮಾಡಿ ಸರಕಾರ, ತನಿಖಾ ಇಲಾಖೆ ಹಾಗೂ ಸಾರ್ವಜನಿಕ ರನ್ನು ಎಚ್ಚರಿಸುವ ಕೆಲಸ ಮಾಡಿದ ಮಾತ್ರಕ್ಕೆ, ರಾತ್ರಿ ಸಮಯದಲ್ಲಿ ಯುವತಿಯ ಮನೆಗೆ ತೆರಳಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಾಗದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ, ಭಾರತೀಯ ಜನತಾ ಪಕ್ಷಯ ಭದ್ರ ಕೋಟೆಯಾಗಿರುವ ಕರಾವಳಿ ಭಾಗವನ್ನು ಗುರಿಯಾಗಿಸಿ ಇರಿಸಿಕೊಂಡು ಹಿಂದೂ ಕಾರ್ಯಕರ್ತರ ಗಡಿಪಾರು, ಸುಳ್ಳು ಕೇಸುಗಳನ್ನು ದಾಖಲಿಸಲು ಪೂರ್ವ ತಯಾರಿ ನಡೆಸಿದೆ.

ಇದರ ಮುಂದುವರಿದ ಭಾಗವಾಗಿ ಟ್ವೀಟ್ ಮಾಡಿದ ರಶ್ಮಿ ಸಮಂತ ಅವರನ್ನು ಕೂಡ ತನಿಖೆ ನೆಪದಲ್ಲಿ ಪ್ರಕರಣ ದಾಖಲಿಸಿ, ಇಡೀ ಪ್ರಕರಣವನ್ನು ತಿರುಚಲು ಮುಂದಾಗಿರುವಂತಿದೆ.
ಜಿಲ್ಲೆಯಲ್ಲಿ ಹಾಗೂ ಕರಾವಳಿಯಲ್ಲಿ ಸಂಘರ್ಷಮಯ ವಾತಾವರಣಕ್ಕೆ ಸರಕಾರ ಎಡೆ ಮಾಡಿಕೊಡಬಾರದು. ದ್ವೇಷ ರಾಜಕಾರಣದಿಂದ ಕಾನೂನು ಹದೆಗೆಟ್ಟಲ್ಲಿ ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೇ ಜವಾಬ್ದಾರಿಯಾಗಲಿದೆ
ಎಂದು ಡಾ. ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 137 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 285 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 192 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ