ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

ಸುರತ್ಕಲ್: ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ.

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ.

ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಆರೋಪಿಸಿದ್ದಾರೆ.

ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡಲಾಗಿತ್ತು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವಂತೆ, ಇದೀಗ ಪ್ರಕರಣ ತಿರುಚಲು ಹಾಗೂ ಏನೂ ಆಗಿಲ್ಲವೆಂಬತೆ ಮಾಡಲು ಮೊಬೈಲ್ ಅದಲು ಬದಲು ಮಾಡಲಾಗಿದೆ ಎಂಬ ಸಂಶಯ ಜನರಲ್ಲಿ ಉಂಟಾಗಿದೆ. ಮೊದಲು ಇದಕ್ಕೆ ಉತ್ತರ ನೀಡಿ ಎಂದು ಆಗ್ರಹಿಸಿದ್ದಾರೆ.

ಉಡುಪಿ ಪೊಲೀಸರು ಘಟನೆ ನಡೆದಿರುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ದಿಢೀರ್ ಆಗಿ ವಿದ್ಯಾರ್ಥಿನಿಯರನ್ನು ವಜಾ ಗೊಳಿಸಲು ಕಾರಣ ಏನು, ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವಿಲ್ಲ. ಕೇರಳ ಮೂಲದ ವಿದ್ಯಾರ್ಥಿಗಳಾಗಿರುವುದರಿಂದ ಲವ್ ಜಿಹಾದ್ ಸಹಿತ, ವಿವಿಧ ವಿದ್ವಂಸಕ ಕೃತ್ಯ ಎಸಗಲು
ಇದೊಂದು ಬ್ಲ್ಯಾಕ್ ಮೈಲ್ ಷಡ್ಯಂತ್ರವಾಗಿರುವ ಸಾಧ್ಯತೆಯಿದೆ ಎಂದು ಶಾಸಕರು ಸಂಶಯ ವ್ಯಕ್ತಪಡಿಸಿದ್ದಾರೆ.

ಪ್ರಕರಣವನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳುವ ಬದಲು ಉಡಾಫೆಯಾಗಿ ವರ್ತಿಸಿದರೆ ಮುಂದೊಂದು ದಿನ ಕಂಟಕಪ್ರಾಯವಾಗಬಹುದು.
ಇದರ ಹಿಂದೆ ನಿಷೇಧಿತ ಸಂಘಟನೆ ಪಿ ಎಫ್ ಐ ಕೈವಾಡ ಇದ್ದರೆ ತನಿಖೆ ನಡೆಸಿ, ಹಿಂದೂ ಸಮುದಾಯದ ಯುವತಿಯರು ಬಲಿಪಶುವಾಗದಂತೆ ರಕ್ಷಣೆಯನ್ನು ನೀಡುವ ಕೆಲಸ ಮೊದಲು ಮಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಟ್ವೀಟ್ ಮಾಡಿ ಸರಕಾರ, ತನಿಖಾ ಇಲಾಖೆ ಹಾಗೂ ಸಾರ್ವಜನಿಕ ರನ್ನು ಎಚ್ಚರಿಸುವ ಕೆಲಸ ಮಾಡಿದ ಮಾತ್ರಕ್ಕೆ, ರಾತ್ರಿ ಸಮಯದಲ್ಲಿ ಯುವತಿಯ ಮನೆಗೆ ತೆರಳಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಾಗದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ, ಭಾರತೀಯ ಜನತಾ ಪಕ್ಷಯ ಭದ್ರ ಕೋಟೆಯಾಗಿರುವ ಕರಾವಳಿ ಭಾಗವನ್ನು ಗುರಿಯಾಗಿಸಿ ಇರಿಸಿಕೊಂಡು ಹಿಂದೂ ಕಾರ್ಯಕರ್ತರ ಗಡಿಪಾರು, ಸುಳ್ಳು ಕೇಸುಗಳನ್ನು ದಾಖಲಿಸಲು ಪೂರ್ವ ತಯಾರಿ ನಡೆಸಿದೆ.

ಇದರ ಮುಂದುವರಿದ ಭಾಗವಾಗಿ ಟ್ವೀಟ್ ಮಾಡಿದ ರಶ್ಮಿ ಸಮಂತ ಅವರನ್ನು ಕೂಡ ತನಿಖೆ ನೆಪದಲ್ಲಿ ಪ್ರಕರಣ ದಾಖಲಿಸಿ, ಇಡೀ ಪ್ರಕರಣವನ್ನು ತಿರುಚಲು ಮುಂದಾಗಿರುವಂತಿದೆ.
ಜಿಲ್ಲೆಯಲ್ಲಿ ಹಾಗೂ ಕರಾವಳಿಯಲ್ಲಿ ಸಂಘರ್ಷಮಯ ವಾತಾವರಣಕ್ಕೆ ಸರಕಾರ ಎಡೆ ಮಾಡಿಕೊಡಬಾರದು. ದ್ವೇಷ ರಾಜಕಾರಣದಿಂದ ಕಾನೂನು ಹದೆಗೆಟ್ಟಲ್ಲಿ ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೇ ಜವಾಬ್ದಾರಿಯಾಗಲಿದೆ
ಎಂದು ಡಾ. ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ