ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

ಸುರತ್ಕಲ್: ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ.

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ.

ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಆರೋಪಿಸಿದ್ದಾರೆ.

ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡಲಾಗಿತ್ತು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವಂತೆ, ಇದೀಗ ಪ್ರಕರಣ ತಿರುಚಲು ಹಾಗೂ ಏನೂ ಆಗಿಲ್ಲವೆಂಬತೆ ಮಾಡಲು ಮೊಬೈಲ್ ಅದಲು ಬದಲು ಮಾಡಲಾಗಿದೆ ಎಂಬ ಸಂಶಯ ಜನರಲ್ಲಿ ಉಂಟಾಗಿದೆ. ಮೊದಲು ಇದಕ್ಕೆ ಉತ್ತರ ನೀಡಿ ಎಂದು ಆಗ್ರಹಿಸಿದ್ದಾರೆ.

ಉಡುಪಿ ಪೊಲೀಸರು ಘಟನೆ ನಡೆದಿರುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ದಿಢೀರ್ ಆಗಿ ವಿದ್ಯಾರ್ಥಿನಿಯರನ್ನು ವಜಾ ಗೊಳಿಸಲು ಕಾರಣ ಏನು, ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವಿಲ್ಲ. ಕೇರಳ ಮೂಲದ ವಿದ್ಯಾರ್ಥಿಗಳಾಗಿರುವುದರಿಂದ ಲವ್ ಜಿಹಾದ್ ಸಹಿತ, ವಿವಿಧ ವಿದ್ವಂಸಕ ಕೃತ್ಯ ಎಸಗಲು
ಇದೊಂದು ಬ್ಲ್ಯಾಕ್ ಮೈಲ್ ಷಡ್ಯಂತ್ರವಾಗಿರುವ ಸಾಧ್ಯತೆಯಿದೆ ಎಂದು ಶಾಸಕರು ಸಂಶಯ ವ್ಯಕ್ತಪಡಿಸಿದ್ದಾರೆ.

ಪ್ರಕರಣವನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳುವ ಬದಲು ಉಡಾಫೆಯಾಗಿ ವರ್ತಿಸಿದರೆ ಮುಂದೊಂದು ದಿನ ಕಂಟಕಪ್ರಾಯವಾಗಬಹುದು.
ಇದರ ಹಿಂದೆ ನಿಷೇಧಿತ ಸಂಘಟನೆ ಪಿ ಎಫ್ ಐ ಕೈವಾಡ ಇದ್ದರೆ ತನಿಖೆ ನಡೆಸಿ, ಹಿಂದೂ ಸಮುದಾಯದ ಯುವತಿಯರು ಬಲಿಪಶುವಾಗದಂತೆ ರಕ್ಷಣೆಯನ್ನು ನೀಡುವ ಕೆಲಸ ಮೊದಲು ಮಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಟ್ವೀಟ್ ಮಾಡಿ ಸರಕಾರ, ತನಿಖಾ ಇಲಾಖೆ ಹಾಗೂ ಸಾರ್ವಜನಿಕ ರನ್ನು ಎಚ್ಚರಿಸುವ ಕೆಲಸ ಮಾಡಿದ ಮಾತ್ರಕ್ಕೆ, ರಾತ್ರಿ ಸಮಯದಲ್ಲಿ ಯುವತಿಯ ಮನೆಗೆ ತೆರಳಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಾಗದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ, ಭಾರತೀಯ ಜನತಾ ಪಕ್ಷಯ ಭದ್ರ ಕೋಟೆಯಾಗಿರುವ ಕರಾವಳಿ ಭಾಗವನ್ನು ಗುರಿಯಾಗಿಸಿ ಇರಿಸಿಕೊಂಡು ಹಿಂದೂ ಕಾರ್ಯಕರ್ತರ ಗಡಿಪಾರು, ಸುಳ್ಳು ಕೇಸುಗಳನ್ನು ದಾಖಲಿಸಲು ಪೂರ್ವ ತಯಾರಿ ನಡೆಸಿದೆ.

ಇದರ ಮುಂದುವರಿದ ಭಾಗವಾಗಿ ಟ್ವೀಟ್ ಮಾಡಿದ ರಶ್ಮಿ ಸಮಂತ ಅವರನ್ನು ಕೂಡ ತನಿಖೆ ನೆಪದಲ್ಲಿ ಪ್ರಕರಣ ದಾಖಲಿಸಿ, ಇಡೀ ಪ್ರಕರಣವನ್ನು ತಿರುಚಲು ಮುಂದಾಗಿರುವಂತಿದೆ.
ಜಿಲ್ಲೆಯಲ್ಲಿ ಹಾಗೂ ಕರಾವಳಿಯಲ್ಲಿ ಸಂಘರ್ಷಮಯ ವಾತಾವರಣಕ್ಕೆ ಸರಕಾರ ಎಡೆ ಮಾಡಿಕೊಡಬಾರದು. ದ್ವೇಷ ರಾಜಕಾರಣದಿಂದ ಕಾನೂನು ಹದೆಗೆಟ್ಟಲ್ಲಿ ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೇ ಜವಾಬ್ದಾರಿಯಾಗಲಿದೆ
ಎಂದು ಡಾ. ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ