ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

ಸುರತ್ಕಲ್: ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ.

ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ.

ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಆರೋಪಿಸಿದ್ದಾರೆ.

ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡಲಾಗಿತ್ತು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವಂತೆ, ಇದೀಗ ಪ್ರಕರಣ ತಿರುಚಲು ಹಾಗೂ ಏನೂ ಆಗಿಲ್ಲವೆಂಬತೆ ಮಾಡಲು ಮೊಬೈಲ್ ಅದಲು ಬದಲು ಮಾಡಲಾಗಿದೆ ಎಂಬ ಸಂಶಯ ಜನರಲ್ಲಿ ಉಂಟಾಗಿದೆ. ಮೊದಲು ಇದಕ್ಕೆ ಉತ್ತರ ನೀಡಿ ಎಂದು ಆಗ್ರಹಿಸಿದ್ದಾರೆ.

ಉಡುಪಿ ಪೊಲೀಸರು ಘಟನೆ ನಡೆದಿರುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ದಿಢೀರ್ ಆಗಿ ವಿದ್ಯಾರ್ಥಿನಿಯರನ್ನು ವಜಾ ಗೊಳಿಸಲು ಕಾರಣ ಏನು, ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವಿಲ್ಲ. ಕೇರಳ ಮೂಲದ ವಿದ್ಯಾರ್ಥಿಗಳಾಗಿರುವುದರಿಂದ ಲವ್ ಜಿಹಾದ್ ಸಹಿತ, ವಿವಿಧ ವಿದ್ವಂಸಕ ಕೃತ್ಯ ಎಸಗಲು
ಇದೊಂದು ಬ್ಲ್ಯಾಕ್ ಮೈಲ್ ಷಡ್ಯಂತ್ರವಾಗಿರುವ ಸಾಧ್ಯತೆಯಿದೆ ಎಂದು ಶಾಸಕರು ಸಂಶಯ ವ್ಯಕ್ತಪಡಿಸಿದ್ದಾರೆ.

ಪ್ರಕರಣವನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳುವ ಬದಲು ಉಡಾಫೆಯಾಗಿ ವರ್ತಿಸಿದರೆ ಮುಂದೊಂದು ದಿನ ಕಂಟಕಪ್ರಾಯವಾಗಬಹುದು.
ಇದರ ಹಿಂದೆ ನಿಷೇಧಿತ ಸಂಘಟನೆ ಪಿ ಎಫ್ ಐ ಕೈವಾಡ ಇದ್ದರೆ ತನಿಖೆ ನಡೆಸಿ, ಹಿಂದೂ ಸಮುದಾಯದ ಯುವತಿಯರು ಬಲಿಪಶುವಾಗದಂತೆ ರಕ್ಷಣೆಯನ್ನು ನೀಡುವ ಕೆಲಸ ಮೊದಲು ಮಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಟ್ವೀಟ್ ಮಾಡಿ ಸರಕಾರ, ತನಿಖಾ ಇಲಾಖೆ ಹಾಗೂ ಸಾರ್ವಜನಿಕ ರನ್ನು ಎಚ್ಚರಿಸುವ ಕೆಲಸ ಮಾಡಿದ ಮಾತ್ರಕ್ಕೆ, ರಾತ್ರಿ ಸಮಯದಲ್ಲಿ ಯುವತಿಯ ಮನೆಗೆ ತೆರಳಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಾಗದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ, ಭಾರತೀಯ ಜನತಾ ಪಕ್ಷಯ ಭದ್ರ ಕೋಟೆಯಾಗಿರುವ ಕರಾವಳಿ ಭಾಗವನ್ನು ಗುರಿಯಾಗಿಸಿ ಇರಿಸಿಕೊಂಡು ಹಿಂದೂ ಕಾರ್ಯಕರ್ತರ ಗಡಿಪಾರು, ಸುಳ್ಳು ಕೇಸುಗಳನ್ನು ದಾಖಲಿಸಲು ಪೂರ್ವ ತಯಾರಿ ನಡೆಸಿದೆ.

ಇದರ ಮುಂದುವರಿದ ಭಾಗವಾಗಿ ಟ್ವೀಟ್ ಮಾಡಿದ ರಶ್ಮಿ ಸಮಂತ ಅವರನ್ನು ಕೂಡ ತನಿಖೆ ನೆಪದಲ್ಲಿ ಪ್ರಕರಣ ದಾಖಲಿಸಿ, ಇಡೀ ಪ್ರಕರಣವನ್ನು ತಿರುಚಲು ಮುಂದಾಗಿರುವಂತಿದೆ.
ಜಿಲ್ಲೆಯಲ್ಲಿ ಹಾಗೂ ಕರಾವಳಿಯಲ್ಲಿ ಸಂಘರ್ಷಮಯ ವಾತಾವರಣಕ್ಕೆ ಸರಕಾರ ಎಡೆ ಮಾಡಿಕೊಡಬಾರದು. ದ್ವೇಷ ರಾಜಕಾರಣದಿಂದ ಕಾನೂನು ಹದೆಗೆಟ್ಟಲ್ಲಿ ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೇ ಜವಾಬ್ದಾರಿಯಾಗಲಿದೆ
ಎಂದು ಡಾ. ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ