ಖರ್ಚು ಮಾಡಿದ್ದು 2 ಲಕ್ಷ, ಸಿಕ್ಕಿದ್ದು 10 ರೂಪಾಯಿ: ಇದು ಟೊಮೆಟೊ ಬೆಳೆದ ಚಿತ್ರದುರ್ಗದ ರೈತನ ಕಣ್ಣೀರ ಕಥೆ

ಬೆಂಗಳೂರು: ರೈತನೊಬ್ಬರು ಎರಡು ಲಕ್ಷ ರೂಪಾಯಿ ಖರ್ಚು ಮಾಡಿ 3ಎಕ್ರೆ ಜಮೀನಿನಲ್ಲಿ ಟೊಮೆಟೊ ಬೆಳೆದು ಕೇವಲ 10 ರುಪಾಯಿ ಪಡೆದ ರೈತನ ಕಣ್ಣೀರ ಕಥೆ ಇದಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದ ರೈತ ಲಕ್ಷ್ಮಣ್ ಎಂಬವರು ಸುಮಾರು ಎರಡು ಲಕ್ಷ ರೂಪಾಯಿ ಖರ್ಚು ಮಾಡಿ ಟೊಮೆಟೊ ಬೆಳೆದಿದ್ದು ಬೆಳೆ ಉತ್ತಮ ಇಳುವರಿ ಕೂಡ ಬಂದಿತ್ತು.

118 ಬಾಕ್ಸ್ ಟೊಮೆಟೊ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಸಾಗಿಸಿದ್ದರು. ಅಧಿಕ ಲಾಭದ ನಿರೀಕ್ಷೆಯಲ್ಲಿದ್ದ ರೈತ ಎಪಿಎಂಸಿ ಅಧಿಕಾರಿಗಳು ನೀಡಿದ ಬಿಲ್ ನೋಡಿ ದಂಗಾಗಿದ್ದಾರೆ. ಬೀಜ, ಗೊಬ್ಬರ, ಕಳೆ, ಕೂಲಿ, ಸಾಕಷ್ಟು ಖರ್ಚು ಮಾಡಿದ್ದರು.

1ಬಾಕ್ಸ್ ನಲ್ಲಿ 12kg ಟೊಮೆಟೊ 1kgಗೆ 4 ರುಪಾಯಿ ದರ 1416 kg ಟೊಮೆಟೊಗೆ 5664 ರುಪಾಯಿ ಸಿಗುತ್ತದೆ ಇದರಲ್ಲಿ ಕೋಲಾರ ಮಾರುಕಟ್ಟೆಗೆ ಟೊಮೆಟೊ ಹಣ್ಣನ್ನು ಕಳಿಸಲು ಟೆಂಪೋ ಬಾಡಿಗೆ-5130, ಕಮಿಷನ್ 416, ಕೂಲಿ-118 (ಮಾರುಕಟ್ಟೆಯಲ್ಲಿ 1ಬಾಕ್ಸ್ ಅನ್ಲೋಡ್ ಮಾಡಲು 1ರೂ 118 ಬಾಕ್ಸ್) ಖರ್ಚು ಕಳೆದು ಕೇವಲ 10 ರೂಪಾಯಿಯನ್ನು Apmcಯವರು ನೀಡಿದ್ದಾರೆ.

ಇದಲ್ಲದೆ ರೈತನಿಗೆ ಬೀಜ, ರಸಗೊಬ್ಬರ, ನೀರು, ವಿದ್ಯುತ್ ಬಿಲ್ಲು, ಕೂಲಿ, ಇವೆಲ್ಲವೂ ಹೆಚ್ಚುವರಿ ಹೊರೆ ಇದಕ್ಕಾಗಿ ಮಾಡಿದ ಸಾಲ ಬೇರೆಯೇ ಇದನ್ನು ತೀರಿಸಲು ಸಾಧ್ಯವಾಗದೇ ರೈತರು ಆತ್ಮಹತ್ಯೆಗಳಂತಹ ಘಟನೆಗಳಿಗೆ ಬಲಿಯಾಗೋದು

ಮಾರುಕಟ್ಟೆಯಲ್ಲಿ 1kg ಟೊಮೆಟೊ ದರ 25ರಿಂದ 30 ರುಪಾಯಿ: ಹೌದು ರೈತ ಕಷ್ಟಪಟ್ಟು ದುಡಿದು ಕೃಷಿ ಮಾಡಿ ಮಾರುಕಟ್ಟೆಗೆ ಸಾಗಾಟ ಮಾಡಿದಕ್ಕೆಲ್ಲ ಒಟ್ಟು ಸೇರಿ ಕೇವಲ 4 ರುಪಾಯಿ ಅವನ ಪಾಲಾಗುತ್ತೇ ಹಾಗಾದರೆ ಉಳಿದ 26 ರುಪಾಯಿ ಲಾಭ ಯಾರು ಪಡೆಯುತ್ತಾರೆ ಎಂಬುದನ್ನು ವಿವರಿಸಿ ಹೇಳಬೇಕಾಗಿಲ್ಲ! ಒಟ್ಟಾರೆ ರೈತನಿಗೆ ಕೊನೆಗೆ ಸಿಗೋದು ಬರೀ ಕಣ್ಣೀರು ಮಾತ್ರ ರೈತನ ಬೆವರು ದಲ್ಲಾಳಿಗೆ ಆದಾಯವಾಗಿ ಮಾರ್ಪಾಡಾಗುತ್ತದೆ.

ಈ 10 ರೂಪಾಯಿ ಬಿಲ್ಲನ್ನು ರೈತ ಲಕ್ಷ್ಮಣ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಕಳುಹಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ