ಕರ್ನಾಟಕದಲ್ಲಿ KSRTC ಗೆ “ಟ್ರೇಡ್‌ ಮಾರ್ಕ್” ಸಂಕಷ್ಟ! KSRTC ಇನ್ಮುಂದೆ ಕೇರಳದ ಪಾಲು

ಕಾಸರಗೋಡು: KSRTC ಎಂಬ ಹೆಸರನ್ನು ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ ಬಳಸುವಂತಿಲ್ಲ. ರಾಜ್ಯ ಸಾರಿಗೆ ಸಂಸ್ಥೆಗೆ ಕೇಂದ್ರ ‘ಟ್ರೇಡ್‌ ಮಾರ್ಕ್ ರಿಜಿಸ್ಟ್ರಿ’ ಇಂಥ ಶಾಕ್‌ ನೀಡಿದೆ. 7 ವರ್ಷಗಳ ಕಾನೂನು ಹೋರಾಟದಲ್ಲಿ KSRTC ಎನ್ನುವ ಹೆಸರು ಮತ್ತು ಲಾಂಛನವನ್ನು ತನ್ನ ಕೈ ವಶ ಮಾಡಿಕೊಳ್ಳುವಲ್ಲಿ ಕೇರಳ ಸಾರಿಗೆ ಸಂಸ್ಥೆ ಯಶಸ್ವಿಯಾಗಿದೆ.

ಎರಡು ರಾಜ್ಯಗಳ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಕೆಎಸ್ಸಾರ್ಟಿಸಿ ಎಂಬ ಹೆಸರಿನ ಪ್ರಯೋಗ ವರ್ಷಗಳಿಂದಲೇ ಚಾಲ್ತಿಯಲ್ಲಿತ್ತು. ಆದರೆ ಇದು ಕರ್ನಾಟಕದ್ದು ಮಾತ್ರ ಎಂಬುದಾಗಿ 2014ರಲ್ಲಿ ಕರ್ನಾಟಕ ಸಾರಿಗೆ ಕೇರಳಕ್ಕೆ ನೋಟೀಸ್‌ ನೀಡಿತ್ತು. ಆದರೆ ಕೇರಳ ಸಾರಿಗೆ ಸಂಸ್ಥೆ ಕೇಂದ್ರ ಸರಕಾರದ ‘ಟ್ರೇಡ್‌ ಮಾರ್ಕ್ ರಿಜಿಸ್ಟ್ರಿ’ಗೆ ಅರ್ಜಿ ಸಲ್ಲಿಸಿ ಅದು ತನಗೆ ಸೇರಿದ್ದೆಂದು ವಾದಿಸಿತ್ತು.

ಇದನ್ನು ಪುರಸ್ಕರಿಸಿರುವ ಭಾರತ ಸರಕಾರದ ಟ್ರೇಡ್‌ಮಾರ್ಕ್ ನೋಂದಣಿ ಪ್ರಾಧಿಕಾರ, ಸಾರಿಗೆ ಬಸ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಪದನಾಮ ಮತ್ತು ಲಾಂಛನವು ಕೇರಳಕ್ಕೆ ಮಾತ್ರ ಸೀಮಿತವೆಂದು ಆದೇಶಿಸಿದೆ. ಇದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತನ್ನ ಹೆಸರನ್ನು ಬದಲಿಸಬೇಕಾದ ಸ್ಥಿತಿ ಎದುರಾಗಿದೆ. ಜತೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್‌ಗಳು, ನಿಲ್ದಾಣಗಳು ಹಾಗೂ ಕಚೇರಿಗಳೂ ಸೇರಿದಂತೆ ಇತರೆಡೆ ಬಳಸಿರುವ ಕೆಎಸ್‌ಆರ್‌ಟಿಸಿ ಹೆಸರು, ಲಾಂಛನವನ್ನು ತೆಗೆಯಬೇಕಾಗಿದೆ.

ತಿರುವಾಂಕೂರು ರಾಜ್ಯ ಸಾರಿಗೆ ಇಲಾಖೆ (ಟಿಎಸ್‌ಟಿಡಿ) ರಚನೆಯಾದಾಗ ಬ್ರಿಟಿಷ್ ರಾಜನ ಅವಧಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು 1965 ರಲ್ಲಿ ರಚಿಸಲಾಯಿತು. ಕರ್ನಾಟಕವು ಕೆಎಸ್‌ಆರ್‌ಟಿಸಿ ಹೆಸರನ್ನು 1973 ರಿಂದ ಬಳಸಲಾರಂಭಿಸಿತು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಟ್ರೇಡ್​ ರಿಜಿಸ್ಟ್ರಿ ಕೇರಳದ ಪರ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸಾರಿಗೆ ಇಲಾಖೆ, ರಾಜ್ಯ ಸಾರಿಗೆ ಇಲಾಖೆಗೆ ಇನ್ಮುಂದೆ ಕೆಎಸ್​ಆರ್​​ಟಿಸಿ ಎಂದು ಬಳಸಬೇಡಿ ಎಂದು ನೋಟಿಸ್ ಜಾರಿಗೊಳಿಸಲು ನಿರ್ಧರಿಸಿದೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 209 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 54 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 52 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 48 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 89 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ