“ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”
ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…






