“ಸಸ್ಯಸಂಪತ್ತು ಬೆಳೆಸಿ ಸದೃಢ ಆರೋಗ್ಯ ವೃದ್ಧಿಸಿ” ಮರ-ಗಿಡಗಳನ್ನು ಬೆಳೆಸಿ ಪೋಷಿಸುವ ಕಾರ್ಯಕ್ಕೆ ಮುಂದಾಗಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ವ್ಯಾಪ್ತಿಯ ಕನ್ನಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು ಮಾತನಾಡುತ್ತಾ ಕಾಡು ಬೆಳೆದರೆ ನಾಡು ಉಳಿದಂತೆ ಎಂಬ ನಾಣ್ಣುಡಿಯಂತೆ ಮನುಷ್ಯನಿಗೆ ಅತ್ಯಂತ ಅವಶ್ಯಕವಾಗಿರುವ ಆಮ್ಲಜನಕವನ್ನು ಬಿಡುಗಡೆ ಮಾಡುವ ಗಿಡ-ಮರಗಳನ್ನು ಬೆಳಸಿ ಪೋಷಿಸಬೇಕು ಆದರೆ ಇತ್ತೀಚಿನ ದಿನಗಳಲ್ಲಿ ನಾವು ಶುದ್ಧ ಗಾಳಿಗಾಗಿ ಹಣ ಕೊಡುವ ದುಸ್ಥಿತಿ ನಿರ್ಮಾಣವಾಗಿದೆ. ಗಿಡ ಮರಗಳಿದ್ದಲ್ಲಿ ಉತ್ತಮ ಮಳೆ ಬೆಳೆಯಾಗುತ್ತದೆ. ಮನುಷ್ಯ ಆಧುನಿಕತೆಯ ಮೊರೆ ಹೋಗಿ ಗಿಡ ಮರಗಳನ್ನು ಕಡಿದು ನಾಶ ಮಾಡಿ ಪ್ರಕೃತಿಯ ಮುನಿಸಿಗೆ ಕಾರಣನಾಗಿದ್ದಾನೆ. ಈ ಕಾರಣದಿಂದಾಗಿಯೇ ಹೊಸ ಹೊಸ ಕಾಯಿಲೆಗಳು ವಕ್ಕರಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಈ ಕರೋನ ಮಹಾಮಾರಿಗೆ ಅದೆಷ್ಟೋ ಜನ ಆಮ್ಲಜನಕ ಸಿಗದೇ ಪ್ರಾಣ ತೆತ್ತಿದ್ದಾರೆ ಇನ್ನು ಮುಂದೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಗಂಡಾಂತರ ಖಚಿತ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ವರ್ಷ ರಾಜ್ಯಾದಾದ್ಯಂತ ಪರಿಸರ ಉಳಿಸಿ ಬೆಳೆಸುವ ಬಗ್ಗೆ ಜಾಗೃತಿ ಹಾಗೂ ಸಸಿ ನೆಟ್ಟು ಅದನ್ನು ಘೋಷಣೆ ಮಾಡುವ ಮೂಲಕ ಪರಿಸರದ ಬಗ್ಗೆ ಕಾಳಜಿ ವಹಿಸಿ ಸುಮಾರು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್. ಮೇಲ್ವಿಚಾರಕರಾದ ಆಶಾ. ಊರಿನ ಗಣ್ಯರಾದ ವೆಂಕಟೇಶ್. ಶಾಲಾ ಶಿಕ್ಷಕರಾದ ಚೌಡರೆಡ್ಡಿ. ಶ್ರೀನಿವಾಸ್. ಸೇವಾಪ್ರತಿನಿಧಿ ಭಾಗ್ಯಲಕ್ಷ್ಮಿ ಡೈರಿ ಕಾರ್ಯದರ್ಶಿ ರವಿ. ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ಮಂಗಳೂರು, ಜುಲೈ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು…

    Spread the love

    You Missed

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    • By admin
    • July 9, 2026
    • 24 views
    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    • By admin
    • July 7, 2026
    • 72 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    • By admin
    • July 7, 2026
    • 357 views
    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    • By admin
    • July 7, 2026
    • 75 views
    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    • By admin
    • July 6, 2026
    • 116 views
    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    • By admin
    • July 5, 2026
    • 118 views
    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ